ಮಿಷನ್‌-123 ಗುರಿ ಸಾಧನೆಗೆ ಸಿದ್ಧರಾಗಿ; ಕುಮಾರಸ್ವಾಮಿ

ಇಷ್ಟು ದಿನ ಕಷ್ಟಗಳನ್ನು ಎದುರಿಸುತ್ತಿದ್ದೀರಿ, ಈಗ ಸುಖ ಅನುಭವಿಸುತ್ತೀರಿ ಎಂದು ಭವಿಷ್ಯ ನುಡಿದರು.

Team Udayavani, Jul 30, 2022, 5:44 PM IST

ಮಿಷನ್‌-123 ಗುರಿ ಸಾಧನೆಗೆ ಸಿದ್ಧರಾಗಿ; ಕುಮಾರಸ್ವಾಮಿ

ಬೀದರ: ವಿಧಾನಸಭೆ ಚುನಾವಣೆ ಡಿಸೆಂಬರ್‌ ಇಲ್ಲವೇ ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಮಿಷನ್‌ -123 ಗುರಿ ತಲುಪಲು ಈಗಿನಿಂದಲೂ ತಯಾರಿ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕರೆ ನೀಡಿದರು.

ನಗರದ ಹೊರವಲಯದ ಚಿಕಪೇಟ್‌ನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಜೆಡಿಎಸ್‌ ಸಂಘಟನೆಗಾಗಿ ಸಮಾಲೋಚನೆ ಹಾಗೂ ಚುನಾವಣೆ ಸಿದ್ಧತೆಗಳ ಬಗ್ಗೆ ಚಿಂತನ-ಮಂಥನಕ್ಕಾಗಿ ನಡೆದ ಕಲ್ಯಾಣ ಕರ್ನಾಟಕದ ಭಾಗದ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಶಾಸಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ 40 ಕ್ಷೇತ್ರಗಳಲ್ಲಿ ನಾಲ್ವರು ಮಾತ್ರ ಶಾಸಕರಿದ್ದಾರೆ. ಈ ಬಾರಿ 18-20 ಜನ ಇಲ್ಲಿಂದ ಆಯ್ಕೆಯಾಗುವ ಅವಕಾಶಗಳಿದ್ದು, ಈ ನಿಟ್ಟಿಯಲ್ಲಿ ಶ್ರಮ ವಹಿಸಬೇಕು ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ನಡವಳಿಕೆಯಿಂದ ಜನರು ಬೇಸತ್ತಿದ್ದಾರೆ. ಇತ್ತ ಕಾಂಗ್ರೆಸ್‌ ಬಗ್ಗೆಯೂ ಒಲವು ಇಲ್ಲ. ಹೀಗಾಗಿ ಜನ ಪರ್ಯಾಯ ಪಕ್ಷದತ್ತ ಆಲೋಚಿಸುತ್ತಿದ್ದಾರೆ. ಹೀಗಾಗಿ ಈ ಪಕ್ಷಗಳ ಎದುರು ಒಬ್ಬ ಸಾಮಾನ್ಯ ಕಾರ್ಯಕರ್ತನೂ ಸ್ಪರ್ಧಿಸಿದರೆ ಗೆಲ್ಲಬಹುದು. ಮತದಾರರು ಜೆಡಿಎಸ್‌ಗೆ ವೋಟು ಹಾಕಲು ಸಿದ್ಧರಿದ್ದಾರೆ. ಆದರೆ, ಹಾಕಿಸಿಕೊಳ್ಳಲು ನಮ್ಮವರು ತಯಾರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ, ಆಕಾಂಕ್ಷಿತ ಅಭ್ಯರ್ಥಿಗಳು ನಾವು ಚುನಾವಣೆಗೆ ನಿಲ್ಲುತ್ತೇವೆ ಎಂದು ನಮ್ಮ ಸುತ್ತಮುತ್ತ ಅಲೆದಾಡುವುದನ್ನು ಬಿಟ್ಟು ಮತದಾರರನ್ನು ಭೇಟಿಯಾಗಿ ವಿಶ್ವಾಸ ಗಳಿಸುವ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು.

ಈ ಬಾರಿ ಚುನಾವಣೆಯಲ್ಲಿ ಪಕ್ಷ ಸಮರ್ಥ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲಿದೆ. ಇದಕ್ಕೆ ಸ್ಥಳೀಯ ನಾಯಕರು ಸಹಕರಿಸಿ ಒಮ್ಮತದಿಂದ ಬೆಂಬಲಿಸಬೇಕು. ಇಲ್ಲವಾದರೆ ಪಕ್ಷದ ಸಂಘಟನೆ ಕುಂಠಿತವಾಗಲಿದೆ. ಪಕ್ಷದ ಕಾರ್ಯಾಗಾರ ಮತ್ತು ಸಭೆಗಳಲ್ಲಿ ನೀಡುವ ಸೂಚನೆ ತಮ್ಮ ಕ್ಷೇತ್ರಗಳಲ್ಲಿ ಜಾರಿಗೆ ತರಬೇಕು. ಬಹಳಷ್ಟು ಕಡೆಗಳಲ್ಲಿ ಈ ವಿಚಾರದಲ್ಲಿ ಹಿನ್ನಡೆಯಾಗಿರುವುದು ಮನಗಂಡಿದ್ದೇನೆ. ಬೇರೆ ಪಕ್ಷಗಳಂತೆ ಪಕ್ಷದ ಸಂಘಟನೆಗೆ ಒತ್ತು ಕೊಟ್ಟು ನಿಮ್ಮ ಶಕ್ತಿ ಬೆಳೆಸಿಕೊಳ್ಳಿ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೆಡಿಎಸ್‌ಗೆ ಒಳ್ಳೆಯ ಕಾಲ ಇದ್ದು, ಮತ್ತೂಮ್ಮೆ ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದು ನಿಶ್ಚಿತ. ನಾನು ತ್ಯಾಗ ಮಾಡಿ ಪಕ್ಷಕ್ಕೆ ಬಂದಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಮುಂದೆ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದು ನೋಡಬೇಕಿದೆ. ಇಷ್ಟು ದಿನ ಕಷ್ಟಗಳನ್ನು ಎದುರಿಸುತ್ತಿದ್ದೀರಿ, ಈಗ ಸುಖ ಅನುಭವಿಸುತ್ತೀರಿ ಎಂದು ಭವಿಷ್ಯ ನುಡಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪುರ ಮಾತನಾಡಿ, ಜೆಡಿಎಸ್‌ನ ಪ್ರಾಬಲ್ಯ ಹೊಂದಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿಯ ಚುನಾವಣೆಯಲ್ಲಿ 40 ಕ್ಷೇತ್ರಗಳ ಪೈಕಿ ಕನಿಷ್ಟ 18ರಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿ ತರುವ ಪ್ರಯತ್ನ ಮಾಡಬೇಕಿದೆ.

ಇದಕ್ಕಾಗಿ ಹಗಲು-ರಾತ್ರಿ ಶ್ರಮಿಸೋಣ. ಆ ಮೂಲಕ ಪ್ರಾದೇಶಿಕ ಪಕ್ಷಕ್ಕೆ ಮತ್ತು ಕುಮಾರಸ್ವಾಮಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡೋಣ. ಈ ನಿಟ್ಟಿನಲ್ಲಿ ಬೀದರನಿಂದಲೇ ತಯಾರಿಗೆ ಚಾಲನೆ ನೀಡಿರುವುದು ಶುಭ ಸಂಕೇತವಾಗಿದೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ರಮೇಶ ಪಾಟೀಲ ಸ್ವಾಗತಿಸಿದರು. ಈ ವೇಳೆ ಶಾಸಕರಾದ ವೆಂಕಟಗೌಡ, ರಾಜಾ ವೆಂಕಟಪ್ಪ ನಾಯಕ, ಮಾಜಿ ಸಚಿವ ನಜೀಮ್‌ ಸಾಬ್‌, ಪ್ರಮುಖರಾದ ಶಮಶುಲ್ಲಾ ಖಾನ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.