ಅನ್ನಭಾಗ್ಯದಲ್ಲಿ ಕಳಪೆ ತೊಗರಿ ಬೇಳೆ ಪೂರೈಕೆ


Team Udayavani, Aug 1, 2018, 6:00 AM IST

18.jpg

ಬೀದರ: ಹಿಂದಿನ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಗುಣಮಟ್ಟದ ತೊಗರಿಬೇಳೆ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬೇಳೆಯನ್ನು ಕುದಿಯಲು ಇಟ್ಟರೆ ಗಂಟೆಗಟ್ಟಲೇ ಸಮಯ ಬೇಕಾಗುತ್ತದೆ ಎಂದೂ ಫ‌ಲಾನುಭವಿಗಳು ಆಪಾದಿಸಿದ್ದಾರೆ.

ರೈತರು ಬೆಳೆಯುವ ಉತ್ತಮ ಗುಣಮಟ್ಟದ ತೊಗರಿಯನ್ನೇ ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾ ಮಂಡಳಿ (ನಾಫ್ಡ್) ಮೂಲಕ ವಿವಿಧ ತೊಗರಿ ಖರೀದಿ ಕೇಂದ್ರಗಳಿಂದ ಖರೀದಿಸಲಾಗುತ್ತಿದೆ. ಆದರೆ, ಸದ್ಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುತ್ತಿರುವ ತೊಗರಿ ಬೇಳೆ ಮಾತ್ರ ಗುಣಮಟ್ಟದ್ದಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು, ಬೇರೆ ಬೇಳೆಕಾಳುಗಳನ್ನು ಮಿಶ್ರಣ ಮಾಡಲಾಗುತ್ತಿದೆಯೇ ಎಂಬ ಅನುಮಾನಗಳೂ ಮೂಡಿವೆ.

ಗುಣಮಟ್ಟ ಪರೀಕ್ಷೆ: ಟೆಂಡರ್‌ ಪಡೆದ ದಾಲ್‌ ಮಿಲ್‌ಗ‌ಳು ತೊಗರಿ ನಾಫ್ಡ್ ಮೂಲಕ ಪಡೆದು ಬೇಳೆಕಾಳು ಮಾಡಿ ಅನ್ನಭಾಗ್ಯ ಹಾಗೂ ಮಕ್ಕಳ ಮಧ್ಯಾಹ್ನದ ಊಟಕ್ಕೆ ವಿತರಿಸುತ್ತಿವೆ. ವಿತರಣೆಗೂ ಮುನ್ನ ಆಯಾ ತಾಲೂಕಿನ ಗೋದಾಮು ಸೇರುವ ವೇಳೆ ಗುತ್ತಿಗೆ ಪಡೆದ ಹೈದ್ರಾಬಾದ್‌ ಮೂಲದ ಭಗವತಿ ಏನಿಲ್ಯಾಬ್‌ ಮೂಲಕ ಬೇಳೆಕಾಳುಗಳ ಪರೀಕ್ಷೆ ನಡೆಸಲಾಗುತ್ತಿದೆ. 

ಅಧಿಕಾರಿಗಳ ನಿರ್ಲಕ್ಷ್ಯ: ಪಡಿತರ ಅಂಗಡಿಯಲ್ಲಿ 1 ಕೆಜಿ ಪ್ಯಾಕ್‌ ತೊಗರಿ ಬೇಳೆಯನ್ನು 38 ರೂ.ಗೆ ವಿತರಿಸಲಾಗುತ್ತಿದೆ. ಮಹಾರಾಷ್ಟ್ರದ ಎರಡನೇ
ಗುಣಮಟ್ಟದ ತೊಗರಿ ಬೇಳೆ ಹಾಗೂ ಬಟಾಣಿ ಬೇಳೆಗಳನ್ನು ಮಿಶ್ರಣ ಮಾಡಿ ವಿತರಣೆ ಮಾಡುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ. ಗುಣಮಟ್ಟದ ತೊಗರಿಯಿಂದ ಹೇಗೆ ಕಳಪೆ ಬೇಳೆ ಬರಲು ಸಾಧ್ಯವೆಂಬ ಪ್ರಶ್ನೆಯೂ ಉದ್ಭವಿಸಿದೆ.

ಟೆಂಡರ್‌: ತೊಗರಿ ಬೇಳೆ ವಿತರಿಸುವ ದಾಲ್‌ ಮಿಲ್‌ಗ‌ಳು ಟೆಂಡರ್‌ ಮೂಲಕ ಗುತ್ತಿಗೆ ಪಡೆದುಕೊಳ್ಳುತ್ತಿದ್ದಾರೆ. 100 ಕೆಜಿ ತೊಗರಿಯಲ್ಲಿ ಸರಾಸರಿ 60 ಕೆಜಿ ಉತ್ತಮ ತೊಗರಿ ಬೇಳೆ ಕಾಳಾಗುತ್ತವೆ. ಆದರೆ, ಗುತ್ತಿಗೆ ಪಡೆದವರು ಟೆಂಡರ್‌ನಲ್ಲಿ ಶೇ.70ಕ್ಕೂ ಅಧಿ ಕ ತೊಗರಿ ಬೇಳೆ ನೀಡುವುದಾಗಿ ದಾಖಲಿಸುತ್ತಿದ್ದು, ನಷ್ಟವಾಗ ಬಾರದೆಂದು ಇತರೆ ಬೇಳೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ ಎನ್ನುತ್ತಾರೆ ಕೆಲ ದಾಲ್‌ಮಿಲ್‌ಗಳ ಮಾಲೀಕರು.

ವಿವಿಧೆಡೆಯಿಂದ ದೂರುಗಳು ಬರುತ್ತಿವೆ. ಹೀಗಾಗಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯಿಂದ ತಪಾಸಣೆ ನಡೆಸಲು ಇಲಾಖೆ ಚಿಂತನೆ ನಡೆಸಿದೆ. ಈ ತಿಂಗಳಿಂದ ಎರಡು ಬಾರಿ ತಪಾಸಣೆ ನಡೆಸಿ, ಗುಣಮಟ್ಟಕ್ಕೆ ಮಹತ್ವ ನೀಡಲಾಗುವುದು.
● ಗುರುರಾಯ, ವ್ಯವಸ್ಥಾಪಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಬೀದರ

ದೂರು ಕುರಿತು ಈಗಾಗಲೇ ಇಲಾಖೆಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ. ಸದ್ಯ ಬೇಳೆಯ ಗುಣಮಟ್ಟ ಪರಿಶೀಲನೆ ನಡೆಸುತ್ತಿರುವ ಸಂಸ್ಥೆಯಲ್ಲದೇ ಆಹಾರ ಗುಣಮಟ್ಟ ಮತ್ತು ಸುರಕ್ಷತಾ ಇಲಾಖೆಯಿಂದಲೂ ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ. 
● ಸಿ.ಎಸ್‌.ಬಾಗಲಕೋಟ, ಆಹಾರ ಇಲಾಖೆ ಪ್ರಭಾರಿ ಉಪನಿರ್ದೇಶಕ

ವಿವಿಧ ದಾಲ್‌ಮಿಲ್‌ಗ‌ಳಿಗೆ ಟೆಂಡರ್‌ ಮೂಲಕ ನೀಡಿ ಗುಣಮಟ್ಟದ ಬೇಳೆ ಕಾಳು ವಿತರಿಸಬೇಕು ಎನ್ನುವ ನಿಯಮವಿದೆ. ದಾಲ್‌ಮಿಲ್‌ಗ‌ಳು ನೀಡುವ ಬೇಳೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು.
● ಜ್ಯೋತಿ, ನಾಫ್ಡ್ ಮುಖ್ಯಸ್ಥೆ, ಬೆಂಗಳೂರು

 ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.