ಜಲಸಂಪನ್ಮೂಲ ಸಚಿವ ಕಾರಜೋಳ ಹೇಳಿಕೆಗೆ ಆಕ್ರೋಶ
Team Udayavani, Sep 17, 2022, 6:50 PM IST
ಬೀದರ: ಕಾರಂಜಾ ಸಂತ್ರಸ್ತರಿಗೆ ಭೂ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆ ಖಂಡಿಸಿ ನಗರದಲ್ಲಿ ಕಾರಂಜಾ ಸಂತ್ರಸ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಕಳೆದ 78 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸಂತ್ರಸ್ತರು ಡಿಸಿ ಕಚೇರಿವರೆಗೆ ರ್ಯಾಲಿ ನಡೆಸಿ ಡಿಸಿ ಗೋವಿಂದರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಕಾರಂಜಾ ಸಂತ್ರಸ್ತರಿಗೆ ಕಾನೂನಿನ ಅಡಿಯಲ್ಲಿ ಪರಿಹಾರ ಕೊಡಲು ಬರುವುದಿಲ್ಲ. 25 ವರ್ಷಗಳು ಕಳೆದ ನಂತರ ಈಗ ಪರಿಹಾರ ಕೊಡುವುದು ಸಾಧ್ಯವಿಲ್ಲ ಎಂದು ಸಚಿವ ಕಾರಜೋಳ ನೀಡಿರುವ ಹೇಳಿಕೆ ಖಂಡನೀಯ ಎಂದು ಕಿಡಿಕಾರಿದರು.
ನಾಗಶೆಟ್ಟಿ, ಪ್ರೇಮದಾಸ, ಫರಿದಸಾಬ್, ವಿಜಯಕುಮಾರ, ರಾಜಶೇಖರ, ಮಡಿವಾಳಪ್ಪಾ, ಅಣ್ಣೆಪ್ಪಾ, ಸುಧಾಕರ, ಗುಡುಸಾಬ್, ಸೂರ್ಯಕಾಂತ, ಮಾದಪ್ಪಾ, ಲಕ್ಷ್ಮೀಬಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ