32 ಕೋಟಿ ಸುರಿದರೂ ಸಮಸ್ಯೆಗಿಲ್ಲ ಮುಕ್ತಿ!


Team Udayavani, Feb 13, 2019, 11:54 AM IST

13-february-27.jpg

ಔರಾದ: ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗಾಗಿ ಸರ್ಕಾರ 32 ಕೋಟಿ ರೂ. ಅನುದಾನ ಖರ್ಚು ಮಾಡಿದರೂ ಇಲ್ಲಿನ ನಿವಾಸಿಗಳಿಗೆ ನೀರಿನ ಸಮಸ್ಯೆಯಿಂದ ಮುಕ್ತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಪ್ರತಿ ವರ್ಷದ ಬೇಸಿಗೆ ಸಂದರ್ಭದಲ್ಲಿ ನೀರಿನ ಸಮಸ್ಯೆ ಎದರಿಸುವಂತಾಗಿದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿ ಯಲ್ಲಿ ಅಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ತಾಲೂಕಿನ ಹಲಳ್ಳಿ ಗ್ರಾಮದಿಂದ ಔರಾದ ಪಟ್ಟಣಕ್ಕೆ ಶಾಸ್ವತ ಹಾಗೂ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಅನುದಾನ ಬಿಡುಗಡೆ ಮಾಡಿದ್ದರು. ಇದರಿಂದ ಔರಾದ ಪಟ್ಟಣ ಸೇರಿದಂತೆ ಆರು ಗ್ರಾಮಕ್ಕೂ ನೀರು ಸರಬರಾಜು ಮಾಡಲು ಸರ್ಕಾರ ಮುಂದಾಗಿತ್ತು. ಆದರೆ ಕಾಮಗಾರಿ ಪೂರ್ಣವಾಗಿದ್ದರೂ ಸಹ ಈಗಲೂ ನೀರಿನ ಸಮಸ್ಯೆಯಿಂದ ಜನರಿಗೆ ಮುಕ್ತಿ ಸಿಗುತ್ತಿಲ್ಲ.

ತಾಲೂಕು ಕೇಂದ್ರದಲ್ಲಿರುವ ಜನರಿಗೆ ತೇಗಂಪುರ, ಬೋರಾಳ ಹಾಗೂ ಹಾಲಳ್ಳಿ ಗ್ರಾಮದಿಂದ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಮೂರು ಗ್ರಾಮದ ಜಲಮೂಲಗಳು ಬತ್ತಿವೆ. ಇದರಿಂದ ಜನರಿಗೆ ಆತಂಕ ಶುರುವಾಗಿದೆ. ಅದಲ್ಲದೆ ನೀರು ಸರಬರಾಜು ಮಾಡುವ ಅಧಿಕಾರಿಗಳಿಗೆ ಸಮಸ್ಯೆಯನ್ನು ಹೇಗೆ ನಿಭಾಯಿಸಬೇಕು ಎನ್ನುವುದು ತಿಳಿಯದಾಗಿದೆ.

ಸದ್ಯ ಪಟ್ಟಣದ ನಿವಾಸಿಗಳಿಗೆ ಎರಡು ದಿನಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಮೂರು ಗ್ರಾಮದಲ್ಲಿನ ನೀರಿನ ಮೂಲಗಳು ಬತ್ತಿವೆ. ಆದರೆ ನೀರು ಪೂರೈಸುವಂತೆ ಪಟ್ಟಣ ಪಂಚಾಯತ ಸದಸ್ಯರು ಹಾಗೂ ಔರಾದ ಪಟ್ಟಣದ ನಿವಾಸಿಗಳು ಪ್ರತಿಭಟನೆ ನಡೆಸುವ ವಿಚಾರದಲ್ಲಿದ್ದಾರೆ.

ತಾಲೂಕಿನ ತೇಗಂಪುರ ಗ್ರಾಮದಿಂದ ನಿತ್ಯ ಎರಡು ಗಂಟೆ ಕಾಲ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಹಲಳ್ಳಿ ಗ್ರಾಮದಲ್ಲಿ ನೀರಿನ ಮೂಲ ಸಂಪೂರ್ಣ ಬತ್ತಿದ್ದು, ಬೋರಾಳ ಗ್ರಾಮದಲ್ಲಿ ನೀರಿನ ಮೂಲದ ಮಟ್ಟ ಕಡಿಮೆಯಾಗಿದ್ದರಿಂದ ಗ್ರಾಮಸ್ಥರಿಗೆ ನೀರು ಸಾಕಾಗುತ್ತಿಲ್ಲ.ನಮ್ಮೂರಿನಿಂದ ಔರಾದಗೆ ನೀರು ಸರಬರಾಜು ಮಾಡಬೇಡಿ ಎಂದು ಗ್ರಾಮಸ್ಥರು ಕೂಡ ಈಗಾಗಲೆ ಅಧಿಕಾರಿಗಳಿಗೆ ಮೌಖೀಕವಾಗಿ ಹೇಳಿದ್ದಾರೆ.

ಜನರ ಸಮಸ್ಯೆ ಬಗೆ ಹರಿಸಲು ಮುಂದಾಗಬೇಕಾದ ಪಟ್ಟಣ ಪಂಚಾಯ ಮುಖ್ಯಾಧಿಕಾರಿಗಳು ಇದಕ್ಕೂ ತಮಗೂ ಸಬಂಧವಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂಬುದು ಪಪಂ ಸದಸ್ಯರ ಮಾತಾಗಿದೆ.

ಔರಾದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ತೇಗಂಪುರದ ಬಾವಿಯಲ್ಲಿ ಹೂಳು ತುಂಬಿದೆ. ಹೂಳು ತೆಗೆದರೆ ನೀರು ಹೆಚ್ಚಾಗುತ್ತದೆ.

ಬೋರಾಳ ಗ್ರಾಮದ ಜನರಿಗೆ ನೀರು ಸಾಕಾಗುತ್ತಿಲ್ಲ. ಆ ಗ್ರಾಮಸ್ಥರು ಪಟ್ಟಣಕ್ಕೆ ನೀರು ಸರಬರಾಜು ಮಾಡಲು ನಮಗೆ ಅಡ್ಡಿ ಪಡಿಸುತ್ತಿದ್ದಾರೆ. ಈ ಕುರಿತು ಪಪಂ ಮುಖ್ಯಾಧಿಕಾರಿಗಳಿಗೆ ತಿಳಿಸಿದ್ದೇನೆ.
•ಧನರಾಜ ಕುಡ್ಲೆ, ಪಪಂ ಕಚೇರಿ ಸಿಬ್ಬಂದಿ

ಪಟ್ಟಣದ ಜನರಿಗೆ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನೆವಾಗುತ್ತಿಲ್ಲ. ತೇಗಂಪುರ ಗ್ರಾಮದ ಬಾವಿಯಲ್ಲಿನ ಹೂಳು ತೆಗೆದರೆ ಪಟ್ಟಣದ ಜನತೆಗೆ ಸಾಕಾಗುವಷ್ಟು ನೀರು ಬರುತ್ತವೆ. ಇಲ್ಲವಾದಲ್ಲಿ ಬಾವಿ ಪಕ್ಕದಲ್ಲಿಯೇ ಒಂದು ಕೊಳವೆ ಬಾವಿ ಕೊರೆಸಲು ಪಪಂ ಅಧಿಕಾರಿಗಳು ಮುಂದಾಗಬೇಕು.
•ದಯಾನಂದ ಘೂಳೆ, ಪಟ್ಟಣದ ನಿವಾಸಿ

ಪಟ್ಟಣ ಪಂಚಾಯತ ಅಧಿಕಾರಿಗಳ ನಿಲಕ್ಷ್ಯತನದಿಂದ ಪಟ್ಟಣದ ಜನತೆಗೆ ನೀರು ಸೇರಿದಂತೆ ಇನ್ನಿತರ ಸೌಕರ್ಯಗಳ ಸಮಸ್ಯೆ ಕಾಡುತ್ತಿದೆ. ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗುತ್ತಿಲ್ಲ.
•ಬಂಟಿ ದರ್ಬಾರೆ, ಮುಖಂಡ

ರವೀಂದ್ರ ಮುಕ್ತೇದಾರ್‌

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.