ನವ ವಿವಾಹಿತೆ ಆತ್ಮಹತ್ಯೆ ; ಮಗಳ ಸಾವಿನ ಕುರಿತಾಗಿ ಹೆತ್ತವರಿಗೆ ಸಂಶಯ
Team Udayavani, May 25, 2020, 9:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ನವ ವಿವಾಹಿತೆ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವ ಕಲ್ಯಾಣದ ಈಶ್ವರ ನಗರದಲ್ಲಿ ನಡೆದಿದೆ.
19 ವರ್ಷ ಪ್ರಾಯದ ಅಂಜಲಿ ಹುಸೇನಿ ಎಂಬ ಗೃಹಿಣಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಹಾರಾಷ್ಟ್ರ ಉಮ್ಮರ್ಗಾದ ನಿವಾಸಿಯಾಗಿರುವ ಅಂಜಲಿಯ ವಿವಾಹ ಆರು ತಿಂಗಳ ಹಿಂದೆ ಹುಸೇನಿ ಎಂಬವರ ಜೊತೆ ನೆರವೇರಿತ್ತು.
ಇಂದು ನಸುಕಿನ ಜಾವ ಅಂಜಲಿ ಮೃತದೇಹ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ.
ಆದರೆ, ಅಂಜಲಿ ಪಾಲಕರು ತಮ್ಮ ಮಗಳ ಸಾವಿನ ಕುರಿತಾಗಿ ಸಂಶಯ ವ್ಯಕ್ತಪಡಿದ್ದಾರೆ. ಆಕೆಯ ಪತಿಯೇ ಅಂಜಲಿ ಸಾವಿಗೆ ಕಾರಣ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್