ಹಿಂಗಾರು ಬೆಳೆ ವಿವರ ದಾಖಲಿಸಲು ಸೂಚನೆ
Team Udayavani, Dec 24, 2020, 4:02 PM IST
ಸುರಪುರ: 2020-21 ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಕಾರ್ಯ ಡಿ. 10ರಿಂದ ಆರಂಭಿಸಿದ್ದು,ಮುಕ್ತಾಯ ಹಂತಕ್ಕೆ ಬರಲಾಗಿದೆ.ಆದ್ದರಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ವಿವರ ದಾಖಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಹೇಳಿದರು.
ಸಮೀಪದ ಶೆಳ್ಳಗಿ ಗ್ರಾಮದಲ್ಲಿ ಜಮೀನುಗಳಿಗೆ ಭೇಟಿ ನೀಡಿ ಹಿಂಗಾರು ಬೆಳೆಗಳ ಮಾಹಿತಿ ದಾಖಲಿಸಿಕೊಂಡು ಮಾತನಾಡಿದ ಅವರು, ತಾಲೂಕಿನಾದ್ಯಂತ ಬೆಳೆಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ.ಸರಕಾರದ ಆದೇಶದ ಅನುಸಾರ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿರೈತರು ಸ್ವತಃ ತಾವೇ ತಮ್ಮ ಜಮೀನಿನವಿವರವನ್ನು ದಾಖಲಿಸಿಕೊಳ್ಳಬಹುದು ಎಂದರು.
ಕೃಷಿ ಅಧಿಕಾರಿಗಳೇ ಬಂದುದಾಖಲಿಸಿಕೊಳ್ಳಬೇಕು ಎಂಬ ನಿಯಮವೇನು ಇಲ್ಲ. ರೈತರೇ ತಮ್ಮ ಹೊಲದಲ್ಲಿನ ಮಾಹಿತಿಯನ್ನು ಹಿಂಗಾರು ಬೆಳೆ ಸಮೀಕ್ಷೆ 2020-21ಎಂಬ ಹೆಸರಿನ ಮೊಬೈಲ್ಆ್ಯಪ್ ಅನ್ನು ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿಕೊಂಡು ತುಂಬಬಹುದು. ಆಧಾರ್ ಕಾರ್ಡ್ ನ್ನು ಸ್ಕ್ಯಾನ್ ಮಾಡಿಕೊಳ್ಳಬೇಕು. ತಮ್ಮ ಮೊಬೈಲ್ ಸಂಖ್ಯೆ, ಒಟಿಪಿಯನ್ನು ನಮೂದಿಸಿಕೊಂಡು ಸಕ್ರಿಯಗೊಳಿಸಿಕೊಂಡು ನಿಗದಿತ ಅವಧಿಯ ಒಳಗಾಗಿ ಬೆಳೆ ವಿವರ ದಾಖಲಿಸಬೇಕು ಎಂದು ತಿಳಿಸಿದರು. ಕೃಷಿ ಅಧಿಕಾರಿ ಭೀಮರಾಯ, ಗ್ರಾಮದ ರೈತರು ಇದ್ದರು.
ಸರ್ಕಾರದ ಯೋಜನೆ ಸದ್ಬಳಕೆಯಾಗಲಿ :
ಸೈದಾಪುರ: ಸರಕಾರದಿಂದ ದೊರೆಯುವ ಯೋಜನೆಗಳ ಸರಿಯಾದ ಸದುಪಯೋಗ ನಮ್ಮದಾಗಬೇಕು.ಇದಕ್ಕಾಗಿ ಇಲಾಖೆಯಿಂದ ಕಾಲ ಕಾಲಕ್ಕೆನೀಡಲಾದ ಆದೇಶಗಳನ್ನು ಸಂಸ್ಥೆಯವರುಸರಿಯಾದ ರೀತಿಯಲ್ಲಿ ಪಾಲಿಸಬೇಕು ಎಂದು ಹಿಂದುಳಿದ ವಲಯ ವರ್ಗಗಳಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಯಲಯದ ಮೇಲ್ವಿಚಾರಕ ಅನಂತಕುಮಾರ ಹೇಳಿದರು.
ಪಟ್ಟಣದ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಶುಲ್ಕ ವಿನಾಯಿತಿ ಯೋಜನೆ ಅನುಷ್ಠಾನ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ವಿವಿಧ ಯೋಜನೆಗಳಿವೆ.ಅವುಗಳ ಸರಿಯಾದ ಸದುಪಯೋಗ ವಾಗಬೇಕಾದರೆ ಸಂಸ್ಥೆಯ ಮುಖ್ಯಸ್ಥರುಇಲಾಖೆಯ ಮಾರ್ಗದರ್ಶನ ಹಾಗೂ ಸಲಹೆಯೊಂದಿಗೆ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ