ಜಿಲ್ಲಾದ್ಯಂತ ಶಾಂತಿಯುತ ಮತದಾನ


Team Udayavani, May 13, 2018, 3:03 PM IST

bid-1.jpg

ಬೀದರ: ಕೆಲ ಮತಗಟ್ಟೆಗಳ ಮತಯಂತ್ರದಲ್ಲಿ ತಾಂತ್ರಿಕ ದೋಷ, ಗೊಂದಲ- ಗಲಾಟೆ ಘಟನೆಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಿಗೆ ಶನಿವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಕಂದಾಯ ಗ್ರಾಮ ಘೋಷಣೆಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದ ಭಾಲ್ಕಿ ತಾಲೂಕಿನ ಚಳಕಾಪುರವಾಡಿಯ ಗ್ರಾಮಸ್ಥರು ಸಂಜೆ ವೇಳೆಗೆ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 64 ಜನ ಅಭ್ಯರ್ಥಿಗಳು ಕಣದಲ್ಲಿದ್ದು, ಒಟ್ಟು 1,495 ಮತಗಳನ್ನು ಸ್ಥಾಪಿಸಲಾಗಿತ್ತು. 6,87,586 ಪುರುಷರು ಮತ್ತು 6,31,944 ಮಹಿಳೆಯರು ಅಲ್ಲದೇ 68 ಇತರೆ ಸೇರಿದಂತೆ 13,19,598 ಮತದಾರರು ಅರ್ಹರಾಗಿದ್ದರು. ಬೆಳಗ್ಗೆ 7ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ನಡೆದಿದೆ. ಭಾಲ್ಕಿ ತಾಲೂಕಿನ ಮುರಾಳದಲ್ಲಿ ಮತದಾನ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿವಿಧೆಡೆ ಇವಿಎಂನಲ್ಲಿ ದೋಷ: ಔರಾದ ಕ್ಷೇತ್ರದ ಬಲ್ಲೂರ(ಜೆ), ಹಂಗರಗಾ, ಧೂಪತಮಗಾಂವ್‌, ಬೋರ್ಗಿ(ಜೆ), ಕೌಠಾ(ಬಿ), ಕರಂಜೆ (ಕೆ), ಎಕಂಬಾ ಮತ್ತು ಕಂದಗೂಳ್‌, ಬಸವಕಲ್ಯಾಣ ಕ್ಷೇತ್ರದ ಬೆಟಗೇರಾ, ಹುಲಸೂರು, ಮಿರಕಲ್‌, ಹುಮನಾಬಾದ್‌ ಕ್ಷೇತ್ರದ ಸುಲ್ತಾನಾಬಾದ್‌, ಪದವಿ ಕಾಲೇಜು ಮತಗಟ್ಟೆ, ಘೋಡವಾಡಿ, ಕನಕಟ್ಟಾ ಮತ್ತು ನಂದಗಾಂವ್‌, ಬೀದರ ಕ್ಷೇತ್ರದ ನೌಬಾದ್‌ ಹಾಗೂ ಬೀದರ ದಕ್ಷಿಣ ಕ್ಷೇತ್ರದ ಬಾವಗಿ ಮತಗಟ್ಟೆಗಳಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಕೆಲ ಕಾಲ ಮತದಾನಕ್ಕೆ ಅಡ್ಡಿಯಾಯಿತು. ಬೀದರ ನಗರದ ಹೌಸಿಂಗ್‌ ಬೋರ್ಡ್‌ ಕಾಲೋನಿಯ ಬೂತ್‌ನಲ್ಲಿ ವಿದ್ಯುತ್‌ ಕೈಕೊಟ್ಟ ಕಾರಣ ಕೆಲ ಸಮಯ ಮೊಬೈಲ್‌ ಟಾರ್ಚ್‌ ಬಳಸಿ ಮತದಾನ ಪ್ರಕ್ರಿಯೆ ನಡೆಸಬೇಕಾಯಿತು.

ಆರು ಕ್ಷೇತ್ರಗಳಲ್ಲಿ ಆರಂಭದ ವೇಳೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಧ್ಯಾಹ್ನದ ವೇಳೆಗೆ ಚುರುಕುಗೊಂಡಿತ್ತು. ವಯೋವೃದ್ಧರು, ಮಹಿಳೆಯರು ಸೇರಿದಂತೆ ಎಲ್ಲ ಮತದಾರರು ಬಿರು ಬಿಸಿಲಿನಲ್ಲಿ ಮತ ಕೇಂದ್ರದತ್ತ ಹೆಜ್ಜೆ ಹಾಕಿ, ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ವೃದ್ಧರು, ಅಂಗವಿಕಲರು ಸಹ ಉತ್ಸಾಹ ತೋರಿದ್ದು, ಮತದಾನಕ್ಕಾಗಿ ಅವರ ಕುಟುಂಬಸ್ಥರು ಅವರಿಗೆ ನೆರವಾದರು. 

ಆಕರ್ಷಿಸಿದ ವಿಶೇಷ ಮತಗಟ್ಟೆಗಳು: ಮತದಾರರನ್ನು ಪ್ರೇರೇಪಿಸುವ ದಿಸೆಯಲ್ಲಿ ಚುನಾವಣಾ ಆಯೋಗ ಅಗತ್ಯ ಸೌಲತ್ತುಗಳೊಂದಿಗೆ ಸ್ಥಾಪಿಸಿರುವ ಮಾದರಿ ಮತಗಟ್ಟೆಗಳು ಈ ಬಾರಿ ಗಮನ ಸೆಳೆದಿವೆ. ಅದರಲ್ಲೂ ವಿಶೇಷವಾಗಿ ಸಖೀ ಮತಗಟ್ಟೆ ಆಕರ್ಷಿಸಿದವು.

ಮಹಿಳಾ ಮತದಾರರ ಸಂಖ್ಯೆ ಶೇ.50ಕ್ಕಿಂತಲೂ ಅಧಿಕವಿರುವ ಪ್ರತಿ ಕ್ಷೇತ್ರದಲ್ಲಿ 5ರಂತೆ 30 ಮತಗಟ್ಟೆಗಳನ್ನು ಸಖೀ (ಪಿಂಕ್‌) ಮತಗಟ್ಟೆಗಳೆಂದು ಗುರುತಿಸಲಾಗಿತ್ತು. ವಿನೂತನ ಕೇಂದ್ರಗಳು ಪಿಂಕ್‌ ಬಣ್ಣದಿಂದ ಕಂಗೊಳಿಸಿದವು. ಈ ಕೇಂದ್ರಗಳಲ್ಲಿ ಹಕ್ಕು ಚಲಾಯಿಸಿದ ಮತದಾರರು ಹೊಸತನದ ಅನುಭವ ಪಡೆದರು.

ವಿಶೇಷ ಕೇಂದ್ರಗಳಲ್ಲಿ ಚುನಾವಣಾಧಿಕಾರಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಇದ್ದರು. ಅಷ್ಟೇ ಅಲ್ಲ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ಸಹ ಮಹಿಳೆಯರೇ ಇರುವುದು ವಿಶೇಷ ಎನಿಸಿಕೊಂಡಿತು. ಪ್ರತಿಯೊಂದು ಮತಗಟ್ಟೆಗಳಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಇದ್ದು, ಮಹಿಳೆಯರಿಗೆ ವಿಶ್ರಾಂತಿಗೆ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. 

ಅಂಗವಿಕಲರಿಗೆ ರ್‍ಯಾಂಪ್‌-ವ್ಹೀಲ್‌ಚೇರ್‌: ಅಷ್ಟೇ ಅಲ್ಲ 6 ಕ್ಷೇತ್ರಗಳ ಪೈಕಿ ಅಗತ್ಯ ಮೂಲಸೌಕರ್ಯಗಳಿಂದ ಕೂಡಿದ 12 ಮಾದರಿ ಮತಗಟ್ಟೆಗಳನ್ನು ಕೂಡ ಸ್ಥಾಪಿಸಲಾಗಿತ್ತು. ಜಿಪಂ ಕಚೇರಿ ಕಟ್ಟಡದ ಆವರಣದಲ್ಲಿ ಕೇವಲ ಅಂಗವಿಕಲ ಅಧಿ ಕಾರಿಗಳು ಮತ್ತು ಸಿಬ್ಬಂದಿಗಳೇ ಕರ್ತವ್ಯ ನಿರ್ವಹಿಸುವ ವಿಶೇಷ ಮತಗಟ್ಟೆಯೊಂದನ್ನು ಕೂಡ ತೆರೆಯಲಾಗಿತ್ತು.

ಸಾಮಾನ್ಯ ಮತಗಟ್ಟೆಗಳಲ್ಲಿಯೂ ಈ ಬಾರಿ ಮೂಲ ಸೌಕರ್ಯಕ್ಕೆ ಒತ್ತು ನೀಡಿರುವುದು ಕಂಡು ಬಂತು. ಪೆಂಡಾಲ್‌, ನೀರಿನ ವ್ಯವಸ್ಥೆ, ಅಂಗವಿಕಲರಿಗೆ ರ್‍ಯಾಂಪ್‌, ವ್ಹೀಲ್‌ಚೇರ್‌ ವ್ಯವಸ್ಥೆ ಮಾಡಲಾಗಿತ್ತು. ಕೆಲವು ಮತ ಕೇಂದ್ರಗಳಲ್ಲಿ ಅವ್ಯವಸ್ಥೆ ಕಂಡುಬಂತು.

ಅಪ್ಪನ ಶವ ಇಟ್ಟು ಮತದಾನ ಅಪ್ಪನ ಶವ ಮನೆಯಲ್ಲಿಟ್ಟು ಮಗ ಮತದಾನ ಮಾಡುವ ಮೂಲಕ ಪ್ರಜ್ಞೆ ಮೆರೆದಿರುವ
ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತಿದ್ದ
ಬಸಯ್ಯ ಸ್ವಾಮಿ ಶನಿವಾರ ನಸುಕಿನಜಾವ ಮೃತಪಟ್ಟಿದ್ದರು. ಅವರ ಪುತ್ರ ರಾಜಕುಮಾರ ಸ್ವಾಮಿ ಬೆಳಗ್ಗೆ ಗ್ರಾಮದ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ನಂತರ ಮದ್ಯಾಹ್ನ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ.
 
ಬೀದರ ದಕ್ಷಿಣ ಕ್ಷೇತ್ರದ ಗೋರನಳ್ಳಿ(ಬಿ) ಗ್ರಾಮದಲ್ಲಿ 105 ವಯಸ್ಸಿನ ವೃದ್ಧೆ ಜಯಮ್ಮ ಹೊಸಮನಿ ಮತ ಹಾಕಿ ಪ್ರೇರಣೆಯಾಗಿದ್ದರೆ, ಆಣದೂರ ಗ್ರಾಮದಲ್ಲಿ ಫಿಲಿಪ್‌ ಮತ್ತು ಕಲ್ಪನಾ ನವ ವಿವಾಹಿತರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಹಲವು ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಹಾಕಿದ ಯುವ ಸಮೂಹದಲ್ಲಿ ಉತ್ಸಾಹ ಕಂಡು ಬಂತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.