ಸಂವಿಧಾನ ಬದಲು ಯಾರಿಂದಲೂ ಸಾಧ್ಯವಿಲ್ಲ: ಖೂಬಾ


Team Udayavani, Jan 3, 2022, 1:04 PM IST

15constitution

ಬೀದರ: ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿತ ಭಾರತದ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಭೀಮಾ ಕೋರೆಗಾಂವ ಸೇನೆ ರಾಜ್ಯ ಘಟಕದಿಂದ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಆಯೋಜಿಸಿದ್ದ ಭೀಮಾ ಕೋರೆಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್‌ ಬರೆದ ಸಂವಿಧಾನ ದಲಿತರಿಗಾಗಿ ಅಷ್ಟೇಯಲ್ಲ, ದೇಶದ ಎಲ್ಲ ನಾಗರಿಕರ ಎಳ್ಗೆಗಾಗಿ ರಚನೆಯಾಗಿದೆ. ಸರ್ವರಿಗೆ ಸಮಾನತೆ, ಪ್ರಜಾಪ್ರಭುತ್ವ ಎತ್ತಿ ಹಿಡಿದ ಮಹಾನಾಯಕರಾಗಿದ್ದಾರೆ ಎಂದರು.

ಭೀಮಾ ಕೋರೆಗಾಂವ ಘಟನೆಯನ್ನು ಅಂಬೇಡ್ಕರರ ದೃಷ್ಟಿಕೋನದಲ್ಲಿ ನೋಡುವ ಅಗತ್ಯವಾಗಿದೆ. ಇಲ್ಲಿ ಯಾರೂ ಓಟ್‌ ಬ್ಯಾಂಕ್‌ ಅಲ್ಲ. ಒಂದೇ ಸಮುದಾಯದಿಂದ ದೇಶ ನಡೆಯಲ್ಲ. ಇಲ್ಲಿ ಎಲ್ಲ ಧರ್ಮ, ಜಾತಿಗಳ ಹಾಗೂ ಸಮುದಾಯಗಳ ಸಹಕಾರ, ಬೆಂಬಲ ಅಗತ್ಯ ಎಂದರು.

ಹಕ್ಯಾಳ ಬುದ್ಧಭೂಮಿಯ ಶ್ರೀ ಧಮ್ಮನಾಗ ಭಂತೆಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭೀಮಾ ಕೋರೆಗಾಂವ ವಿಜಯೋತ್ಸವ ದಲಿತರಗಷ್ಟೇ ಸೀಮಿತವಲ್ಲ. ಅಲ್ಲಿ ಹುತಾತ್ಮರಾಗಿದ್ದ 500 ಜನರಲ್ಲಿ 23 ಜನ ದಲಿತರು, 16 ಮರಾಠಿಗರು, 8 ಜನ ಮುಸ್ಲಿಮ ಮತ್ತು 2 ಕ್ರೈಸ್ತರು ಸಹ ಸೇರಿದ್ದರು ಎಂದು ತಿಳಿಸಿದರು.

ಹಿರಿಯ ದಲಿತ ಹೋರಾಟಗಾರ ಬಿ. ಗೋಪಾಲ ಮಾತನಾಡಿದರು. ಸೇನೆಯ ರಾಜ್ಯಾಧ್ಯಕ್ಷ ದೇವೇಂದ್ರ ಸೋನಿ ಅಧ್ಯಕ್ಷತೆ ವಹಿಸಿದ್ದರು. ಸೇನೆ ಜಿಲ್ಲಾಧ್ಯಕ್ಷ ರವಿ ಭೂಸಂಡೆ, ಅಂಬಾದಾಸ ಗಾಯಕವಾಡ, ಸಂಗು ಚಿದ್ರಿ, ರಾಜು ಜಯಂ, ತುಕಾರಾಮ ಕರಾಟೆ, ಅರಹಂತ ಸಾವಳೆ, ಸೈಯ್ಯದ್‌ ವಹೀದ್‌ ಲಖನ್‌, ಕಪಿಲ ಗೋಡಬಲೆ, ಮಹೇಶ ಮೈಲಾರಿ, ಸಂಗಪ್ಪ ಚಿದ್ರಿ, ಶಾಲಿವಾನ ಬಡಿಗೇರ, ಪ್ರಫುಲ್‌ ಸೋನಿ, ವೆಂಕಟ ಚಿದ್ರಿ, ಸಚಿನ ಗಿರಿ, ಗುಣವಂತ ಭಾವಿಕಟ್ಟಿ, ವಿಲಾಸ ಸಿಂಗಾರೆ, ಜಯಭೀಮ, ಸುದರ್ಶನ, ಸಿದ್ಧಾರ್ಥ ಇದ್ದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.