ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ: ಬೀದರ್ ನಲ್ಲಿ ಇಬ್ಬರು ಅಧಿಕಾರಿಗಳ ಅಮಾನತು
Team Udayavani, Mar 19, 2023, 3:42 PM IST
ಔರಾದ್: ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಯನ್ನು ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆ ಸಂಬಂಧ ನೀತಿ ಸಂಹಿತೆ,ಚೆಕ್ ಪೋಸ್ಟಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಉದೇಶದಿಂದ ಸಭೆ ಆಯೋಜನೆ ಮಾಡಲಾಗಿತ್ತು ಸಭೆಗೆ ಗೈರಾದ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳಿಗೂ ಮಾಹಿತಿ ನೀಡದೆ ಇರುವ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.
ಸಹಾಯಕ ತೋಟಗಾರಿಕೆ ಅಧಿಕಾರಿ ರಾಜಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಪ್ರಥಮ ದರ್ಜೆ ಗುಮಾಸ್ತ ವಿಟ್ಠಲ ರಾವ್ ಎನ್ನುವರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಗೋವಿಂದ ರೆಡ್ಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಇಬ್ಬರು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ತಮ್ಮ ಕೇಂದ್ರ ಸ್ಥಾನವನ್ನು ಬಳಸುವಂತಿಲ್ಲ ವೆಂದು ಆದೇಶದಲ್ಲಿ ತಿಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್