ಗಡಿ ಭಾಗದ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಅನೀಲ


Team Udayavani, Jul 9, 2018, 11:26 AM IST

bid-2.jpg

ಭಾಲ್ಕಿ: ಗಡಿ ಭಾಗದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಡೆಯಬೇಕಿದೆ ಎಂದು ಸಾಪ್ಟ್ವೇರ್‌ ಅಭಿಯಂತರ ಅನೀಲ ದುಬಳಿಗುಂಡಿಕರ ಹೇಳಿದರು.

ಬೀರಿ(ಬಿ) ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು. ಅಲ್ಲದೇ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯಿಟ್ಟುಕೊಂಡು ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಬಸವ ಸೇಡಮಕರ್‌ ಮಾತನಾಡಿ, ತಾಲೂಕು ಶೈಕ್ಷಣಿಕವಾಗಿ ಪ್ರಗತಿ ಸಾಧಿ ಸುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ನಿಷ್ಕಾಳಜಿತನ ಮಾಡದೇ ಹೆಚ್ಚು ಪ್ರಯತ್ನ ಮಾಡಿದರೆ ಮತ್ತಷ್ಟು ಪ್ರತಿಭೆಗಳು ಹೊರಬರಲು ಸಾಧ್ಯವಾಗುತ್ತದೆ. ಗಡಿ ಭಾಗದ ಪ್ರಗತಿಗಾಗಿ ಜಿಲ್ಲೆಯ ಎಲ್ಲ ಇಂಜನೀಯರ್‌ಗಳು ಸೇರಿ “ನಮ್ಮ ಬೀದರ್‌ ಕ್ಷೇಮಾಭಿವೃದ್ಧಿ ಸಂಘ’ ಸ್ಥಾಪಿಸಿದ್ದು, ಶೈಕ್ಷಣಿಕ, ಕೃಷಿ, ಸಾಮಾಜಿಕ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ಸಂಘ ಗುರುತಿಸಿ ಪ್ರೋತ್ಸಾಹಿಸಲಿದೆ. ಜತೆಗೆ ಮುಂದಿನ ದಿನಗಳಲ್ಲಿ ಕೃಷಿ ಮೇಳ ಸೇರಿದಂತೆ ನಾನಾ ಕಾರ್ಯಾಗಾರ ಹಮ್ಮಿಕೊಂಡು ಜಿಲ್ಲೆಯ ಪ್ರಗತಿಗೆ ಸಂಘ ಕೈಜೊಡಿಸಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಗುರು ಯುವರಾಜ ದೇವಪ್ಪನೋರ್‌ ಮಾತನಾಡಿ, ಶೈಕ್ಷಣಿಕ ಪ್ರಗತಿಗಾಗಿ ಸರಕಾರ ಹಾಗೂ ಸಂಘ ಸಂಸ್ಥೆಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.
 
ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ರ್‍ಯಾಂಕ್‌ ಗಳಿಸಿದ ಭಾಗ್ಯಶ್ರೀ ಮಹಾಂತೇಶ ಕಾರಬಾರಿ, ನಿಕೀತಾ ಮಚೇಂದ್ರ ಮತ್ತು ಜಗದೇವಿ ತುಕಾರಾಮ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೇ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಶಬ್ದಕೋಶದ ಜತೆಗೆ ಸಸಿಗಳನ್ನು ವಿತರಿಸಲಾಯಿತು. ಕರವೇ ಅಧ್ಯಕ್ಷ ಸಂಗಮೇಶ ಗುಮ್ಮೆ, ಸಂಗಮೇಶ ತೋರಣೆ ಸೇರಿದಂತೆ ಶಿಕ್ಷಕರು ಹಾಜರಿದ್ದರು. ಶಬೀರ ನಿರೂಪಿಸಿದರು. ವಿಜಯಕುಮಾರ ಕುಲಕರ್ಣಿ ವಂದಿಸಿದರು. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.