ವಿಟಿಯು ಪರೀಕ್ಷೆ ಅವ್ಯವಸ್ಥೆಗೆ ಆಕ್ರೋಶ


Team Udayavani, Aug 22, 2017, 12:24 PM IST

bid 5.jpg

ಬೀದರ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿನ ಪರೀಕ್ಷಾ ಅವ್ಯವಸ್ಥೆ ಖಂಡಿಸಿ ನಗರದಲ್ಲಿ ಸೋಮವಾರ ವಿಟಿಯು ವಿದ್ಯಾರ್ಥಿಗಳ ಹೋರಾಟ ಸಮಿತಿ ಮತ್ತು ಎಐಡಿಎಸ್‌ಓ ನೇತೃತ್ವದಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸಮಿತಿ ಸಂಚಾಲಕ ಹಣಮಂತ ಎಸ್‌.ಎಚ್‌., ಸಹ ಸಂಚಾಲಕರಾದ ಶಹಬಾಜ್‌ ಮತ್ತು ಮಹ್ಮದ್‌ ಆರೀಫ್‌ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿ ನಂತರ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ವಿವಿ 2016ರಲ್ಲಿ ನಡೆಸಿದ ಇಂಜಿನಿಯರಿಂಗ್‌ ಪರೀಕ್ಷೆಗಳ ಫಲಿತಾಂಶ ವಿಳಂಬವಾಗಿ ಪ್ರಕಟಿಸಿದ್ದರಿಂದ ತೀವ್ರ ತೊಂದರೆ ಆಗಿತ್ತು. ಸಾವಿರಾರು ವಿದ್ಯಾರ್ಥಿಗಳ ಫಲಿತಾಂಶ ತಡೆ ಹಿಡಿಯಲಾಗಿತ್ತು. ಅದರ ಫಲಿತಾಂಶ, ಮರು ಮೌಲ್ಯಮಾಪನದ ಫಲಿತಾಂಶ ಪರೀಕ್ಷೆಯ ಹಿಂದಿನ ದಿನ ರಾತ್ರಿ ಪ್ರಕಟಗೊಂಡಿತ್ತು. ಇದರೊಂದಿಗೆ ಕ್ರಾಷ್‌ ಸೆಮಿಸ್ಟರ್‌ಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಂತೂ ಕೇವಲ 50 ದಿನಗಳ ಅಂತರದಲ್ಲಿ 20 ವಿಷಯಗಳ ಪರೀಕ್ಷೆ ಬರೆಯುವಂತಾಯಿತು. ಫಲಿತಾಂಶ ಪ್ರಕಟಣೆಯಲ್ಲಿನ ಈ ಅನಿಶ್ಚಿತತೆ ಹೆಚ್ಚಾಗಿ, ಹಲವರು ಅನುತ್ತೀರ್ಣ ಆಗುವುದಕ್ಕೂ ಕಾರಣವಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ. 2015-16ರಿಂದ ವಿಟಿಯು ಸಿಬಿಸಿಎಸ್‌ ಮಾದರಿಯನ್ನು ಅಳವಡಿಸಲಾಗಿದ್ದು, ಈ ಮಾದರಿಯ ರಚನೆ ಹಿಂದಿನ ಎಲ್ಲಾ ಮಾದರಿಗಿಂತ ಭಿನ್ನವಾಗಿದೆ. 2010ರ ಮಾದರಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಒಂದು ಪಕ್ಷ ಮಂದಿನ ವರ್ಷಕ್ಕೆ ಅರ್ಹತೆ ಇಲ್ಲದೇ ತಡೆಹಿಡಿದಲ್ಲಿ ಅವರು ಕೋರ್ಸ್‌ನ ಉಳಿದ ವರ್ಷಗಳು ಹೊಸದೊಂದು ಮಾದರಿಯಲ್ಲಿ ಕಲಿಯಬೇಕಾಗುತ್ತದೆ. ಕೋರ್ಸ್‌ನ ಅರ್ಧ ಭಾಗವನ್ನು 2010ರ ಮಾದರಿಯಲ್ಲಿ ಮತ್ತು ಉಳಿದರ್ಧ ಭಾಗವನ್ನು ಸಿಬಿಸಿಎಸ್‌ ಮಾದರಿಯಲ್ಲಿ ಕಲಿಯುವುದು ಸಮಗ್ರ ಜ್ಞಾನಾರ್ಜನೆಗೆ ಅಡ್ಡಿಯಾಗಿದೆ ಎಂದು ತಿಳಿಸಲಾಗಿದೆ. 2010 ಮಾದರಿಯ ಅರ್ಹ ವಿದ್ಯಾರ್ಥಿಗಳಿಗೆ ಹಳೆ ಮಾದರಿಯಂತೆಯೇ ಬೋಧನೆ ವ್ಯವಸ್ಥೆ ಮಾಡಬೇಕೆಂದು ತಾವು ಕಾಲೇಜುಗಳಿಗೆ ನಿರ್ದೇಶನ ನೀಡಿದ್ದೀರಿ. ಆದರೆ, ಇದು ಆಗುತ್ತಿಲ್ಲ. ಇನ್ನೊಂದೆಡೆ ಸಿಬಿಸಿಎಸ್‌ನ ಆಗಾಧ ಪಠ್ಯಕ್ರಮವನ್ನು ಸೆಮಿಸ್ಟರ್‌ ಪದ್ಧತಿಯಲ್ಲಿ ಸಿಗುವ ಕಡಿಮೆ ಅವಧಿಯಲ್ಲಿ ಸಮಯಕ್ಕೆ ಪಠ್ಯ ಕ್ರಮವನ್ನು ಮುಗಿಸಲಾಗದೇ ಪ್ರಾಧ್ಯಾಪಕರು ಒದ್ದಾಡುತ್ತಿದ್ದಾರೆ. ಇದು ಫಲಿತಾಂಶದ ತೀವ್ರ ಇಳಿಕೆಗೆ ಕಾರಣವಾಗಿದೆ ಎಂದು ದೂರಲಾಗಿದೆ. ಹಾಗಾಗಿ 2010ರ ಸ್ಕೀಮ್‌ನ ವಿದ್ಯಾರ್ಥಿಗಳಿಗೆ ಇಯರ್‌ ಬ್ಯಾಕ್‌ ಮತ್ತು ಕ್ರಿಟಿಕಲ್‌ ಇಯರ್‌ ಬ್ಯಾಕ್‌ ವ್ಯವಸ್ಥೆ ತೆಗೆದು ಹಾಕಿ ಸಿಬಿಸಿಎಸ್‌
ವಿದ್ಯಾರ್ಥಿಗಳಿಗೆ ಪರೂಕ ಪರೀಕ್ಷೆ ನಡೆಸಬೇಕು. ಸಿಬಿಸಿಎಸ್‌ ವಿದ್ಯಾರ್ಥಿಗಳು ಗಳಿಸಿರುವ ಅಂಕಗಳನ್ನು ಪ್ರಕಟಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.