ಕೆಎಂಎಫ್‌ಗೆ ಪಾಟೀಲ ನೂತನ ಅಧ್ಯಕ್ಷ


Team Udayavani, Nov 16, 2018, 1:09 PM IST

bid-1.jpg

ಕಲಬುರಗಿ: ತೀವ್ರ ಕುತೂಹಲ ಕೆರಳಿದ್ದ ಕಲಬುರಗಿ-ಬೀದರ-ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್‌)ದ ಅಧ್ಯಕ್ಷರ ಚುನಾವಣೆಯಲ್ಲಿ ರಾಮಚಂದ್ರ ಕಲ್ಯಾಣರಾವ (ಆರ್‌. ಕೆ) ಪಾಟೀಲ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಒಕ್ಕೂಟದ ಕೇಂದ್ರ ಗುರುವಾರ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಆರ್‌.ಕೆ.ಪಾಟೀಲ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಕಲಬುರಗಿ ಸಹಾಯಕ ಆಯುಕ್ತ ಎಂ. ರಾಚಪ್ಪ ಅವರು ಅವಿರೋಧ ಆಯ್ಕೆ ಘೋಷಿಸಿದರು. 

ಆಳಂದ ತಾಲೂಕು ಸರಸಂಬಾ ಗ್ರಾಮದ ಹಾಲು ಉತ್ಪಾದಕರ ಸಂಘದ ಸದಸ್ಯತ್ವದಿಂದ ಕಳೆದ ಅಕ್ಟೋಬರ್‌ 31ರಂದು ನಡೆದ ಒಕ್ಕೂದ ನಿರ್ದೇಶಕರ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿ ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ಕೆ. ಪಾಟೀಲ ಅವರು ಆಳಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್‌. ಪಾಟೀಲ ಅವರ ಸಹೋದರ ಪುತ್ರ. 

ಅಧ್ಯಕ್ಷ ಸ್ಥಾನಕ್ಕೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪುರ ಹಾಗೂ ರಾಜಶೇಖರ ಪಾಟೀಲ ಅವರ ಸಹೋದದರಾದ ಅನುಕ್ರಮವಾಗಿ ಮಾರುತಿ ಖಾಶೆಂಪುರ ಹಾಗೂ ರೇವಣಸಿದ್ದಪ್ಪ ಪಾಟೀಲ ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಇದರ ನಡುವೆ ಮಲ್ಲಿಕಾರ್ಜುನ ಬಿರಾದಾರ ಹೆಸರೂ ಮುಂಚೂಣಿಯಲ್ಲಿತ್ತು. ಆದರೆ ಕಳೆದ ಒಂದೂವರೆ ದಶಕದಿಂದ ಕಲಬುರಗಿಗೆ ಅಧ್ಯಕ್ಷ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜತೆಗೆ ಸಚಿವರ ಸಹೋದರರಿಗೆ ಮತ್ತೆ ಮಣೆ ಹಾಕಿದರೆ ಬೇರೆಯವರಿಗೆ ಅವಕಾಶ ಇಲ್ಲದಂತಾಗುತ್ತದೆ ಎಂಬುದನ್ನು ಮನಗಂಡು ಆರ್‌. ಕೆ.ಪಾಟೀಲ ಅವರನ್ನೇ ಒಮ್ಮತದ ಅಭ್ಯರ್ಥಿ ಎಂಬುದಾಗಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದರಿಂದ ಸುಗಮವಾಗಿ ಅವಿರೋಧ ಆಯ್ಕೆ ನಡೆಯಿತು. ಈ ಮೂಲಕ ಕಲಬುರಗಿ-ಬೀದರ- ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಕಾಂಗ್ರೆಸ್‌ ಬೆಂಬಲಿತ ಆಡಳಿತಕ್ಕೆ ಬಂದಂತಾಯಿತು. ಆರ್‌.ಕೆ. ಪಾಟೀಲ ಕೆಎಂಎಫ್‌ ಅಧ್ಯಕ್ಷರಾಗಲಿದ್ದಾರೆ ಎಂದು ಉದಯವಾಣಿ ಬುಧವಾರದ ಸಂಚಿಕೆಯಲ್ಲಿಯೇ ಸಮಗ್ರ ವರದಿ ಮಾಡಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದವರು: ಚುನಾಯಿತ 12 ನಿರ್ದೇಶಕರ ಜತೆಗೆ ಐವರು ಅಧಿಕಾರಿಗಳು ಹಾಗೂ ಸರ್ಕಾರದಿಂದ ನಾಮನಿರ್ದೇಶನರಾದ ಸದಸ್ಯರೊಬ್ಬರು ಸೇರಿ 18 ಸದಸ್ಯರು ಚುನಾವಣೆ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೊದಲ
ಬಾರಿಗೆ ನಿರ್ದೇಶಕರಾಗಿ ಚುನಾಯಿತರಾದ ಆಳಂದದ ಸಂತೋಷ ಸುಭಾಷ ಗುತ್ತೇದಾರ, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿಯವರು ಮಾತ್ರ ಗೈರು ಹಾಜರಾಗಿದ್ದರು. ನಿರ್ದೇಶಕರಾದ ಈರಣ್ಣ ಶಿವಲಿಂಗಪ್ಪ ಝಳಕಿ, ಚಂದ್ರಕಾಂತ ಭೂಸನೂರ, ರೇವಣಸಿದ್ದಪ್ಪ ಪಾಟೀಲ, ಶ್ರೀಕಾಂತ ವೈಜನಾಥ ದಾನಿ, ಬಂಡುರಾವ ಕುಲಕರ್ಣಿ, ದಿವಾಕರರಾವ್‌ ಜಾಗೀರದಾರ್‌, ವಿಠಲರೆಡ್ಡಿ ಕೃಷ್ಣಾರೆಡ್ಡಿ, ಮಾರುತಿ ಖಾಶೆಂಪುರ, ಮಲ್ಲಿಕಾರ್ಜುನ ಬಿರಾದಾರ ಹಾಗೂ ಭೀಮರಾವ ಅಮೃತರಾವ್‌ ಪಾಲ್ಗೊಂಡಿದ್ದರು.

ಇದರ ಜತೆಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು, ಕೆಎಂಎಫ್‌ ಒಕ್ಕೂಟದ ರಾಜ್ಯ ಮಟ್ಟದ ಅಧಿಕಾರಿ, ಕಲಬುರಗಿ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸರ್ಕಾರದಿಂದ ಕಲಬುರಗಿ ಕೆಎಂಎಫ್‌ ಒಕ್ಕೂಟಕ್ಕೆ ನಾಮನಿರ್ದೇಶನಗೊಂಡಿರುವ ಸಂಗಪ್ಪ ಶಾಮರಾವ ಪಾಟೀಲ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. 

ವಿಜಯೋತ್ಸವ: ಆರ್‌.ಕೆ. ಪಾಟೀಲ ಕೆಎಂಎಫ್‌ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿಜಯೋತ್ಸವ ಆಚರಿಸಲಾಯಿತು. ಮಾಜಿ ಶಾಸಕ ಬಿ.ಆರ್‌. ಪಾಟೀಲ, ನಿರ್ದೇಶಕರು-ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬಸವರಾಜ ವಾಲಿ, ನಿರ್ದೇಕರಾದ ಸೋಮಶೇಖರ ಗೋನಾಯಕ, ಜಿಪಂ ಸದಸ್ಯ ಅರುಣ ಎಂ. ಪಾಟೀಲ, ಶರಣು ಪಾಟೀಲ ಸೇರಿದಂತೆ ಇತರರು ಶುಭ ಕೋರಿದರು.

ಹೈನೋದ್ಯಮ ಉತ್ತೇಜನಕ್ಕೆ ಕ್ರಮ
ಸಕಾಲಕ್ಕೆ ಮಳೆ ಬಾರದೇ ರೈತರು ಕಷ್ಟ ಅನುಭವಿಸುತ್ತಿರುವುದರಿಂದ ಪರ್ಯಾಯವಾಗಿ ಆರ್ಥಿಕವಾಗಿ ಸ್ವಾವಲಂಬನೆ ರೂಪಿಸುವ ಹೈನೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಂಡು ಹಾಲು ಉತ್ಪಾದನೆಗೆ ಒತ್ತು ನೀಡಲಾಗುವುದು. ಪಕ್ಷದ ವರಿಷ್ಠರು ವಿಶ್ವಾಸವಿಟ್ಟು ಒಕ್ಕೂಟಕ್ಕೆ ಅಧ್ಯಕ್ಷರನ್ನಾಗಿಸಿದ್ದಾರೆ. ಹೀಗಾಗಿ ಎಲ್ಲರ ಸಲಹೆ-ಸೂಚನೆ ಮೇರೆಗೆ ಆರ್ಥಿಕ ಸಬಲತೆ ಹೊಂದುವ ನಿಟ್ಟಿನಲ್ಲಿ ಒಕ್ಕೂಟ ಮುನ್ನಡೆಸಿಕೊಂಡು ಹೋಗಲಾಗುವುದು.
 ಆರ್‌.ಕೆ. ಪಾಟೀಲ, ನೂತನ ಅಧ್ಯಕ್ಷರು, ಕೆಎಂಎಫ್‌

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.