ಬಯಲು ಬಹಿರ್ದೆಸೆ ಮುಕ್ತ ಅಟ್ಟರ್ಗಾ


Team Udayavani, Oct 3, 2017, 11:01 AM IST

bid-2.jpg

ಬೀದರ: ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮ ಪಂಚಾಯತನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಅರ್ಥಪೂರ್ಣವಾಗಿ ಘೋಷಿಸಲು ಸೋಮವಾರ ಗುಂಜರಗಾ ಗ್ರಾಮದಿಂದ ಅಟ್ಟರ್ಗಾ ಗ್ರಾಮದ ವರೆಗೆ ಸಚಿವರು ಹಾಗೂ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಜಿಪಂ, ಸ್ವತ್ಛ ಭಾರತ ಮಿಷನ್‌, ತಾಪಂ ಮತ್ತು ಗ್ರಾಪಂ ಆಶ್ರಯದಲ್ಲಿ ಗುಂಜರಗಾ ಗ್ರಾಮದ ಶಾಲಾ ಆವರಣದಿಂದ ಬೆಳಗ್ಗೆ ಆರಂಭಗೊಂಡ “ನಮ್ಮ ನಡಿಗೆ ಸ್ವತ್ಛ ಗ್ರಾಮದೆಡೆಗೆ’ ಕಾಲ್ನಡಿಗೆ ಜಾಥಾಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಎರಡು ಕಿ.ಮೀ. ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಶೌಚಾಲಯ ಕಟ್ಟಿಸಿಕೊಳ್ಳುವುದರ ಬಗ್ಗೆ ಸಾರ್ವಜನಿಕರದಲ್ಲಿ ಜನಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡು ಮೆರುಗು ನೀಡಿದವು.

ತೀವ್ರಗತಿಯ ಅನುಷ್ಠಾನಕ್ಕಾಗಿ ಈ ಅಭಿಯಾನ. ಶೌಚಾಲಯ ಇಲ್ಲದ ಮನೆಗೆ ವಿದ್ಯುತ್‌ ಕಡಿತಗೊಳಿಸಲಾಗುವುದು ಎನ್ನುವ ಬ್ಯಾನರ್‌ನಡಿ ಜಾಥಾ ನಡೆಸುವ ಮೂಲಕ ಜನರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವುದರ ಬಗ್ಗೆ ಅರಿವು ಮೂಡಿಸಲಾಯಿತು. ಗುಂಜರರ್ಗಾ ಗ್ರಾಮದ ವಿದ್ಯಾರ್ಥಿಗಳು ಸೈಕಲ್‌ ಜಾಥಾ ನಡೆಸಿ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಭವ್ಯ ಸ್ವಾಗತ: ಗುಂಜರಗಾದಿಂದ ಕಾಲ್ನಡಿಗೆ ಜಾಥಾ ಮೂಲಕ ಅಟ್ಟರ್ಗಾಕ್ಕೆ ಆಗಮಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಅಟ್ಟರ್ಗಾ ಗ್ರಾಮದ ಹಿರಿಯರು ಭವ್ಯ ಸ್ವಾಗತ ಕೋರಿದರು. ಮಹಿಳೆಯರು ತುಂಬಿದ ಕೊಡಗಳನ್ನು ಹೊತ್ತು ಮತ್ತು ಆರತಿ ಹಿಡಿದು ಸ್ವಾಗತ ಕೋರಿದರು. ಅಟ್ಟರ್ಗಾ ಗ್ರಾಪಂ ಸದಸ್ಯರು, ಅಧಿಕಾರಿಗಳು ಇದ್ದರು. ಗಾಂಧಿ ಜಯಂತಿ ಅಂಗವಾಗಿ ಈ ಸ್ವತ್ಛ ಭಾಲ್ಕಿ ಅಭಿಯಾನ ನಡೆಯುತ್ತಿದೆ. ಇದಕ್ಕೆ ಸಹಕರಿಸಿರಿ. ತಮ್ಮ ಮನೆಯ ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ಪುರಸಭೆಯ ವಾಹನಕ್ಕೆ ಹಾಕಬೇಕು. ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಚೆಲ್ಲಬೇಡಿರಿ. ಬಯಲು ಶೌಚ ಮುಕ್ತ ಭಾಲ್ಕಿಗಾಗಿ ಪ್ರತಿ ಮನೆಯಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಿರಿ. ಪ್ಲಾಸ್ಟಿಕ್‌ ನಿಷೇಧಿಸಿದ್ದು, ಅದನ್ನು ಬಳಸದೇ ಸಹಕರಿಸಿರಿ. ಸ್ವತ್ಛ ಭಾಲ್ಕಿ ಆರೋಗ್ಯ ಭಾಲ್ಕಿ ಸ್ವತ್ಛತೆಯೆಡೆಗೆ ಒಂದು ಹೆಜ್ಜೆ ಎಂದು ಹೇಳುತ್ತ
ಕಾಲ್ನಡಿಗೆ ಜಾಥಾದಲ್ಲಿ ಎರಡು ವಾಹನಗಳ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಕಂಡು ಬಂದಿತು.

ಸೈಕಲ್‌ ಜಾಥಾ: ಇದೇ ವೇಳೆ ಗುಂಜರಗಾ ಗ್ರಾಮದಿಂದ ಅಟ್ಟರ್ಗಾವರೆಗೆ ಕಾಲ್ನಡಿಗೆ ಜಾಥಾ ನಡೆದರೆ, ಮಾಣಿಕೇಶ್ವರ
ಗ್ರಾಮದಿಂದ ಸೈಕಲ್‌ ಜಾಥಾ ನಡೆಯಿತು. ಇದರಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ, ಸಿಇಒ ಡಾ| ಸೆಲ್ವಮಣಿ ಆರ್‌., ಸ್ವತ್ಛ ಭಾರತ ಅಭಿಯಾನದ ನೋಡೆಲ್‌ ಅಧಿಕಾರಿ ಗೌತಮ ಅರಳಿ, ಅಧಿಕಾರಿಗಳಾದ ಬಲಭೀಮ ಕಾಂಬಳೆ, ಜಿಯಾವುಲ್ಲಾ ಕೆ, ಡಾ| ಡಿ.ಎಸ್‌. ಹವಾಲ್ದಾರ, ಎಂ.ಎ.ಜಬ್ಟಾರ, ಐ.ಎಸ್‌. ಪಾಂಚಾಳ, ಪ್ರೇಮಸಾಗರ ದಾಂಡೇಕರ, ಅವಿನಾಶ ಕೆ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.