ಹುಮನಾಬಾದ-ಚಿಟಗುಪ್ಪ ಎಪಿಎಂಸಿಗೆ ಅಧಿಕಾರಿಗಳ ಭೇಟಿ
Team Udayavani, Aug 4, 2022, 5:49 PM IST
ಹುಮನಾಬಾದ: ಸ್ಥಳೀಯ ಎಪಿಎಂಸಿ ಅಧಿಕಾರಿಗಳ ವಿರುದ್ಧ ವಿವಿಧ ದೂರು, ಆರೋಪಗಳ ಹಿನ್ನೆಲೆಯಲ್ಲಿ ಬುಧವಾರ ಹೆಚ್ಚುವರಿ ನಿರ್ದೇಶಕ ಆದೆಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಹುಮನಾಬಾದ ಮತ್ತು ಚಿಟಗುಪ್ಪ ಎಪಿಎಂಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಕೆಲ ತಿಂಗಳ ಹಿಂದೆ ಎಪಿಎಂಸಿ ಸಮಿತಿ ವತಿಯಿಂದ ಸುಮಾರು 30ಕ್ಕೂ ಅಧಿಕ ಲೀಸ್ ಕಮ್ ಸೇಲ್, ಸೇಲ್ -ಡೀಡ್ ನೋಂದಣೆ ಇಲಾಖೆಯಲ್ಲಿ ನೋಂದಣೆ ಮಾಡಲಾಗಿದ್ದು, ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಖಾಸಗಿ ವ್ಯಕ್ತಿಗಳು ಸಲ್ಲಿಸಿದ ಅರ್ಜಿ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲಿಸಿದರು.
ಚಿಟಗುಪ್ಪ ಪಟ್ಟಣದ ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿ ವಿವಿಧ ಅಂಗಡಿಗಳಿಗೆ ಕಾರ್ಯ ಕುರಿತು ಪರಿಶೀಲನೆ ನಡೆಸಿದರು. ಲೀಸ್ ಕಮ್ ಸೇಲ್, ಸೇಲ್ ಡೀಡ್ ಮಾಡುವಲ್ಲಿ ಕಚೇರಿಯ ಕಾರ್ಯದರ್ಶಿಗಳು ನಿಯಮಗಳು ಪಾಲಿಸಿಲ್ಲ ಎಂದು ಹೇಳಲಾಗುತ್ತಿದ್ದು, ಈ ಕುರಿತು ಅಧಿಕಾರಿಗಳ ತಂಡ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ವರದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ನಿರ್ದೇಶಕ ಆದೆಪ್ಪ, ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳ ಪರಿಶೀಲನೆ ನಡೆಸಿದ್ದು, ಇದೀಗ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಪೂರ್ಣ ತನಿಖೆ ನಡೆಸಿದ ನಂತರ ಹೆಚ್ಚಿನ ವಿವರ ನೀಡುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಪಿಎಂಸಿ ಕಾರ್ಯದರ್ಶಿ ಅನಿಲಕುಮಾರ ಹಾದಿಮನಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು