ಜನ ಕಲ್ಯಾಣವೇ ಸಹಕಾರಿ ಮಂತ್ರ
Team Udayavani, Jan 2, 2022, 3:25 PM IST
ಬೀದರ: ಸಮಾಜದಲ್ಲಿನ ಆರ್ಥಿಕ ಹಿಂದುಳಿದವರ ಹಾಗೂ ಸೌಲಭ್ಯಗಳಿಂದ ವಂಚಿತರಾದವರ ಕಲ್ಯಾಣವೇ ಸೌಹಾರ್ದ ಸಹಕಾರಿಗಳ ಮೂಲ ಮಂತ್ರವಾಗಬೇಕು ಎಂದು ಸಂಯುಕ್ತ ಸಹಕಾರಿ ನಿರ್ದೇಶಕ ಗುರುನಾಥ ಜ್ಯಾಂತಿಕರ ಹೇಳಿದರು.
ನಗರದ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿಯಲ್ಲಿ ಸೌಹಾರ್ದ ದಿನಚಾರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಡೀ ವಿಶ್ವವು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಇದ್ದರೆ ಸೌಹಾರ್ದ ಸಹಕಾರಿಗಳು ಇಂದು ಕಾಯ್ದೆ ಜಾರಿಗೆ ಬಂದ ದಿನವನ್ನು ಸೌಹಾರ್ದ ದಿನ ಎಂದು ರಾಜ್ಯಾದ್ಯಂತ ಆಚರಿಸುತ್ತಾರೆ ಎಂದರು.
ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷ ಸಂಜೀವಕುಮಾರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಸಂಜಯ ಕ್ಯಾಸಾ, ರಾಜಶೇಖರ ನಾಗಮುರ್ತಿ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ 2022ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಜಿಲ್ಲೆಯ ಹಿರಿಯ ಸಹಕಾರಿಗಳಾದ ಮಹ್ಮದ್ ಸೈಫ್, ಶ್ರೀರಂಗ, ರಾಜಕುಮಾರ, ಕುಬೆರಪ್ಪ, ಶಿವರಾಜ ಹೂಗಾರ, ಅನಿಲಕುಮಾರ, ಸಂಜೀವ, ಶಿವಾನಂದ, ಶಿವರಾಜ ಇನ್ನಿತರರಿದ್ದರು. ಜಿಲ್ಲಾ ಸಂಯೋಜಕ ವೀರಶಟ್ಟಿ ಕಾಮಣ್ಣಾ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ