ಅನಾಥೆ ರೇಖಾ ವೈದ್ಯ ಶಿಕ್ಷಣಕ್ಕೆ ಶಾಹೀನ್‌ ನೆರವು


Team Udayavani, Nov 9, 2021, 4:00 PM IST

21education

ಬೀದರ: ಮೂರು ತಿಂಗಳ ಅವಧಿಯಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಆಘಾತದ ನಡುವೆಯೇ ನೀಟ್‌ನಲ್ಲಿ ಸಾಧನೆಗೈದ ಕೊಪ್ಪಳ ಜಿಲ್ಲೆ ಕುಷ್ಟಗಿಯ ರೇಖಾ ಅಡೂರ ಅವರ ವೈದ್ಯಕೀಯ ಕೋರ್ಸ್‌ ಶುಲ್ಕ ಭರಿಸಲು ಶಾಹೀನ್‌ ಶಿಕ್ಷಣ ಸಂಸ್ಥೆಗಳ ಸಮೂಹ ಮುಂದಾಗಿದೆ.

ಶಹಾಪುರ ಗೇಟ್‌ ಸಮೀಪದ ಶಾಹೀನ್‌ ಪ.ಪೂ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರೇಖಾ ಅವರನ್ನು ಸನ್ಮಾನಿಸಿದ ಶಾಹೀನ್‌ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ| ಅಬ್ದುಲ್‌ ಖದೀರ್‌ ನೆರವಿನ ಅಭಯ ನೀಡಿದರು.

ಮಾನವೀಯ ನೆಲೆಯಲ್ಲಿ ವಿದ್ಯಾರ್ಥಿನಿಯ ಐದು ವರ್ಷಗಳ ವೈದ್ಯಕೀಯ ಕೋರ್ಸ್‌ನ ಶುಲ್ಕ ಭರಿಸಲಾಗುವುದು. ಅಗತ್ಯವಾದರೆ ಹಾಸ್ಟೆಲ್‌ ಶುಲ್ಕ ಕಟ್ಟಲು ಸಹ ಸಿದ್ಧ ಎಂದು ಪ್ರಕಟಿಸಿದರಲ್ಲದೇ ಸ್ಥಳದಲ್ಲೇ ವಿದ್ಯಾರ್ಥಿನಿಗೆ ವೈದ್ಯಕೀಯ ಕೋರ್ಸ್‌ನ ಮೊದಲ ವರ್ಷದ ಶುಲ್ಕದ 60 ಸಾವಿರ ರೂ. ಚೆಕ್‌ ನೀಡಿದರು.

ಆರ್ಥಿಕ ಸಮಸ್ಯೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಬಾರದು. ದಾನಿಗಳು, ಸಂಘ ಸಂಸ್ಥೆಗಳು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಲು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಕನಸು ಸಾಕಾರಗೊಳಿಸಿದ ಶಾಹೀನ್‌

ನಾನು ವೈದ್ಯೆಯಾಗಬೇಕು ಎಂದು ನನ್ನ ತಂದೆ-ತಾಯಿ ಹೊತ್ತಿದ್ದ ಕನಸನ್ನು ಶಾಹೀನ್‌ ಸಾಕಾರಗೊಳಿಸಿದೆ. ಆದರೆ, ಅದನ್ನು ನೋಡಲು ಈಗ ಅವರೇ ಇಲ್ಲ ಎಂದು ವಿದ್ಯಾರ್ಥಿನಿ ರೇಖಾ ಅಡೂರ ಭಾವುಕರಾದರು. ಪಿಯುಸಿ ಶಿಕ್ಷಣ ಶಾಹೀನ್‌ನಲ್ಲೇ ಪಡೆದಿದ್ದೇನೆ. 2020ರ ನೀಟ್‌ನಲ್ಲಿ 391 ಅಂಕ ಬಂದ ಕಾರಣ ವೈದ್ಯಕೀಯ ಸೀಟು ಲಭಿಸಿರಲಿಲ್ಲ. ಹೀಗಾಗಿ ಮತ್ತೆ ನೀಟ್‌ ತರಬೇತಿ ಪಡೆದೆ. ಎರಡನೇ ಪ್ರಯತ್ನದಲ್ಲಿ 591 ಅಂಕಗಳು ದೊರಕಿದ್ದು, 22,883ನೇ ರ್‍ಯಾಂಕ್‌ ಬಂದಿದೆ. ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಸಿಗಲಿದೆ ಎಂದು ತಿಳಿಸಿದರು.

ಕುಷ್ಟಗಿ ಪುರಸಭೆ ಉಪಾಧ್ಯಕ್ಷೆಯಾಗಿದ್ದ ತಾಯಿ ರಾಜೇಶ್ವರಿ ಏ.22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಖ್ಯ ಶಿಕ್ಷಕರಾಗಿದ್ದ ತಂದೆ ಸಿದ್ದಪ್ಪ ಜು.30ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ನೀಟ್‌ ಸಿದ್ಧತೆಯಲ್ಲಿ ತೊಡಗಿದ್ದಾಗಲೇ ತಂದೆ-ತಾಯಿ ಸಾವು ಆಘಾತ ಉಂಟು ಮಾಡಿತ್ತು. ಬಹಳ ದಿನಗಳವರೆಗೆ ದುಃ ಖದಿಂದ ಹೊರಬರಲು ಆಗಿರಲಿಲ್ಲ ಎಂದು ಹೇಳಿದರು.

ಡಾ| ಅಬ್ದುಲ್‌ ಖದೀರ್‌ ಹಾಗೂ ಕಾಲೇಜು ಉಪನ್ಯಾಸಕರು ಸಮಾಧಾನ ಹೇಳಿ, ಆತ್ಮವಿಶ್ವಾಸ ತುಂಬಿದರು. ಕಾಲೇಜಿನಲ್ಲಿರುವ ಉತ್ತಮ ಶೈಕ್ಷಣಿಕ ವಾತಾವರಣದಿಂದಾಗಿಯೇ ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಗಳಿಸಲು ಸಾಧ್ಯವಾಯಿತು. ಈಗ ವೈದ್ಯಕೀಯ ಶಿಕ್ಷಣಕ್ಕೂ ನೆರವಾಗುತ್ತಿರುವುದಕ್ಕೆ ಶಾಹೀನ್‌ಗೆ ಕೃತಜ್ಞಳಾಗಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿಇಒ ತೌಸಿಫ್‌ ಮಡಿಕೇರಿ, ಪ್ರಾಚಾರ್ಯ ಖಾಜಾ ಪಟೇಲ್‌ ಇದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.