ಇನ್ನೂ ಭರ್ತಿಯಾಗಲಿಲ್ಲ ಕಾರಂಜಾ ಜಲಾಶಯ


Team Udayavani, Aug 21, 2018, 12:56 PM IST

gul-5.jpg

ಬೀದರ: ಅರ್ಧ ಮಳೆಗಾಲ ಮುಗಿದರೂ ಕೂಡ ಇಂದಿಗೂ ಕಾರಂಜಾ ಜಲಾಶಯಕ್ಕೆ ಒಳ ಹರಿವು ಬಂದಿಲ್ಲ. ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ. ಮುನಿದ ಮುಂಗಾರಿಗೆ ಜಿಲ್ಲೆಯ ರೈತ ಮಾತ್ರ ಹೈರಾಣಾಗಿಲ್ಲ. ತುಂತುರು ಮಳೆ ಹೀಗೇ ಮುಂದುವರಿದರೆ ಬೀದರ್‌ ನಗರ, ಹುಮನಾಬಾದ, ಭಾಲ್ಕಿ, ಚಿಟಗುಪ್ಪ ಪಟ್ಟಣಗಳು ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾರಂಜಾ ಜಲಾಶಯದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಈ ವರ್ಷ ಕಾರಂಜಾಕ್ಕೆ ಒಳಹರಿವು ಬಂದಿಲ್ಲ. 2016ರಲ್ಲಿ ಸುರಿದ ಉತ್ತಮ ಮಳೆಯಿಂದ ಜಲಾಶಯ ತುಂಬಿ ಹರಿದಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಈಶ್ವರ ಖಂಡ್ರೆ ಅವರು ಜಲಾಶಯಕ್ಕೆ ಬಾಗಿನ ಸಲ್ಲಿಸಿದ್ದರು. ಕಳೆದ ವರ್ಷ 2017ರಲ್ಲಿ ಕೂಡ ಸರಾಸರಿ ಮಳೆ ಸುರಿದಿತ್ತು. ಆದರೆ, ಈ ವರ್ಷ ಮಳೆ ಕೊರತೆ ಎದುರಾಗಿದ್ದು, ಕುಡಿಯುವ ನೀರಿಗೂ ಸಮಸ್ಯೆ ಉಲ್ಬಣಗೊಳ್ಳಬಹುದೇ ಎಂಬ ಚರ್ಚೆಗಳು ನಡೆಯುತ್ತಿವೆ.

ಸದ್ಯ ಕಾರಂಜಾ ಜಲಾಶಯಕ್ಕೆ ಈ ಬಾರಿ ಒಳಹರಿವು ಇಲ್ಲ ಮತ್ತು ಹೊರ ಹರಿವೂ ಇಲ್ಲ. ಅರ್ಧ ಭಾಗ ಮಾತ್ರ ನೀರು ಸಂಗ್ರಹವಿದೆ. ಉತ್ತಮ ಮಳೆ ಬಿದ್ದರೆ ಮಾತ್ರ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ಜಿಲ್ಲೆಯ ಏಕಮಾತ್ರ ನೀರಾವರಿ ಯೋಜನೆಯಾದ ಕಾರಂಜಾ ಜಲಾಶಯ ರೈತರ ಹೊಲಗಳಿಗೆ ನೀರು ಉಣಿಸುವ ಬದಲು ಸದ್ಯ ಕುಡಿಯುವ ನೀರು ಮಾತ್ರ ಪೂರೈಸುವ ಕಾರ್ಯ ನಿರ್ವಹಿಸುತ್ತಿದೆ. 

ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 7.691 ಟಿಎಂಸಿ ಇದ್ದು, 7.316 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಇದೆ. ಆಗಸ್ಟ್‌ 20ರ ವರಗೆ ಜಲಾಶಯದಲ್ಲಿ ಒಟ್ಟು 3.795 ಟಿಎಂಸಿ ನೀರು ಸಂಗ್ರಹವಿದ್ದು, ಈ ಪೈಕಿ 0.374 ಟಿಎಂಸಿ ಡೆಡ್‌ ಸ್ಟೋರೇಜ್‌ ಇದೆ. ಕಳೆದ ವರ್ಷದ ಆಗಸ್ಟ್‌ ಹೋಲಿಸಿದರೆ ಜಲಾಶಯದಲ್ಲಿ 4.587 ನೀರಿನ ಸಂಗ್ರಹವಿತ್ತು. ಅಂದರೆ, 0.792 ಟಿಎಂಸಿ ನೀರಿನ ಸಂಗ್ರಹ ಕೊರತೆ ಇದೆ ಎಂದು ಕಾರಂಜಾ ಜಲಾಶಯದ ಅಧಿಕಾರಿ ಆನಂದಕುಮಾರ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅರ್ಧಕ್ಕಿಂತ ಹೆಚ್ಚು ಮಳೆಗಾಲ ಮುಗಿದಿದ್ದು, ಇನ್ನೇನಿದ್ದರೂ ಆಗಸ್ಟ್‌ ಕಡೇ ವಾರ ಹಾಗೂ ಸೆಪ್ಟೆಂಬರ್‌ ತಿಂಗಳು ಮಾತ್ರ ಬಾಕಿ ಇದೆ. ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಜಿಲ್ಲೆಯ ಬೆಳೆಗಳಿಗೂ ಸಾಕಷ್ಟು ಹಿನ್ನಡೆ ಉಂಟಾಗಿದೆ. ಹಾಗೆ, ಕಾರಂಜಾ ಜಲಾಶಯ ಕೂಡ ಭರ್ತಿಯಾಗದಿರುವುದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಸದ್ಯ ಹುಮನಾಬಾದ, ಚಿಟಗುಪ್ಪ ಸೇರಿದಂತೆ ಕೆಲವು ಕಡೆಗಳಲ್ಲಿ ಮೂರು ದಿನಕ್ಕೆ ಒಂದು ಬಾರಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಹಾಗೆ ನೋಡಿದರೆ ಜಿಲ್ಲೆಯಲ್ಲಿ ಮುಂಗಾರು ಅಬ್ಬರಕ್ಕಿಂತ ಕಡೆ ತಿಂಗಳುಗಳಾದ ಆಗಸ್ಟ್‌ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲೇ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುವುದು ವಾಡಿಕೆ. ಹಾಗಾಗಿ, ಇನ್ನೂ ಸೆಪ್ಟೆಂಬರ್‌ ತಿಂಗಳು ಬಾಕಿ ಇದ್ದು, ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ.

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.