ವಿರೋಧಿಸಿದ್ದ ಬಿಜೆಪಿಯಿಂದಲೇ ತೈಲ ಬೆಲೆ ಏರಿಕೆ: ಮಹಾದೇವಪ್ಪ
ದೇಶದ ಸ್ಥಿತಿ ಅಧೋಗತಿಗೆ ಹೋಗುವ ದಿನಗಳು ದೂರವಿಲ್ಲ ಎಂದು ಹೇಳಿದರು.
Team Udayavani, Aug 3, 2021, 5:58 PM IST
ಬೀದರ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ ತೈಲ ಬೆಲೆ ಏರಿಕೆ ವಿರೋಧಿ ಸಿದ್ದ ಬಿಜೆಪಿ ಈಗ ತನ್ನದೇ ಆಡಳಿತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರ ಏರಿಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಟೀಕಿಸಿದರು.
ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರವಧಿಯಲ್ಲಿ ಈವರೆಗೆ 43 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಿಸಿದೆ. ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ಕಷ್ಟಕರವಾಗಿದೆ. ಪ್ರಧಾನಿ ಮೋದಿ ಅವರು ಅಧಿಕಾರಿಗಳು ಹಾಗೂ ಕೆಲವೇ ಜನರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ದೇಶದ ಸ್ಥಿತಿ ಅಧೋಗತಿಗೆ ಹೋಗುವ ದಿನಗಳು ದೂರವಿಲ್ಲ ಎಂದು ಹೇಳಿದರು.ಕಾರ್ಯಕರ್ತರು ಪಕ್ಷ ಸಂಘಟನೆ ಗಟ್ಟಿಗೊಳಿಸಲು ಪ್ರಯತ್ನಿಸಬೇಕು.
ಬರುವ ಜಿಪಂ-ತಾಪಂ ಹಾಗೂ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಬೇಕೆಂದು ಸಲಹೆ ನೀಡಿದರು. ಕೆಪಿಸಿಸಿ ಸ್ವತ್ತುಗಳ ಸಮಿತಿ ಸದಸ್ಯ ರಾಜಶೇಖರ ಪಾಟೀಲ ಅಷ್ಟೂರ, ಮಾಜಿ ಕಾರ್ಯದರ್ಶಿ ಅಮೃತರಾವ್ ಚಿಮಕೊಡೆ, ಜಿಪಂ ಮಾಜಿ ಸದಸ್ಯ ಶಿವರಾಜ ಹಾಸನಕರ್ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ಮುಖಂಡರಾದ ಶಂಕರರಾವ್ ದೊಡ್ಡಿ, ಅಬ್ದುಲ್ ಮನ್ನಾನ್ ಸೇಠ್, ನಿಸಾರ್ ಅಹಮ್ಮದ್, ಸಂಜಕುಮಾರ ಡಿ.ಕೆ., ಸಂಜಯ ಜಾಗಿರದಾರ್, ವಿದ್ಯಾಸಾಗರ್ ಸಿಂಧೆ, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಜಾರ್ಜ್ ಫರ್ನಾಂಡೀಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ