ನಿರಗೂಡಿ ಮಲ್ಲಯ್ಯ ಮುತ್ಯಾ ಮೆರವಣಿಗೆ
Team Udayavani, Aug 16, 2017, 1:23 PM IST
ಬಸವಕಲ್ಯಾಣ: ಜೈಭಾರತ ಮಾತಾ ಸೇವಾ ಸಮಿತಿ ತಾಲೂಕು ಘಟಕದ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ನಿರಗೂಡಿಯ ಶ್ರೀ ಮಲ್ಲಯ್ಯ ಮುತ್ಯಾ ಅವರ ಭವ್ಯ ಮೆರವಣಿಗೆ ಜರುಗಿತು. ಅಲಂಕೃತ ವಾಹನದಲ್ಲಿ ಭಾರತ ಮಾತೆಯ ಭಾವಚಿತ್ರ, ಪುಷ್ಪಾಲಂಕಾರ ಮಾಡಿದ ತೆರೆದ ವಾಹನದಲ್ಲಿ ಆಸೀನರಾದ ಶ್ರೀಗಳನ್ನು ಸಸ್ತಾಪುರ ಬಂಗ್ಲಾದಿಂದ ತ್ರಿಪುರಾಂತ ಮಾರ್ಗವಾಗಿ ನಗರದ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ಮಾಡಲಾಯಿತು. ಭಕ್ತಿಗೀತೆ, ಜೈ ಘೋಷಗಳು ಮೊಳಗಿದವು. ಭಕ್ತರ ಕೈಯಲ್ಲಿ ರಾಷ್ಟ್ರಧ್ವಜಗಳು ಹಾರಡುತಿದ್ದವು. ದಾರಿಯುದ್ದಕ್ಕೂ ರಸ್ತೆ ಬದಿ ನಿಂತಿದ್ದ ಜನರು ಭಕ್ತಿ ಶ್ರದ್ಧೆಯಿಂದ ಸ್ವಾಗತಿಸಿ, ದರ್ಶನ ಪಡೆದರು. ದೇವಸ್ಥಾನದಿಂದ ಮುಖ್ಯ ರಸ್ತೆ ಮೂಲಕ ಬಿರಾದಾರ ಕಾಲನಿಯವರೆಗೆ ರ್ಯಾಲಿ ನಡೆದ ನಂತರ ಜೈಭಾರತ ಮಾತಾ ಸೇವಾ ಸಮಿತಿ ತಾಲೂಕು ಘಟಕದ ಉದ್ಘಾಟನೆ ಜರುಗಿತು. ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಶ್ರೀ ಮಲ್ಲಯ್ಯ ಮುತ್ಯಾ ಅವರು ಸೇವಾ ಸಮಿತಿಯ ತಾಲೂಕು ಘಟಕ ಉದ್ಘಾಟಿಸಿದರು. ಜಿಪಂ ಸದಸ್ಯ ಗುಂಡುರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಧೂಳಪ್ಪ ಬೇಲೂರ, ಅಂಬ್ರಿಶ ಕೋರಾಳೆ, ಅಮೃತ ದಾಮಿ, ಆಕಾಶ, ಆನಂದ ನಾಯಕ, ದೇವರಾಜ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ