ಪಿಕೆಪಿಎಸ್‌ಗೆ ಬಿರುಸಿನ ಮತದಾನ


Team Udayavani, Jan 22, 2020, 12:56 PM IST

bidar-tdy-2

ಭಾಲ್ಕಿ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ದಿಕ್ಸೂಚಿಯಂದೇ ಬಿಂಬಿತವಾಗಿರುವ ತಾಲೂಕಿನ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮಂಗಳವಾರ ಬಿರುಸಿನ ಚುನಾವಣೆ ನಡೆಯಿತು.

ತಾಲೂಕಿನ ವ್ಯಾಪ್ತಿಯ ಒಟ್ಟು 36 ಪಿಕೆಪಿಎಸ್‌ ಗಳ ಪೈಕಿ ಹಲಬರ್ಗಾ ಮತ್ತು ಡೊಣಗಾಪೂರ ಪಿಕೆಪಿಎಸ್‌ ಗಳಿಗೆ ಮಧ್ಯಂತರ ಚುನಾವಣೆ ನಡೆದ ಕಾರಣ, ಬಾಕಿ ಉಳಿದ 34ರಲ್ಲಿ 10 ಪಿಕೆಪಿಎಸ್‌ ಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಉಳಿದ 24 ಪಿಕೆಪಿಎಸ್‌ಗಳಿಗೆ ಚುನಾವಣೆ ನಡೆದಿದ್ದು, ಕಣದಲ್ಲಿರುವ 582 ಅಭ್ಯರ್ಥಿಗಳು ಮತದಾನ ಮಾಡಿಸುವಲ್ಲಿ ಹರಸಾಹಸ ನಡೆಸಿದರು. ಚುನಾವಣೆ ನಡೆಯುತ್ತಿರುವ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನಾನಾ ಕ್ಷೇತ್ರಗಳಿಂದ 110 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಸ್ಥಾನಗಳಿಗೆ ಚುನಾವಣೆ ನಡೆಯುತ್ತಲಿದೆ.

ಕಣದಲ್ಲಿರುವ ಅಭ್ಯರ್ಥಿಗಳು: ಸಾಮಾನ್ಯ ಕ್ಷೇತ್ರದಲ್ಲಿ 285 ಅಭ್ಯರ್ಥಿಗಳು, ಪರಿಶಿಷ್ಟ ಜಾತಿ ಕ್ಷೇತ್ರದಲ್ಲಿ 50, ಪರಿಶಿಷ್ಟ ಪಂಗಡ ಕ್ಷೇತ್ರದಲ್ಲಿ 36, ಪ್ರವರ್ಗ ಎ ಕ್ಷೇತ್ರದಲ್ಲಿ 48, ಪ್ರವರ್ಗ ಬಿ ಕ್ಷೇತ್ರದಲ್ಲಿ 48, ಮಹಿಳಾ ಕ್ಷೇತ್ರದಿಂದ 68 ಮತ್ತು ಸಾಲರಹಿತ ಕ್ಷೇತ್ರದಿಂದ 47 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರೆಲ್ಲರೂ ಗೆಲುವಿಗಾಗಿ ನಾನಾ ತಂತ್ರ ಹೆಣೆದಿದ್ದು, ಚುನಾವಣೆಯ ಸಮಯದಲ್ಲಿ ಪ್ರತಿಶತ ಮತದಾನವಾಗುವಂತೆ ಎಚ್ಚರ ವಹಿಸುತ್ತಲಿದ್ದಾರೆ.

ಅವಿರೋಧ ಆಯ್ಕೆಯಾದ ಪಿಕೆಪಿಎಸ್‌: ಭಾಲ್ಕಿಪಟ್ಟಣ, ಕುರುಬಖೇಳಗಿ, ಮೊರಂಬಿ, ಧನ್ನೂರ (ಎಚ್‌), ಬಾಳೂರ, ಗೋರಚಿಂಚೋಳಿ, ಲಖಣಗಾಂವ, ಕಾಸರ ತುಗಾಂವ, ಜಮಖಂಡಿ ಮತ್ತು ಕಣಜಿ ಪಿಕೆಪಿಎಸ್‌ಗಳಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧಧವಾಗಿ ಆಯ್ಕೆ ಮಾಡಲಾಗಿದೆ.

ಚುನಾವಣೆ ನಡೆಯುವ ಪಿಕೆಪಿಎಸ್‌: ನಾವದಗಿ, ದಾಡಗಿ, ವಳಸಂಗ, ಅಂಬೆಸಾಂಗವಿ, ಬೀರಿ(ಬಿ), ಕಳಸದಾಳ, ತಳವಾಡ(ಎಮ್‌), ಜ್ಯಾಂತಿ, ಕೋನಮೆಳಕುಂದಾ, ಸಿದ್ದೇಶ್ವರ, ಜೋಳದಪಕಾ, ಹುಪಳಾ, ನಿಟ್ಟೂರ(ಬಿ), ಭಾತಂಬ್ರಾ, ಶಿವಣಿ, ಮೇಥಿಮೆಳಕುಂದಾ, ಸಾಯಿಗಾಂವ, ಕೇಸರ ಜವಳಗಾ, ಮೆಹಕರ, ಅಟ್ಟರ್ಗಾ, ತೂಗಾಂವ(ಎಚ್‌), ಖಟಕಚಿಂಚೋಳಿ, ಚಳಕಾಪುರ, ಮತ್ತು ಬ್ಯಾಲಹಳ್ಳಿ(ಕೆ) ಪಿಕೆಪಿಎಸ್‌ ಗಳಲ್ಲಿ ಮಂಗಳವಾರ ಬಿರುಸಿನ ಚುನಾವಣೆ ನಡೆದಿದ್ದು, ನಾಲ್ಕು ಗಂಟೆಗೆ ಚುನಾವಣೆ ಮುಕ್ತಾಯ ಗೊಳ್ಳಬೇಕಿತ್ತು. ಆದರೆ ಉದ್ದನೆಯ ಸಾಪು ಇರುವ ಕಾರಣ ಸಂಜೆ 6 ಗಂಟೆಯ ನಂತರವೂ ಕೆಲವು ಪಿಕೆಪಿಎಸ್‌ಗಳಲ್ಲಿ ಚುನಾವಣೆ ನಡೆದ ವರದಿ ಬಂದಿದೆ. ಹೀಗಾಗಿ ಇಂದೇ ಪ್ರಕಟಿಸಬೇಕಾಗಿದ್ದ ಚುನಾವಣಾ ಫಲಿತಾಂಶದಲ್ಲಿ ವಿಳಂಬವಾಗಿದೆ.

ಒಟ್ಟಿಗೆ ಎಲ್ಲ ಕ್ಷೇತ್ರಗಳಿಗೂ ಒಬ್ಬರೇ ಮತದಾರರು ಮತ ಚಲಾಯಿಸುತ್ತಿರುವ ಕಾರಣ, ಪ್ರತಿ ಕ್ಷೇತ್ರಕ್ಕೂ ವಿವಿಧ ಬ್ಯಾಲೆಟ್‌ ಪೇಪರ ಕೊಡಲಾಗುತ್ತಿದೆ. ಒಬ್ಬ ಮತದಾರರಿಗೆ 5 ರಿಂದ 6 ಬ್ಯಾಲೆಟ್‌ ಪೇಪರಗಳನ್ನು ಕೊಡಲಾಗುತ್ತಿದ್ದು, ಇದರಿಂದ ಮತದಾರರಿಗೆ ತಾವು ಮತ ಚಲಾಯಿಸುವಲ್ಲಿ ಗೊಂದಲ ಸೃಷ್ಟಿಯಾದ ಪ್ರಸಂಗ ನಡೆದಿದೆ. ಇಂತಹ ಸಂದರ್ಭದಲ್ಲಿ ಚುನಾವಣಾ ಏಜೆಂಟರೆ ತಮಗೆ ಬೇಕಾದ ಅಭ್ಯರ್ಥಿಗಳಿಗೆ ಮತ ಚಾಲಾಯಿಸಿದ ಪ್ರಸಂಗಗಳು ಕೂಡ ನಡೆದಿವೆ.

 

-ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.