ರಾಸಾಯನಿಕ ಕಾರ್ಖಾನೆ ವಿರುದ್ಧ ಜನಾಕ್ರೋಶ

•ಕೊಳಾರ ಕೈಗಾರಿಕಾ ಪ್ರದೇಶದ ವಾಣಿ ಆಗ್ರ್ಯಾನಿಕ್ಸ್‌ ಕಾರ್ಖಾನೆಯಲ್ಲಿ ಸಾರ್ವಜನಿಕರ ಸಂಪರ್ಕ ಸಭೆ

Team Udayavani, Jul 23, 2019, 12:06 PM IST

bidar-tdy-2

ಬೀದರ: ಕೊಳಾರ ಕೈಗಾರಿಕಾ ಪ್ರದೇಶದ ವಾಣಿ ಆಗ್ರ್ಯಾನಿಕ್ಸ್‌ ಕಂಪನಿಯಲ್ಲಿ ಏರ್ಪಡಿಸಿದ್ದ ಪರಿಸರ ಪರಿಣಾಮಗಳ ಸಾರ್ವಜನಿಕರ ಸಂಪರ್ಕ ಸಭೆಯಲ್ಲಿ ಅಪರ ಡಿಸಿ ರುದ್ರೇಶ ಗಾಳಿ ಮಾತನಾಡಿದರು.

ಬೀದರ: ಬೀದರ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಗಳಿಂದ ವಿವಿಧ ಗ್ರಾಮಗಳಲ್ಲಿ ಪರಿಸರ ಮಾಲಿನ್ಯ ಉಂಟಾ ಗುತ್ತಿದ್ದರೂ ಕೂಡ ಅಧಿಕಾರಿಗಳು ಜೀವಗಳಿಗೆ ಬೆಲೆ ಕೊಡುತ್ತಿಲ್ಲ. ಅಧಿಕಾರಿಗಳು ಹಫ್ತಾ ಪಡೆಯಲು ಮಾತ್ರ ಸೀಮಿತರಾಗಿದ್ದಾರೆ ಎಂದು ಕೊಳಾರ, ನಿಜಾಮ್‌ಪುರ ಸೇರಿದಂತೆ ವಿವಿಧ ಗ್ರಾಮಸ್ಥರು ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆಯಿತು.

ಕೊಳಾರ ಕೈಗಾರಿಕಾ ಪ್ರದೇಶದ ವಾಣಿ ಆಗ್ರ್ಯಾನಿಕ್ಸ್‌ ಕಂಪನಿಯಲ್ಲಿ ಏರ್ಪಡಿಸಿದ್ದ ಪರಿಸರ ಪರಿಣಾಮಗಳ ಕುರಿತ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ವಿವಿಧ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದು.

ಅಮೃತರಾವ್‌ ನಾವದಗಿ ಕೊಳಾರ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷ ಔಷಧ ಹಾಗೂ ರಾಸಾಯನಿಕ ಕಾರ್ಖಾನೆಗಳು ಹೆಚ್ಚುತ್ತಿದ್ದು, ಸುತ್ತಲಿನ ಪ್ರದೇಶದ ವಿವಿಧ ಗ್ರಾಮಗಳಲ್ಲಿ ಅನೇಕ ಸಮಸ್ಯೆಗಳು ಉಂಟಾ ಗುತ್ತಿವೆ. ವಿವಿಧ ಗ್ರಾಮಗಳಲ್ಲಿನ ಅಂತರ್ಜಲ ಹಾಳಾಗಿದೆ. ಮಳೆಗಾಲ ಬಂದರೆ ಸಾಕು ಕಲ್ಮಶ ಎಲ್ಲಾ ಕಡೆಗಳಲ್ಲಿ ಹರಿದಾಡುತ್ತಿದೆ. ಇಲ್ಲಿನ ಕಾರ್ಖಾನೆಗಳು ಸರ್ಕಾರದ ನಿಯಮ ಗಳಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.

ಚಂದ್ರಶೇಖರ ಗೌಡಪನೊರ್‌ ಮಾತನಾಡಿ, ಅಧಿಕಾರಿಗಳು ಎಸಿ ವಾಹನದಲ್ಲಿ ಸಂಚರಿಸಿ ಕರ್ತವ್ಯ ನಿರ್ವಹಿಸಿದರೆ ಹೇಗೆ? ವಾಸ್ತವದಲ್ಲಿ ಯಾವ ಕಾರ್ಖಾನೆಗಳು ಯಾವ ಕಾನೂನು ಮೀರುತ್ತಿವೆ ಎಂದು ಯಾರು ಪರಿಶೀಲಿಸಬೇಕು ಎಂದು ಪ್ರಶ್ನಿಸಿದರು. ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ಜೀವಗಳಿಗೆ ಕಾರ್ಖಾನೆಗಳ ಮಾಲೀಕರು ಬೆಲೆ ನೀಡುತ್ತಿಲ್ಲ. ಅಧಿಕಾರಿಗಳು ಕಂಪೆನಿಗಳ ಜೊತೆಗೆ ಶಾಮೀಲಾಗಿದ್ದಾರೆ. ಇಲ್ಲಿನ ಅವ್ಯವಸ್ಥೆಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವ ಅಧಿಕಾರಿಗಳೂ ಸ್ಪಂದಿಸಿಲ್ಲ. ಜನರ ಸಂಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಈ ಮಧ್ಯೆ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ವಾಣಿ ಕಾರ್ಖಾನೆ ಕುರಿತು ಮಾತನಾಡಿ, ಈ ಕಾರ್ಖಾನೆಯಿಂದ ಪರಿಸರ ಸಮಸ್ಯೆ ಬಗ್ಗೆ ಅನಿಸಿಕೆ ತಿಳಿಸಿ ಹೊರತು ಇಲ್ಲಸಲ್ಲದ ಆರೋಪ ಮಾಡುವುದು ಸರಿ ಅಲ್ಲ. ಸರ್ಕಾರಿ ಅಧಿಕಾರಿಗಳು ಜನರ ಕೆಲಸಕ್ಕೆ ಇರುತ್ತಾರೆ. ನಿಮ್ಮ ಸಮಸ್ಯೆಗಳ ಕುರಿತು ಕಚೇರಿಗೆ ಬಂದು ಭೇಟಿ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.

ಸ್ಥಳೀಯ ನಿವಾಸಿ ಶರಣಪ್ಪ ಮಾತನಾಡಿ, ಕೊಳಾರ ಕೈಗಾರಿಕಾ ಪ್ರದೇಶದ ಸುತ್ತಲ್ಲಿನ ಪ್ರದೇಶದಲ್ಲಿ ಉತ್ತಮ ಪರಿಸರ ಕಾಪಾಡುವಲ್ಲಿ ಪರಿಸರ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ.ಅಧಿಕಾರಿಗಳು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದರೆ ಇಂದು ವಿವಿಧ ಗ್ರಾಮಗಳಲ್ಲಿ ಪರಿಸರ ಹಾನಿ ಉಂಟಾಗುತ್ತಿದ್ದಿಲ್ಲ ಎಂದರು.

ದಲಿತ ಸಂಘಟನೆಯ ರಾಜು ಕಾಂಬಳೆ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕಾರ್ಖಾನೆಗಳು ತೆಲಂಗಾಣ ಭಾಗದ ಜನರಿಗೆ ಉಧ್ದೋಗ ನೀಡುತ್ತಿದ್ದಾರೆ. ಜಿಲ್ಲೆಯ ಜನರಿಗೆ ಉನ್ನತ ಹುದ್ದೆಗಳನ್ನು ನೀಡುತ್ತಿಲ್ಲ. ನಿಯಮ ಅನುಸಾರ ಕಾರ್ಖಾನೆಗಳನ್ನು ನಡೆಸುವ ಜತೆಗೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ವಾಣಿ ಆಗ್ರ್ಯಾನಿಕ್ಸ್‌ ಕಂಪನಿಯು ಹೆಚ್ಚು ಉತ್ಪಾದನೆ ಮಾಡಲು ಬಯಸಿದ್ದು, ಸಾರ್ವಜನಿಕರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮಾತನಾಡಿದ ಪ್ರತಿಯೊಬ್ಬರ ವಿಡಿಯೋ ಚಿತ್ರೀಕರಣ ಮಾಡಿದ್ದು, ಜನರ ಅನಿಸಿಕೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ಪರಿಸರ ಇಲಾಖೆಯ ಅಧಿಕಾರಿ ಮಂಜಪ್ಪ ಮಾತನಾಡಿ, ಕೈಗಾರಿಕಾ ಪ್ರದೇಶದಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.