ಕಾಂಗ್ರೆಸ್‌ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ


Team Udayavani, Aug 14, 2018, 6:25 AM IST

180813kpn92.jpg

ಬೀದರ: “ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಗಿಸುವುದಾಗಲಿ, ಅಳಿಸುವುದಾಗಲಿ ಯಾರಿಂದಲೂ ಸಾಧ್ಯವಿಲ್ಲ’ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಕಾಂಗ್ರೆಸ್‌ ಪಕ್ಷದಿಂದ ಏರ್ಪಡಿಸಲಾಗಿದ್ದ ಜನಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಳಿಸುತ್ತೇವೆ ಎಂದು ಬಿಜೆಪಿ ನಾಯಕರು ಹೊರಟಿದ್ದಾರೆ. ಆದರೆ, ಇದು ಸಾಧ್ಯವಿಲ್ಲ. ಮುಂಬರುವ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಪಕ್ಷಕ್ಕೆ ಮಹತ್ವದ್ದಾಗಿದೆ. ಮೂರು ವಿಷಯಗಳಿಗಾಗಿ ದೇಶದ ಜನರು ಕಾಂಗ್ರೆಸ್‌ ಬೆಂಬಲಿಸಬೇಕಾಗಿದೆ. ಸಂವಿಧಾನದ ರಕ್ಷಣೆ, ಪ್ರಜಾತಂತ್ರ ವ್ಯವಸ್ಥೆ ಉಳಿವು ಹಾಗೂ ಜಾತ್ಯತೀತವಾಗಿ ಎಲ್ಲರೂ ಏಕತೆಯಿಂದ ಇರಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಕು ಎಂದರು.

371(ಜೆ) ಕಲಂ ಅನುಷ್ಠಾನಕ್ಕೆ ಶ್ರಮಿಸಿದ ರಾಹುಲ್‌ ಗಾಂಧಿ ಅವರ ಋಣ ಈ ಭಾಗದವರ ಮೇಲಿದೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಹೈಕ ಭಾಗದ ಐದು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂದರ್ಭದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ , ಕೇಂದ್ರ ಸರ್ಕಾರ ಹೇಗೆ ದೇಶದ ಹಣ ಲೂಟಿ ಮಾಡುತ್ತಿದೆ ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ. ದೇಶದ ಸ್ಥಿತಿಗತಿ ಪ್ರಜೆಗಳಿಗೆ ತಿಳಿಸುವ ಕೆಲಸ ಮಾಡಿದ್ದಾರೆ. ಆದರೆ, ರಾಹುಲ್‌ ಅವರ ಪ್ರಶ್ನೆಗಳಿಗೆ ಇಂದಿಗೂ ಉತ್ತರ ನೀಡಿಲ್ಲ ಎಂದರು.

ರಾಹುಲ್‌ ಪ್ರಧಾನಿ ಖಚಿತ: ಸಿದ್ದರಾಮಯ್ಯ
ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಗೆಲುವು ಸಾಧಿಸಿ ಪ್ರಧಾನಿಯಾಗುತ್ತಾರೆ. ಅಲ್ಲದೇ, ರೈತರ ಸಾಲ ಮನ್ನಾ ಕೂಡ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಜನಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನುಡಿದಂತೆ ನಡೆಯುವ ಪಕ್ಷ. ಅದೇ ರೀತಿ ರಾಹುಲ್‌ ಕೂಡ ನುಡಿದಂತೆ ನಡೆಯುವವರಾಗಿದ್ದಾರೆ. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ರೈತರ ಸಂಕಷ್ಟ ಅರಿತು ಸಹಕಾರ ಬ್ಯಾಂಕ್‌ಗಳ ಸಾಲಮನ್ನಾ ಮಾಡುವುದಾಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲದಲ್ಲಿ ಕೂಡ ಅರ್ಧಭಾಗ ರಾಜ್ಯ ಸರ್ಕಾರ ಉಳಿದ ಅರ್ಧಭಾಗ ಕೇಂದ್ರದಿಂದ ನೀಡಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆ. ಆದರೂ ಮೋದಿ ಅವರು ಒಂದು ಪೈಸೆ ನೀಡಲು ಒಪ್ಪಿಲ್ಲ ಎಂದರು.

ಲೋಕಸಭೆಯಲ್ಲಿ ರಾಹುಲ್‌ ಗಾಂ ಧಿ ಮಾತನಾಡಿ ಮೋದಿ ಅವರು ದೇಶದ ಚೌಕಿದಾರರಾಗಿ ಕೆಲಸ ಮಾಡದೇ ದೇಶದ ಭ್ರಷ್ಟಾಚಾರದ ಭಾಗಿದಾರಾಗಿದ್ದಾರೆ ಎಂದು ಆರೋಪಿಸಿದರು ಕೂಡ ಅದಕ್ಕೆ ಇಂದಿಗೂ ನರೇಂದ್ರ ಮೋದಿ ಉತ್ತರ ನೀಡಿಲ್ಲ ಎಂದರು.

ಚುನಾವಣೆ ಸಂದರ್ಭದಲ್ಲಿ ಅನೇಕ ಭರವಸೆ ನೀಡುವ ಮೂಲಕ ಅ ಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ, ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಬಿಜೆಪಿಯ 17 ಸಂಸದರು ಇದ್ದಾರೆ. ಸದನದಲ್ಲಿ ಒಮ್ಮೆಯಾದರೂ ಕರ್ನಾಟಕದ ಅಭಿವೃದ್ಧಿ ಕುರಿತು ಮಾತಾಡಿದ್ದಾರೆಯೇ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿ°ಸಿದರೆ ಇಂದಿಗೂ ಉತ್ತರ ಬಂದಿಲ್ಲ.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.