ಜಗದೋನ್ನತಿಗೆ ಪಂಚಾಚಾರ್ಯರ ಕೊಡುಗೆ ಅಪಾರ

ಈಶದ್ವ ಹಾಗೂ ಸಿದ್ಧಿ ಎನ್ನುವ ಎಂಟು ಯೋಗಗಳನ್ನು ಹೊಂದಿದ್ದರು ಎಂದು ನುಡಿದರು

Team Udayavani, Apr 20, 2021, 6:44 PM IST

Apara

ಬೀದರ: ಜಗದ ಉನ್ನತಿಗೆ ಜಗದ್ಗುರು ಪಂಚಾಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಹುಡಗಿ ಹಿರೇಮಠ ಸಂಸ್ಥಾನದ ವಿರೂಪಾಕ್ಷ ಶಿವಾಚಾರ್ಯರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಸೇವಾ ಸಮಿತಿ ಹಾಗೂ ಜಿಲ್ಲಾ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಿದ್ದ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸಾರ್ಥಕ ಬದುಕಿಗಾಗಿ ಪ್ರತಿಯೊಬ್ಬರೂ ಧರ್ಮದ ಮಾರ್ಗದಲ್ಲಿ ನಡೆಯಬೇಕು. ಲಿಂಗ ಪೂಜೆ, ಜಪ, ತಪ, ಧ್ಯಾನ, ಸತ್ಯ, ಅಹಿಂಸಾ ತತ್ವಗಳನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದರು.

ಗುರು-ವಿರಕ್ತರು ಒಂದಾಗಬೇಕು. ರೇಣುಕಾಚಾರ್ಯ, ಬಸವಣ್ಣ ಮೊದಲಾದವರು ಗುರು, ಲಿಂಗ, ಜಂಗಮ ಪರಿಕಲ್ಪನೆಯನ್ನೇ ಒತ್ತಿ ಹೇಳಿದ್ದರು. ಆದರೆ, ಬಸವಣ್ಣನವರ ಅನುಯಾಯಿಗಳೆಂದು ಹೇಳಿಕೊಂಡು ಕೆಲವರು ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹಿರನಾಗಾಂವದ ಜಯಶಾಂತಲಿಂಗ ಸ್ವಾಮೀಜಿ ಮಾತನಾಡಿ, ಪರಸ್ಪರ ದ್ವೇಷ, ಅಸೂಯೆ ತೊರೆದು ಎಲ್ಲರೂ ಒಗ್ಗೂಡಿದರೆ ಮಾತ್ರ ಐದು ಸಾವಿರ ವರ್ಷಗಳ ಪಂಚಾಚಾರ್ಯ ಧರ್ಮ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದು ಹೇಳಿದರು.

ತಡೋಳಾ-ಮೆಹಕರದ ರಾಜೇಶ್ವರ ಶಿವಾಚಾರ್ಯ ಮಾತನಾಡಿ, ರೇಣುಕಾಚಾರ್ಯರು ಪ್ರಾಣತತ್ವ ಅಧಿಧೀನದಲ್ಲಿ ಇರಿಸಿಕೊಂಡ ಮಹಾನ್‌ ಶಕ್ತಿಗಳಾಗಿದ್ದರು. ಅಣಿಮ, ಮಹಿಮ, ಗರಿಮ, ಲಗಿಮ, ಪ್ರಾಪ್ತಿ, ಪ್ರಾಕಾಮ್ಯ, ಈಶದ್ವ ಹಾಗೂ ಸಿದ್ಧಿ ಎನ್ನುವ ಎಂಟು ಯೋಗಗಳನ್ನು ಹೊಂದಿದ್ದರು ಎಂದು ನುಡಿದರು.

ಘನಲಿಂಗ ರುದ್ರಮುನಿ ಶಿವಾಚಾರ್ಯ, ಮುರುಘೇಂದ್ರ ದೇವರು, ವೀರಶೈವ ಮಹಾಸಭಾ ಅಧ್ಯಕ್ಷ ವೈಜಿನಾಥ ಕಮಠಾಣೆ, ಡಾ| ಚನ್ನಬಸಪ್ಪ ಹಾಲಹಳ್ಳಿ, ರಾಮಕೃಷ್ಣ ಸಾಳೆ, ಗುರುನಾಥ ಜ್ಯಾಂತಿಕರ್‌, ರಾಜ್ಯ ಅಭಿವೃದ್ಧಿ ಸಮನ್ವಯ-ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಲಾಡಗೇರಿಯ ಗಂಗಾಧರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯರು, ರಾಚೊಟೇಶ್ವರ ಶಿವಾಚಾರ್ಯ, ಚಂದ್ರಶೇಖರ ಶಿವಾಚಾರ್ಯ, ಚನ್ನಬಸವ ಸ್ವಾಮೀಜಿ, ಗುರುಪಾದ ಸ್ವಾಮೀಜಿ, ಚನ್ನಮಲ್ಲ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಶಂಕರಲಿಂಗ ಸ್ವಾಮೀಜಿ, ಮುಖಂಡ ಈಶ್ವರಸಿಂಗ್‌ ಠಾಕೂರ್‌ ಉಪಸ್ಥಿತರಿದ್ದರು.

ಅರ್ಚಕರಾದ ಬಸಯ್ಯ ಸ್ವಾಮಿ, ಶಿವಶಂಕರ ಸ್ವಾಮಿ ಹಾಗೂ ತಂಡದವರು ವೈದಿಕ ರಾಷ್ಟ್ರಗೀತೆ ಹಾಗೂ ಕೋವಿಡ್‌ ನಿರ್ಮೂಲನೆಗಾಗಿ ಸಾಮೂಹಿಕ ಮಹಾಮೃತ್ಯುಂಜಯ ಮಂತ್ರ ಪಠಣ ಮಾಡಿಸಿದರು. ಪಂಚಪೀಠಗಳ ಪರಂಪರೆ ಕುರಿತು ಡಾ| ರಾಜಶೇಖರ ಶಿವಾಚಾರ್ಯ ರಚಿಸಿದ “ಸ್ವಯಂ ಪ್ರಭೆ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.

ಪ್ರಮುಖರಾದ ನಿರಂಜನ ಸ್ವಾಮಿ ಜ್ಯಾಂತಿ, ಪ್ರೊ| ಕುಮಾರಸ್ವಾಮಿ, ಗುರುರಾಜ ಸ್ವಾಮಿ ಮೋಳಕೇರಿ, ರವಿ ಸ್ವಾಮಿ, ವರದಯ್ಯ ಸ್ವಾಮಿ ಗಾದಗಿ, ಬಸಯ್ಯ ಸ್ವಾಮಿ ಹೆಡಗಾಪುರ, ಶಿವಕುಮಾರ ಸ್ವಾಮಿ, ಬಸವರಾಜ ಸ್ವಾಮಿ, ಡಾ| ಶರಣಯ್ಯ ಸ್ವಾಮಿ, ಆರ್‌.ಜಿ. ಮಠಪತಿ, ಪ್ರಕಾಶ ಮಠಪತಿ, ಶೇಖರ ಸ್ವಾಮಿ, ತೀರ್ಥಯ್ಯ ಸ್ವಾಮಿ, ಮಹೇಶ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ವೈಜಿನಾಥ ಸ್ವಾಮಿ, ಕಾಶೀನಾಥ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಹಳ್ಳದಕೇರಿ ಇದ್ದರು.
ಕೋವಿಡ್‌ ಕಾರಣ ಫೇಸ್‌ಬುಕ್‌, ಯುಟ್ಯೂಬ್‌, ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು.

ಬರುವ ವರ್ಷದಿಂದ ಸರ್ಕಾರದ ವತಿಯಿಂದಲೇ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಬೇಕು. ಯಾವುದಾದರೊಂದು ವಿಶ್ವವಿದ್ಯಾಲಯದಲ್ಲಿ ಸಿದ್ಧಾಂತ ಶಿಖಾಮಣಿ ಅಧ್ಯಯನ ಪೀಠ ಸ್ಥಾಪಿಸಬೇಕು.
ಡಾ| ರಾಜಶೇಖರ ಶಿವಾಚಾರ್ಯರು,
ನೌಬಾದ್‌ ಜ್ಞಾನ ಶಿವಯೋಗಾಶ್ರಮ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.