ಜಮೀನಿಲ್ಲದಿದ್ದರೂ ಕೋಳಿ ಸಾಕಾಣಿಕೆ ಸಾಧ್ಯ


Team Udayavani, Feb 4, 2022, 3:01 PM IST

10farming

ಬೀದರ: ಕೃಷಿಯೊಂದಿಗೆ ಕೋಳಿ ಸಾಕಾಣಿಕೆ ಗ್ರಾಮೀಣ ಜನರ ಮುಖ್ಯ ಕಸುಬಾಗಿದ್ದು, ಸರಿಯಾದ ಮಾರುಕಟ್ಟೆ ಮಾಡುವ ಅರಿವಿದ್ದರೆ ಹೆಚ್ಚು ಆದಾಯ ಪಡೆಯಬಹುದು ಎಂದು ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಓಂಕಾರ ಪಾಟೀಲ ಹೇಳಿದರು.

ಜನವಾಡಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೋಳಿ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗಾಗಿ ಹಮ್ಮಿಕೊಂಡಿರುವ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಮೂರು ದಿನಗಳ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪಶುಪಾಲನೆ ಮತ್ತು ಕೃಷಿ ಇವೆರಡು ಒಂದೇ ನಾಣ್ಯದ ಎರಡು ಮುಖಗಳಂತೆ. ಜಮೀನು ಇದ್ದರೆ ಕೃಷಿ ಮಾಡಬಹುದು. ಆದರೆ, ಜಮೀನು ಇಲ್ಲದೇ ಮಾಡುವ ವ್ಯವಸಾಯ ಎಂದರೆ ಕೋಳಿ ಸಾಕಾಣಿಕೆ. ಇದರಲ್ಲಿ ಬಹುಮುಖ್ಯವಾದದ್ದು ಮಾರುಕಟ್ಟೆ ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಆರ್‌.ಎಲ್‌. ಜಾಧವ ಮಾತನಾಡಿ, ಇಂದಿನ ದಿನಗಳಲ್ಲಿ ಪೌಷ್ಟಿಕ ಆಹಾರದ ಬೇಡಿಕೆ ಹೆಚ್ಚಾಗಿದೆ. ಅದರಲ್ಲಿ ಮೊಟ್ಟೆ ಬಹುಮುಖ್ಯವಾದ ಸಂಪೂರ್ಣ ಸಮತೋಲನ ಆಹಾರವಾಗಿದೆ. ಹಾಗಾಗಿ ವೈಜ್ಞಾನಿಕ ಮಾಹಿತಿ ಪ್ರಕಾರ ಸಂಪೂರ್ಣ ಆಹಾರಕ್ಕಾಗಿ ಪ್ರತಿಯೊಬ್ಬರೂ ವರ್ಷಕ್ಕೆ 182ರಂತೆ ಮೊಟ್ಟೆ ಮತ್ತು 10.8 ಕೆ.ಜಿ ಮಾಂಸ ಸೇವಿಸಬೇಕು. ಆದರೆ ಹೆಚ್ಚು ಜನರಿಗೆ ಸಂಪೂರ್ಣ ಆಹಾರ ಪಡೆದುಕೊಳ್ಳುತ್ತಿಲ್ಲ ಎಂದರು.

ಕೆವಿಕೆ ಪಶು ವಿಜ್ಞಾನಿ ಡಾ| ಅಕ್ಷಯಕುಮಾರ ಪ್ರಾಸ್ತಾವಿಕ ಮಾತನಾಡಿ, ಕೋಳಿ ಸಾಕಾಣಿಕೆ ಸುಲಭ ಉದ್ಯಮ. ಕೋಳಿ ಸಾಕಾಣಿಕೆಗೆ ಬೇಕಾದ ಸ್ಥಳ ಬಹಳ ಕಡಿಮೆ, ಆದ್ದರಿಂದ ಎಲ್ಲ ವರ್ಗದ ರೈತರು ಕೈಗೊಳ್ಳಬಹುದಾದ ಉದ್ಯಮ ಇದಾಗಿದೆ. ಭೂಮಿ ಇಲ್ಲದವರಿಗೂ ಕೋಳಿ ಸಾಕಾಣಿಕೆ ಲಾಭದಾಯಕ ಉದ್ಯಮ. ಆಹಾರ ಧಾನ್ಯ ಉಪಯೋಗಿಸಿಕೊಂಡು ಪೌಷ್ಟಿಕ ಮಾಂಸ ಉತ್ಪಾದನೆ ಮಾಡುವ ಪ್ರಾಣಿಗಳಲ್ಲಿ ಕೋಳಿ ಪ್ರಥಮ ಸ್ಥಾನದಲ್ಲಿದೆ. ದಿನ ಬಳಕೆಯಲ್ಲಿರುವ ಏಕದಳ ಧಾನ್ಯಗಳಾದ ಜೋಳ, ಮುಸುಕಿನ ಜೋಳ ಮುಂತಾದ ಧಾನ್ಯಗಳನ್ನು ಕೋಳಿ ಆಹಾರದ ತಯಾರಿಕೆಯಲ್ಲಿ ಉಪಯೋಗಿಸಬಹುದು ಎಂದು ಸಲಹೆ ನೀಡಿದರು.

ತಾಂತ್ರಿಕ ತರಬೇತಿಯಲ್ಲಿ ಪಶು ವೈದ್ಯಾಧಿ ಕಾರಿ ಡಾ| ದೀಪಕ ಬಿರಾದಾರ ಕೋಳಿಗಳಲ್ಲಿ ಆಹಾರ ಪದ್ಧತಿ, ಲಸಿಕೆ ಕಾರ್ಯಕ್ರಮ ಹಾಗೂ ಕಾವು ಕೊಡುವಿಕೆ ಬಗ್ಗೆ ವಿವರಿಸಿದರು. ಕೃಷಿ ವಿಜ್ಞಾನಿ ಡಾ| ರಾಜೇಶ್ವರಿ ಆರ್‌. ನಿರೂಪಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.