![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ನೆರೆ ಎದುರಿಸಲು ಸನ್ನದ್ಧರಾಗಿ
Team Udayavani, Sep 19, 2020, 7:24 PM IST
![ನೆರೆ ಎದುರಿಸಲು ಸನ್ನದ್ಧರಾಗಿ](https://www.udayavani.com/wp-content/uploads/2020/09/BIDARA-TDY-1-3-620x372.jpg)
ಬೀದರ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಮಳೆಯಿಂದಾಗುವ ಸಮಸ್ಯೆ ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಸೂಚಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಬೀದರ ನಗರ ಸೇರಿ ಇಡೀ ಜಿಲ್ಲೆಯ ಚಿತ್ರಣವನ್ನೇ ಬದಲಿಸಿದೆ. ಭಾಲ್ಕಿ ತಾಲೂಕಿನಲ್ಲಿ ಇಬ್ಬರು ಮತ್ತು ಬೀದರನಲ್ಲಿ ಒಬ್ಬರು ಸೇರಿ ಜಿಲ್ಲೆಯಲ್ಲಿ ಈವರೆಗೆ ಮೂವರು ಬಲಿಯಾಗಿದ್ದಾರೆ. ಬೆಳೆ ಹಾನಿ, ಜತೆಗೆ ಮರ, ಕಂಬಗಳು ನೆಲಕ್ಕುರುಳಿವೆ. ಮಳೆಯಿಂದ ಮೃತಪಟ್ಟ ಜಾನುವಾರುಗಳು, ಬಿದ್ದ ಮನೆಗಳು, ಹಾಳಾದ ಸೇತುವೆಗಳು, ಬೆಳೆ ಹಾಳಾದ ಜಮೀನಿನ ನಿಖರ ಮಾಹಿತಿಗಾಗಿ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು “ಉದಯವಾಣಿ’ಗೆ ತಿಳಿಸಿದರು.
ಮಹಾರಾಷ್ಟ್ರದ ಲಾತೂರ ಮತ್ತುಉಸ್ಮಾನಾಬಾದ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೇರನಾ,ಧನೆಗಾಂವ ಮತ್ತು ಇನ್ನಿತರ ನೀರಾವರಿಅಣೆಕಟ್ಟೆಗಳು ಬಹುತೇಕ ಭರ್ತಿ ಆಗಿರುವುದರಿಂದ ಮಾಂಜ್ರಾ ನದಿಗೆ ನೀರು ಬಿಡಲಾಗಿದೆ. ಹಾಗೂ ಮುಂದೆ ಮಳೆ ಕಡಿಮೆಯಾಗದೇ ಸದರಿ ಜಲಾಶಯಗಳಲ್ಲಿನ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದ್ದಲ್ಲಿ ಇನ್ನಷ್ಟು ನೀರು ನದಿಗೆ ಹರಿಸಲಾಗುವುದು ಎಂದುಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಗ್ರಾಮಸ್ಥರು ನದಿಗೆ ಇಳಿಯದಂತೆ ಹಾಗೂ ಜಾನುವಾರುಗಳು ನದಿ ದಡದತ್ತ ಹೋಗದಂತೆ ನೋಡಿಕೊಳ್ಳಬೇಕು. – ಆರ್. ರಾಮಚಂದ್ರನ್, ಡಿಸಿ
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.