ಬಾಲ್ಯ ವಿವಾಹ ತಡೆದ ಅಧಿಕಾರಿಗಳು
Team Udayavani, Jun 16, 2020, 2:14 PM IST
ಸಾಂದರ್ಭಿಕ ಚಿತ್ರ
ಬಸವಕಲ್ಯಾಣ: ತಾಲೂಕಿನ ಮುಚಳಂಬ ಹಾಗೂ ವಡ್ಡರಗಾ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳ ತಂಡ ದಾಳಿ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದೆ.
ತಾಲೂಕಿನ ಮುಚಳಂಬ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನಿಶ್ವಿಯಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ವಿವಾಹ ನಡೆಯುವ ಒಂದುದಿನ ಮುಂಚೆಯೇ ಸ್ಥಳಕ್ಕೆ ಭೇಟಿ ನೀಡಿ ವಿವಾಹ ರದ್ಧು ಮಾಡುವಂತೆ ಸೂಚಿಸಿದ್ದರು ಹಾಗೂ ವಡ್ಡರಗಾ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಭಾಲ್ಕಿ ತಾಲೂಕಿನ 25 ವರ್ಷದ ಯುವಕನೊಂದಿಗೆ ನಡೆಸಲಾಗುತ್ತಿದ್ದ ವಿವಾಹ ಸ್ಥಳಕ್ಕೆ ಭೇಟಿ ನೀಡಿ ರದ್ದುಪಡಿಸಿದರು. ನಿಯಮ ಉಲ್ಲಂಘಿಸಿ ಬಾಲ್ಯ ವಿವಾಹ ನಡೆಸಿದಲ್ಲಿ ಸಂಬಂಧಿಸಿದ ಪಾಲಕರ ಹಾಗೂ ವಿವಾಹದಲ್ಲಿ ಪಾಲ್ಗೊಂಡ ಜನರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬಸ್ಥರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವಿನೋದ ಕುರೆ, ಪಿಡಿಒ ಓಂಕಾರ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?