ಗ್ರಾಪಂ ಮತ ಎಣಿಕೆಗೆ ಸಕಲ ಸಿದ್ಧತೆ


Team Udayavani, Dec 29, 2020, 4:54 PM IST

ಗ್ರಾಪಂ ಮತ ಎಣಿಕೆಗೆ ಸಕಲ ಸಿದ್ಧತೆ

ಬೀದರ: ಜಿಲ್ಲೆಯ ಐದು ತಾಲೂಕುಗಳಿಗೆ ಡಿ.22ರಂದುಮತ್ತು ಮೂರು ತಾಲೂಕುಗಳಿಗೆ ಡಿ.27ರಂದು ಮತದಾನಮುಕ್ತಾಯವಾಗಿದೆ. ಡಿ.30ರಂದು ಮತ ಎಣಿಕೆ ನಡೆಯಲಿದ್ದು,ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌ ತಿಳಿಸಿದ್ದಾರೆ.

ಬೀದರ ತಾಲೂಕಿನ ಮತ ಎಣಿಕೆಯು ಬೀದರನ ಬಿ.ವ್ಹಿ.ಬಿಕಾಲೇಜಿನಲ್ಲಿ, ಔರಾದ್‌ ಮತ್ತು ಕಮಲನಗರ ತಾಲೂಕುಗಳ ಮತೆ ಎಣಿಕೆ ಔರಾದನಅಮರೇಶ್ವರ ಪದವಿ ಕಾಲೇಜಿನಲ್ಲಿ, ಭಾಲ್ಕಿತಾಲೂಕಿನ ಮತ ಎಣಿಕೆಯು ಸರ್ಕಾರಿಪ್ರೌಢಶಾಲೆಯಲ್ಲಿ, ಬಸವಕಲ್ಯಾಣ ಮತ್ತು ಹುಲಸೂರ ತಾಲೂಕುಗಳ ಮತ ಎಣಿಕೆಯು ಬಸವ ಕಲ್ಯಾಣದ ಬಸವೇಶ್ವರ ಪ್ರೌಢಶಾಲೆಯಲ್ಲಿ, ಹುಮನಾಬಾದ ಮತ್ತು ಚಿಟಗುಪ್ಪಾ ತಾಲೂಕುಗಳ ಮತ ಎಣಿಕೆಯು ಹುಮನಾಬಾದನ ರಾಮ ಮತ್ತು ರಾಜ್‌ ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಳಗ್ಗೆ 8ರಿಂದ ಎಣಿಕೆ ಆರಂಭ: ಜಿಲ್ಲೆಯ ವಿವಿಧೆಡೆ ಇರುವ ಆಯಾ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆಯು ಏಕ ಕಾಲಕ್ಕೆ ಬೆಳಗ್ಗೆ ಸರಿಯಾಗಿ 8ರಿಂದ ಆರಂಭವಾಗಿ ಮತಗಳ ಎಣಿಕೆಮುಕ್ತಾಯವಾಗುವವರೆಗೆ ನಡೆಯಲಿದೆ. ಬೀದರ, ಬಸವಕಲ್ಯಾಣ ಮತ್ತು ಭಾಲ್ಕಿ ತಾಲೂಕುಗಳ ಕೇಂದ್ರದಲ್ಲಿ ಮತ ಎಣಿಕೆಗಾಗಿ ತಲಾ 15ರಂತೆ ಟೇಬಲ್‌ ಅಳವಡಿಸಲಾಗಿದೆ. ಚಿಟಗುಪ್ಪಾಮತ್ತು ಕಮಲನಗರ ತಾಲೂಕುಗಳಲ್ಲಿ ತಲಾ 6ರಂತೆ ಟೇಬಲ್‌ಅಳವಡಿಸಲಾಗಿದೆ. ಹುಮನಾಬಾದ, ಔರಾದ ಮತ್ತು ಹುಲಸೂರತಾಲೂಕುಗಳ ಮತ ಎಣಿಕೆಗೆ ಅನುಕ್ರಮವಾಗಿ 9, 7 ಮತ್ತು 2ಟೇಬಲ್‌ ಅಳವಡಿಸಲಾಗಿದೆ. ಮತ ಎಣಿಕೆಯು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಮತ ಎಣಿಕೆ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆಗಾಗಿ ತಲಾಒಂದು ಟೇಬಲ್‌ಗೆ ಒಬ್ಬ ಮೇಲ್ವಿಚಾರಕರು ಮತ್ತು ಸಿಬ್ಬಂದಿಯನ್ನುನಿಯೋಜಿಸಿದ್ದು, ಎಂಟೂ ತಾಲೂಕುಗಳಿಗೆ ಸಂಬಂ ಧಿಸಿದ ಮತ ಎಣಿಕೆಗಾಗಿ 75 ಮೇಲ್ವಿಚಾರಕರು ಮತ್ತು 75 ಸಹಾಯಕ ಸಿಬ್ಬಂದಿ ಸೇರಿ ಒಟ್ಟು 150 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ 8 ತಾಲೂಕುಗಳಲ್ಲಿ ಒಟ್ಟು 178 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 8675 ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬೀದರನಲ್ಲಿ 579, ಔರಾದ 330, ಕಮಲನಗರ263, ಬಸವಕಲ್ಯಾಣ 544, ಹುಲಸೂರ 72, ಹುಮನಾಬಾದ 325 ಹಾಗೂ ಚಿಟಗುಪ್ಪಾ 244 ಮತ್ತು ಭಾಲ್ಕಿ 555 ಸೇರಿ ಒಟ್ಟು 2912ಅಭ್ಯರ್ಥಿಗಳ ಆಯ್ಕೆಗಾಗಿ ಡಿ.30ರಂದು ಮತ ಎಣಿಕೆ ನಡೆಯಲಿದೆ. ಅವಿರೋಧ ಆಯ್ಕೆ: ಈಗಾಗಲೇ ಬೀದರನಲ್ಲಿ 36, ಔರಾದನಲ್ಲಿ 55, ಕಮಲನಗರದಲ್ಲಿ 18, ಬಸವಕಲ್ಯಾಣದಲ್ಲಿ 33, ಹುಲಸೂರದಲ್ಲಿ 05,ಹುಮನಾಬಾದ್‌ನಲ್ಲಿ 18, ಚಿಟಗುಪ್ಪಾದಲ್ಲಿ 05 ಮತ್ತು ಭಾಲ್ಕಿನಲ್ಲಿ 56ಸೇರಿ ಒಟ್ಟು 226 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

1-wqeqwew

Udayavani ವಿಶೇಷ ಪುರವಣಿ ಕಲ್ಯಾಣವಾಣಿ ಬಿಡುಗಡೆ

Khandre

3 DCM; ರಾಜ್ಯಕ್ಕೆ ಒಳ್ಳೆಯದಾಗುವಂತ ರೀತಿಯಲ್ಲಿ ತೀರ್ಮಾನ: ಈಶ್ವರ ಖಂಡ್ರೆ

10-humnabad

Humnabad: ಲಘು ಭೂಕಂಪನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.