ಬಿದ್ರಿ ಕಲೆಯಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದ ರಶೀದ್‌ ಅಹ್ಮದ್‌ ಖಾದ್ರಿಯವರಿಗೆ ಪದ್ಮಶ್ರೀ

ತಂದೆಯ ವಿರೋಧದ ನಡುವೆಯೂ ಬಿದ್ರಿ ಕಲೆಯತ್ತ ಆಕರ್ಷಿತರಾಗಿ‌ದ್ದರು

Team Udayavani, Jan 25, 2023, 11:36 PM IST

1-wsdadadsd

ಬೀದರ್ : ಬೆಳ್ಳಿ ಕುಸರಿಯ ಬಿದ್ರಿ ಕಲೆಯನ್ನು ದೇಶ ವಿದೇಶದಲ್ಲಿ ಖ್ಯಾತಿಗೊಳಿಸಿರುವ ಬೀದರನ ಬಿದ್ರಿ ಕಲಾವಿದ ಶಾಹ ರಶೀದ್‌ ಅಹ್ಮದ್‌ ಖಾದ್ರಿ ಅವರು ಕೇಂದ್ರ ಸರ್ಕಾರದಿಂದ ಕೊಡಮಾಡುವ 2023 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ‌ ಆಯ್ಕೆಯಾಗಿದ್ದಾರೆ.

ನಗರದ ಸಿದ್ದಿ ತಾಲೀಮ್ ನಿವಾಸಿಯಾಗಿರುವ ರಶೀದ್ ಅಹ್ಮದ್ ಖಾದ್ರಿ‌ (78) ಅವರು ಪಿಯುಸಿವರೆಗೆ ಶಿಕ್ಷಣ ಪಡೆದಿದ್ದು, ತಂದೆಯ ವಿರೋಧದ ನಡುವೆಯೂ ಬಿದ್ರಿ ಕಲೆಯತ್ತ ಆಕರ್ಷಿತರಾಗಿ‌, ಆ ಕಲೆಯನ್ನೇ ವೃತ್ತಿಯನ್ನಾಗಿಸಿಕೊಂಡರು. ಈ ಐತಿಹಾಸಿಕ ಕ್ರಾಫ್ಟ್ ಅವರನ್ನು‌ ದೇಶ- ವಿದೇಶದಲ್ಲಿ ಪರಿಚಯಿಸುವುದರ ಜತೆಗೆ ಇಂದು‌ ಪದ್ಮಶ್ರೀ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಳ್ಳುವಂತೆ ಮಾಡಿದೆ.

ಶಿಲ್ಪಗುರು ಪ್ರಶಸ್ತಿ ವಿಜೇತರಾದ ಖಾದ್ರಿ ಅವರು ಬಿದ್ರಿ ಕಲೆಗಾಗಿ ಖಾದ್ರಿ ಜೀವನ ಮುಡುಪಾಗಿಟ್ಟಿದ್ದಾರೆ. ಜತೆಗೆ, ಜಿಲ್ಲೆಯ ಹಲವರಿಗೆ ಬಿದ್ರಿ ಕಲೆಯ ತರಬೇತಿ ನೀಡಿ ಬದುಕು‌ ರೂಪಿಸಿದ್ದಾರೆ.

ದೆಹಲಿಯಲ್ಲಿ 2011ರ ಗಣರಾಜ್ಯೋತ್ಸವ ಪರೇಡ್ ನಲ್ಲಿ‌ ಖಾದ್ರಿ ಅವರು ಕರ್ನಾಟವನ್ನು ಪ್ರತಿನಿಧಿಸಿ‌ ಪ್ರದರ್ಶಿಸಿದ ಬಿದ್ರಿ ಕಲಾಕೃತಿಯ ಟ್ಯಾಬ್ಲೋಗೆ ಎರಡನೇ ಸ್ಥಾನ ಲಭಿಸಿತ್ತು. ಖಾದ್ರಿ ಅವರು ಬೊಸ್ಟನ್‌ (ಅಮೆರಿಕಾ), ರೋಮ್‌ (ಇಟಲಿ), ಸಿಂಗಾಪುರ, ಬಾರ್ಸಿಲೋನಾ (ಸ್ಪೇನ್‌), ಬೆಹರೀನ್‌, ಮಸ್ಕತ್‌ (ಓಮಾನ್‌) ದೇಶಗಳಲ್ಲಿ ಭಾತರವನ್ನು ಪ್ರತಿನಿಧಿಸಿ, ಬಿದ್ರಿ ಕಲೆಯನ್ನು‌ ಪ್ರದರ್ಶಿಸಿದ್ದಾರೆ.

ಖಾದ್ರಿ ಅವರು ಈವರೆಗೆ ಶಿಲ್ಪ ಗುರು ಅವಾರ್ಡ್ (2012), ನ್ಯಾಶನಲ್‌ ಅವಾರ್ಡ್ (1988), ಸ್ಟೇಟ್ ಅವಾರ್ಡ್ (1984), ಸುವರ್ಣ ಕರ್ನಾಟಕ ರಾಜ್ಯೋತ್ಸವ ಅವಾರ್ಡ್ (2006), ಗ್ರೇಟ್ ಇಂಡಿಯನ್ ಅಚಿವರ್ಸ್ ಅವಾರ್ಡ್ (2004) ಸೇರಿದಂತೆ ಹಲವು ಪ್ರಶಸ್ತಿ‌, ಗೌರವಗಳಿಗೆ ಪಾತ್ರರಾಗಿದ್ದಾರೆ.

ಏನಿದು ಬಿದ್ರಿ ಕಲೆ ?
ಕಣ್ಣಿಗೆ ಮುದ ನೀಡುವ ವಿಶ್ವವಿಖ್ಯಾತ ಬಿದ್ರಿ ಕಲೆಗೆ‌ ದೇಶ ವಿದೇಶಗಳಲ್ಲಿ ಬೇಡಿಕೆ ಇದೆ. ಅಲಂಕಾರಿಕೆ, ಉಡುಗರೆಯಾಗಿ ನೀಡಲು ಸೈ ಎನಿಸಿಕೊಂಡಿರುವ ಕಲಾಕೃತಿಗಳಿಗೆ ಮನ ಸೋಲದವರೇ ಇಲ್ಲ. ಬೀದರನ ಬಹುಮನಿ ಕೋಟೆಯಲ್ಲಿ‌ ಸಿಗುವ ವಿಶಿಷ್ಟ ಮಣ್ಣಿನ‌ ಜತೆಗೆ ಬೆಳ್ಳಿ, ಸತುವು ಹಾಗೂ ತಾಮ್ರವನ್ನು‌ ಬಳಸಿ‌ ಈ ಬಿದ್ರಿ‌ ಕಲಾಕೃತಿಗಳನ್ನು‌ ತಯ್ಯಾರಿಸುತ್ತಾರೆ. ಬಿದ್ರಿ ಕಲೆಯನ್ನೇ ನೆಚ್ಚಿಕೊಂಡಿರುವ ಅಂದಾಜು 500ಕ್ಕೂ ಹೆಚ್ಚು ಕರಕುಶಲ ಕರ್ಮಿಗಳು, ಕಾರ್ಮಿಕರು ಮತ್ತು ವ್ಯಾಪಾರಿಗಳು ಬೀದರನಲ್ಲಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ನನ್ನ ಜೀವನದ ಕನಸಿನ ಪ್ರಶಸ್ತಿಯಾಗಿದ್ದು, ಇದನ್ನು ಬೀದರ ಜನರಿಗೆ ಅರ್ಪಿಸುತ್ತೆನೆ. ಬಿದ್ರಿ ಕಲೆಯಿಂದ ನನಗೆ ಹಲವು ಪ್ರಶಸ್ತಿ‌ ಸಮ್ಮಾನಗಳು ದೊರತಿವೆ. ಹಲವು ದೇಶಗಳಲ್ಲಿ‌ ಕಲೆಯನ್ನು ಪ್ರದರ್ಶಿಸಿದ ಹೆಮ್ಮೆ ನನಗಿದೆ ಎಂದು ಶಾಹ ರಶೀದ್ ಅಹ್ಮದ್ ಖಾದ್ರಿ ಸಂತಸ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.