ಹಾಸ್ಟೆಲ್‌ನಲ್ಲಿ ಸೌಲಭ್ಯವಿಲ್ಲದೇ ಸಮಸ್ಯೆ


Team Udayavani, Dec 1, 2019, 12:33 PM IST

Bidar-tdy-1

ಹುಮನಾಬಾದ: ಪಟ್ಟಣದ ಆರ್‌ಟಿಒ ಚೆಕ್‌ಪೋಸ್ಟ್‌ ಪಕ್ಕದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಮೂಲಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ವಿದ್ಯಾರ್ಥಿ ವಸತಿ ನಿಲಯದಲ್ಲಿ ಬೇಡಿಕೆಗೆ ತಕ್ಕಂತೆ ಸೌಲಭ್ಯವಿಲ್ಲದೇ ಬಡ ವಿದ್ಯಾರ್ಥಿಗಳುಅನುಭವಿಸುತಿದ್ದ ಸಮಸ್ಯೆ ಅರಿತು ಶಾಸಕ ರಾಜಶೇಖರ ಪಾಟೀಲ ಅವರು ಸರ್ಕಾರದಮೇಲೆ ಒತ್ತಡ ಹೇರಿ 6 ವರ್ಷಗಳ ಹಿಂದೆಯಷ್ಟೇ 2 ಕೋಟಿಗೂ ಅ ಧಿಕ ಅನುದಾನ ತಂದು ಕಟ್ಟಡವನ್ನೇನೋ ನಿರ್ಮಿಸಲಾಯಿತು. ಆದರೆಹಲವು ಮೂಲಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ.

ಸ್ನಾನಕ್ಕೆ ತಣ್ಣೀರು: ವಿದ್ಯಾರ್ಥಿಗಳ ಸ್ನಾನಕ್ಕಾಗಿ ಬಿಸಿನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 6ತಿಂಗಳ ಹಿಂದೆಯೇ ಸೋಲಾರ್‌ ಯಂತ್ರಗಳನ್ನುಅಳವಡಿಸಲಾಗಿದೆ. ಆದರೆ ಸಂಬಂಧಪಟ್ಟ ಗುತ್ತಿಗೆದಾರರು ಸಂಪರ್ಕ ಕೊಡದಿರುವ ಕಾರಣವಿದ್ಯಾರ್ಥಿಗಳು ನಡುಗುವ ಚಳಿಯನ್ನು ಲೆಕ್ಕಿಸದೇ ಪ್ರತಿನಿತ್ಯ ತಣ್ಣೀರಿನ ಸ್ನಾನ ಮಾಡುತ್ತಿರುವ ಕಾರಣ ಅದೆಷ್ಟೋ ವಿದ್ಯಾರ್ಥಿಗಳು ಶೀತ ಮತ್ತು ಜ್ವರದ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಕೊಳವೆಬಾವಿ ನೀರು: ಲಕ್ಷಾಂತರ ವೆಚ್ಚ ಮಾಡಿ ಹಲವು ತಿಂಗಳ ಹಿಂದೆಯೇ ವಸತಿ ನಿಲಯದಲ್ಲಿ ಶುದ್ಧ ಕುಡಿಯುವನೀರಿನ ಯಂತ್ರ ತಂದಿಟ್ಟಿದ್ದಾರೆ. ಅದಕ್ಕೂಸಂಪರ್ಕ ಕೊಡದಿರುವ ಕಾರಣ ವಿದ್ಯಾರ್ಥಿಗಳುಪರ್ಯಾಯ ವ್ಯವಸ್ಥೆ ಇಲ್ಲದೇ ಅನಿವಾರ್ಯವಾಗಿ ಕೊಳವೆಬಾವಿ ನೀರನ್ನೇ ಕುಡಿಯುತ್ತಿದ್ದು, ಇದರಿಂದಲೂ ವಿವಿಧ ಕಾಯಿಲೆಗಳು ಬರುತ್ತಿವೆಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.

ಬಿಸಿ ನೀರು, ಶುದ್ಧ ಕುಡಿಯುವ ನೀರು ಕೊಡುವುದು ಬಿಟ್ಟರೆ ಊಟ, ಉಪಹಾರ ಚಹಾ ಸೇರಿದಂತೆ ಉಳಿದೆಲ್ಲ ಆಹಾರ ಪದಾರ್ಥ ಳನ್ನುಸರ್ಕಾರದ ನಿಯಮಾನುಸಾರ ವಿತರಿಸುತ್ತಿದ್ದಾರೆ. ಆದರೆ ಓದಿಗೆ ತೊಂದರೆ ಆಗದ ರೀತಿಯಲ್ಲಿ ಸಕಾಲಕ್ಕೆ ವಿತರಿಸಿದರೇ ಇನ್ನೂ ಹೆಚ್ಚು ಅನುಕೂಲ ಆಗುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ಆಹಾರದ ಜೊತೆಗೆ ಅತ್ಯಂತ ಅವಶ್ಯವಿರುವ ಶುದ್ಧ ಕುಡಿಯುವ ನೀರಿನ ಸೌಲಭ್ಯವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಸ್ನಾನಕ್ಕೆ ಬೇಸಿಗೆಯಲ್ಲಿ ತಣ್ಣೀದಾರೆ ಓಕೆ ಅಡ್ಜಸ್ಟ್‌ ಮಾಡಿಕೊಳ್ಳುತ್ತೇವೆ. ಆದರೇ ಮಳೆಗಾಲ ಮತ್ತು ಚಳಿಗಾಲದಲ್ಲಿ ಹೇಗೆ ತಾನೆ ಹೊಂದಿಕೊಳ್ಳಲು ಸಾಧ್ಯ. ಚಳಿ ಸಹಿಸಲಾಗದೇ ಏಳುವುದಕ್ಕೆ ವಿಳಂಬ ಆಗುತ್ತಿರುವ ಕಾರಣಸಕಾಲಕ್ಕೆ ಕಾಲೇಜಿಗೆ ತೆರಳಲು ಸಾಧ್ಯವಾಗದೇಪಾಠ ಪ್ರವಚನದಿಂದ ವಂಚಿತರಾಗುತ್ತಿದ್ದೇವೆ. ಈಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು ಎನ್ನುತ್ತಾರೆ ವಸತಿ ನಿಲಯದ ವಿದ್ಯಾರ್ಥಿಗಳು. ಇನ್ನಾದರೂ ಅನಗತ್ಯವಾಗಿ ವಿಳಂಬಿಸದೇಅಳವಡಿಸಿದ ಯಂತ್ರಗಳು ಹಾಳಾಗುವ ಮುನ್ನಸಂಬಂಧಪಟ್ಟ ಅಧಿ ಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಶೀಘ್ರ ಬಗೆಹರಿಸಬೇಕೆಂಬ ವಿದ್ಯಾರ್ಥಿ,ಪಾಲಕರ ಬೇಡಿಕೆ ಯಾವಾಗ ಬಗೆಹರಿಸುತ್ತಾರೋ ಕಾದು ನೋಡಬೇಕು.

 

-ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.