ಗರಿಗೆದರಿದ ಕೃಷಿ ಚಟುವಟಿಕೆ; ಬಿತ್ತನೆಗೆ ಸಿದ್ಧತೆ


Team Udayavani, May 24, 2022, 1:03 PM IST

14agriculture

ಬೀದರ: ಜಿಲ್ಲೆಯಲ್ಲಿ ಚುರುಕುಗೊಂಡಿರುವ ಪೂರ್ವ ಮುಂಗಾರು ಮಳೆ ರೈತ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿದೆ.

ಮುಂಗಾರು ಹಂಗಾಮು ಬಿತ್ತನೆಗೆ ಅನ್ನದಾತರು ಭೂಮಿ ಸಜ್ಜುಗೊಳಿಸಿ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಅಸಾನಿ ಚಂಡಮಾರುತ ಪ್ರಭಾವದಿಂದ ಜಿಲ್ಲೆಯ ಹಲವೆಡೆ ಮಳೆ ಆಗುತ್ತಿದೆ. ಮುಂಗಾರು ಪ್ರವೇಶಕ್ಕೂ ಮುನ್ನವೇ ವರ್ಷ ಧಾರೆ ಆಗುತ್ತಿರುವುದು ಕೃಷಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಕೋವಿಡ್‌ ಜತೆಗೆ ಅತಿವೃಷ್ಟಿಯಿಂದಾಗಿ ಕಳೆದೆರಡು ವರ್ಷಗಳಿಂದ ನಲುಗಿ ಹೋಗಿರುವ ರೈತ ವರ್ಗ, ಈ ಬಾರಿ ಭರ್ಜರಿ ಮಳೆಯಾಗಿ ಉತ್ತಮ ಫಸಲು ಕೈಗೆ ಸಿಗಲಿ ಎಂಬ ಆಶಾಭಾವ ಹೊಂದಿದ್ದು, ಈ ನಿಟ್ಟಿನಲ್ಲಿ ಕೃಷಿ ಕಾರ್ಯಕ್ಕೆ ಸಜ್ಜಾಗುತ್ತಿದ್ದಾರೆ.

ಮುಂಗಾರು ಹಂಗಾಮು ಬಿತ್ತನೆಗೆ ತಯಾರಾಗುತ್ತಿರುವ ರೈತರಿಗೆ ನೆರವಾಗಲು ಕೃಷಿ ಇಲಾಖೆ ಕೂಡ ಸಿದ್ಧವಾಗುತ್ತಿದೆ. ಕೃಷಿ ಇಲಾಖೆ ಅಂಕಿ-ಅಂಶಗಳ ಪ್ರಕಾರ ಮಳೆಯಾಶ್ರಿತ ಪ್ರದೇಶವಾಗಿರುವ ಬೀದರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 3.75 ಲಕ್ಷ ಹೆಕ್ಟೇರ್‌ ಜಮೀನಿನಲ್ಲಿ ಬಿತ್ತನೆ ಗುರಿ ಇದ್ದು, ಒಟ್ಟಾರೆ 27.22 ಟನ್‌ ಕೃಷಿ ಉತ್ಪಾದನೆ ಅಂದಾಜಿಸಲಾಗಿದೆ. ಒಟ್ಟು ಬಿತ್ತನೆ ಪ್ರದೇಶದ ಪೈಕಿ ಶೇ.55ರಷ್ಟು ಅಂದರೆ 1.92 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಸೊಯಾಬಿನ್‌ ಬೆಳೆಯಲು ನಿರ್ಧರಿಸಲಾಗಿದೆ.

ಪ್ರಕೃತಿ ವಿಕೋಪದ ಹೊಡೆತಕ್ಕೂ ಒಗ್ಗಿಕೊಳ್ಳುತ್ತಿರುವ ಕಾರಣ ಕೃಷಿಕರು ಸೊಯಾಬಿನ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹಾಗಾಗಿ 10 ವರ್ಷಗಳಿಂದ ಸೊಯಾಬಿನ್‌ ಬಿತ್ತನೆ ಪ್ರದೇಶ ಹೆಚ್ಚುತ್ತಿರುವುದು ಗಮನಾರ್ಹ. ಇನ್ನುಳಿದಂತೆ 1.35 ಹೆಕ್ಟೇರ್‌ ಬೇಳೆ ಕಾಳು ಬಿತ್ತನೆ ಮಾಡಿ 1.62 ಲಕ್ಷ ಟನ್‌ ನಷ್ಟು ಇಳುವರಿ ಪಡೆಯುವ ಗುರಿ ಇದೆ. ಇದರಲ್ಲಿ 90 ಸಾವಿರ ಹೆಕ್ಟೇರ್‌ ತೊಗರಿ, 25 ಸಾವಿರ ಹೆಕ್ಟೇರ್‌ ಹೆಸರು ಮತ್ತು 20 ಸಾವಿರ ಹೆಕ್ಟೇರ್‌ ಉದ್ದು ಬಿತ್ತನೆ ಸೇರಿದೆ. ಅದೇ ರೀತಿ 12 ಸಾವಿರ ಹೆಕ್ಟೇರ್‌ನಲ್ಲಿ ಜೋಳ, 4 ಸಾವಿರ ಹೆಕ್ಟೇರ್‌ನಲ್ಲಿ ಸಜ್ಜೆ, 1500 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 1 ಸಾವಿರ ಹೆಕ್ಟೇರ್‌ನಲ್ಲಿ ಭತ್ತ, 50 ಹೆಕ್ಟೇರ್‌ ನಲ್ಲಿ ಶೇಂಗಾ, 1 ಸಾವಿರ ಹೆಕ್ಟೇರ್‌ನಲ್ಲಿ ಎಳ್ಳು, 100 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿ, 1 ಸಾವಿರ ಹೆಕ್ಟೇರ್‌ನಲ್ಲಿ ಕಾರೆಳ್ಳು ಬಿತ್ತನೆ ಗುರಿ ಹೊಂದಲಾಗಿದೆ.

ಮುಂಗಾರು ಪ್ರವೇಶಕ್ಕೂ ಮುನ್ನವೇ ಮಳೆ ಆಗುತ್ತಿರುವುದು ಈ ಬಾರಿ ಖಾರೀಫ್‌ ಬೆಳೆ ರೈತರನ್ನು ಕೈಹಿಡಿಯಬಹುದು ಎಂಬ ನಿರೀಕ್ಷೆ ಹೆಚ್ಚಿಸಿದೆ. ಇನ್ನೆರಡು ವಾರದಲ್ಲಿ ಬಿತ್ತನೆ ಶುರುವಾಗುವ ಹಿನ್ನೆಲೆ ಭೂಮಿ ಹದಗೊಳಿಸಿ, ಅಗತ್ಯ ಬೀಜ-ಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ. ಈ ವರ್ಷವಾದರೂ ಉತ್ತಮ ಮಳೆ ಮತ್ತು ಬೆಳೆ ಸಿಕ್ಕು ಆರ್ಥಿಕ ಸಂಕಷ್ಟದಲ್ಲಿರುವ ಅನ್ನದಾತರಲ್ಲಿ ನೆಮ್ಮದಿ ಮೂಡಲಿ. -ಶಿವರಾಜ ದೇಶಮುಖ, ರೈತ

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.