ಅಕ್ರಮ ತನಿಖೆಗೆ ನಡೆದಿದೆ ಸಿದ್ಧತೆ


Team Udayavani, Feb 16, 2019, 7:23 AM IST

bid-2.jpg

ಬೀದರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಐದು ಎಂಎಸ್‌ಪಿಟಿಸಿ (ಮಹಿಳಾ ಆಹಾರ ಉತ್ಪನ್ನ ಘಟಕ) ಗಳಲ್ಲಿ ಈ ವರೆಗೆ ನಡೆದ ವ್ಯವಹಾರ ಕುರಿತು ಅಧಿಕಾರಿಗಳು ಸೂಕ್ತ ತನಿಖೆ ನಡೆಸಲು ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯ ಬೀದರ್‌, ಬಸವಕಲ್ಯಾಣ, ಔರಾದ, ಭಾಲ್ಕಿ ಹಾಗೂ ಹುಮನಾಬಾದ ತಾಲೂಕುಗಳಲ್ಲಿ ಎಂಎಸ್‌ಪಿಟಿಸಿ ಘಟಕಗಳಿದ್ದು, ಆಯಾ ಪ್ರದೇಶದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಠಿಕ ಆಹಾರ ಪೂರೈಕೆ ಮಾಡುತ್ತಿವೆ. ಆದರೆ, ಕೆಲ ಘಟಕಗಳು ಸರ್ಕಾರದ ನಿಯಮಗಳನ್ನು ಪಾಲಿಸದೆ ಹಾಗೂ ಮೇಲಾಧಿಕಾರಿಗಳ ಪರವಾನಗಿ ರಹಿತ ಆಡಳಿತ ನಡೆಸಿರುವುದು ಮೇಲ್ನೊಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ನಡೆಸುವ ನಿಟ್ಟಿನಲ್ಲಿ ಮೇಲಾಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದಾರೆ.

ಪ್ರತಿಯೊಂದು ಘಟಗಳಲ್ಲಿ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಮುಖ್ಯ ಸ್ಥರಾಗಿದ್ದು, ಫೆಸಿಲಿಟೇಟರ್‌ (ಪಿಎಫ್‌) ಗಳು ಘಟಕದ ಎಲ್ಲಾ ಕಾರ್ಯಗಳ ಮೇಲೆ
ಉಸ್ತುವಾರಿ ನೋಡಿಕೊಳ್ಳುವ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಾರ, ಪ್ರತಿಯೊಂದು ಘಟಕಗಳು ಸರಿಸುಮಾರು 400ಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಠಿಕ ಆಹಾರ ಪೂರೈಕೆ ಮಾಡುತ್ತಿವೆ.

ತಿಂಗಳಿಗೆ ಸರಾಸರಿ 35ರಿಂದ 40 ಲಕ್ಷದ ಆಹಾರ ಪದಾರ್ಥಗಳು ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿವೆ. ಈ ಪೈಕಿ ಸರಾಸರಿ 5ರಿಂದ 8 ಲಕ್ಷ ರೂ. ಘಟಕಕ್ಕೆ ಪ್ರತಿ ತಿಂಗಳು ಲಾಭ ಆಗುತ್ತಿದ್ದು, ಸ್ತ್ರೀಶಕ್ತಿ ಸಂಘದ ಮಹಿಳೆಯರು ಅವರು ಮಾಡಿದ ಕೆಲಸದ ಸಂಬಳ ಪಡೆದು ಇನ್ನುಳಿದ ಹಣ ಯಾವ ಕಾರ್ಯಕ್ಕೆ ಖರ್ಚು ಮಾಡಲಾಗುತ್ತಿದೆ. ಯಾವ ವಸ್ತು ಖರೀದಿ ಮಾಡಲಾಗುತ್ತಿದೆ ಎಂಬುದನ್ನು ಲಿಖೀತ ಪತ್ರದ ಮೂಲಕ ಉಪ ನಿರ್ದೇಶಕರ ಪರವಾನಗಿ ಪಡೆಯಬೇಕು ಎಂಬುದು ಘಟಕಗಳ ನಿಯಮವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೀಗ ಇಲ್ಲಿನ ಕೆಲ ಎಂಎಸ್‌ ಪಿಟಿಸಿಗಳು ನಿಯಮ ಪಾಲಿಸದೇ ಹಣ ಖರ್ಚು ಮಾಡಿರುವುದು ತಿಳಿದು ಬಂದಿರು ಹಿನ್ನೆಲೆಯಲ್ಲಿ ಸೂಕ್ತ ಪರಿಶೀಲನೆ ನಡೆಸಲು ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮನ ಬಂದಂತೆ ಸಂಬಳ ಹೆಚ್ಚಳ: ಅಧಿಕಾರಿಗಳ ಮಾಹಿತಿ ಪ್ರಕಾರ ಎಂಎಸ್‌ಪಿಟಿಸಿ ಘಟಕಗಳಲ್ಲಿ ಕೆಲಸ ನಿರ್ವಹಿಸುವ ಸ್ತ್ರೀಶಕ್ತಿ ಸಂಘದ ಸದಸ್ಯರು ಸಂಬಳ ಹೆಚ್ಚಿಸಿ ಕೊಳ್ಳಬೇಕಾದರೂ ಇಲಾಖೆಯ ಉಪನಿರ್ದೇಶಕರ ಪರವಾನಗಿ ಪಡೆಯಬೇಕು. ಆದರೆ, ಘಟಕಗಳು ಯಾವುದೇ ನಿಯಮಗಳನ್ನು ಪಾಲಿಸದೆ ಮನಬಂದತೆ ಸಂಬಳ ಹೆಚ್ಚಿಸಿಕೊಂಡಿರುವುದು ತಿಳಿದುಬಂದಿದೆ. ಕೆಲ ಘಟಕದ ಅಧ್ಯಕ್ಷರಿಗೆ ತಿಂಗಳಿಗೆ ಎಷ್ಟು ಪ್ರಮಾಣದ ವ್ಯವಹಾರ
ನಡೆಯುತ್ತದೆ ಎಂಬುದು ಕೂಡ ಮಾಹಿತಿ ಇಲ್ಲದ ಸ್ಥಿತಿ ಇದೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.