ಅನುಭವ ಮಂಟಪ ಅಡಿಗಲ್ಲಿಗೆ ರಾಷ್ಟ್ರಪತಿ ಆಹ್ವಾನ


Team Udayavani, Jun 26, 2018, 3:53 PM IST

bidar-2.jpg

ಬಸವಕಲ್ಯಾಣ: ನಗರದಲ್ಲಿ ರಾಜ್ಯ ಸರ್ಕಾರದಿಂದ ಸುಮಾರು 600 ಕೋಟಿ ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ನೀಲ ನಕ್ಷೆ ಸಿದ್ಧಪಡಿಸಲಾಗಿದ್ದು, ಬರುವ ಬಜೆಟ್‌ನಲ್ಲಿ ನೂರು ಕೋಟಿ ಅನುದಾನ ಕಲ್ಪಿಸಿ ಶೀಘ್ರದಲ್ಲಿಯೇ ಅಡಿಗಲ್ಲು ನೆರವೇರಿಸಲಾಗುವುದು ಎಂದು ಶಾಸಕ ಬಿ. ನಾರಾಯಣರಾವ್‌ ಹೇಳಿದರು.

ನಗರದ ಹರಳಯ್ಯ ಗವಿಯಲ್ಲಿ ಅಖೀಲ ಭಾರತ ಲಿಂಗವಂತ ಹರಳಯ್ಯ ಪೀಠ ಹಾಗೂ ಬಿಕೆಡಿಬಿ ಆಶ್ರಯದಲ್ಲಿ ಆಯೋಜಿಸಿದ್ದ ಶರಣು ಶರಣಾರ್ಥಿ ಸಮಾವೇಶ ಹಾಗೂ ಅಂಬಿಗರ ಚೌಡಯ್ಯನವರ ವಚನ ಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೂತನ ಅನುಭವ ಮಂಟಪ ನಿರ್ಮಾಣದ ಅಡಿಗಲ್ಲು ಸಮಾರಂಭಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲಾಗುವುದು ಎಂದರು.

ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಗುರು ಬಸವಣ್ಣನವರ ನೇತೃತ್ವದಲ್ಲಿ 12ನೇ ಶತಮಾನದಲ್ಲಿ ನಡೆದ ಕ್ರಾಂತಿ ಜಗತ್ತಿಗೆ ಮಾದರಿಯಾಗಿದೆ. ಶರಣರ ಆಚಾರ ವಿಚಾರಗಳನ್ನು ಇಂದು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಶರಣರ ಪುಣ್ಯಭೂಮಿಯನ್ನು ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ ಡಾ| ಗಂಗಾಂಬಿಕಾ ಅಕ್ಕ ಮಾತನಾಡಿ, ಸಮಾಜ ಸುಧಾರಣೆಯೇ ಶರಣರ ಪ್ರಧಾನ ಗುರಿಯಾಗಿತ್ತು. ಅದಕ್ಕಾಗಿಯೇ ಶರಣರು ದೇಶದ ಇತರ ಧಾರ್ಮಿಕ ಪುರುಷರಿಗಿಂತ ಭಿನ್ನವಾಗಿದ್ದಾರೆ. ಶರಣ ಅಂಬಿಗರ ಚೌಡಯ್ಯನವರು ತೀಕ್ಷ್ಣ ವಚನಗಳಿಂದ ತಮ್ಮದೇ ಆದ ಛಾಪು ಮೂಡಿಸಿದ್ದರು. ನ್ಯಾಯ, ನಿಷ್ಠುರ, ಖಂಡಿತವಾದಿಯಾಗಿದ್ದರು. ಅವರು ರಚಿಸಿದ 278 ವಚನಗಳು ಲಭ್ಯವಾಗಿವೆ. ಚೌಡಯ್ಯನವರ ವಚನಗಳ ಮೌಲ್ಯ ಅರಿತು ಜೀವನದಲ್ಲಿ ಅಳವಡಿಕೊಳ್ಳಲು ಎಲ್ಲರು ಪ್ರಯತ್ನಿಸಬೇಕು ಎಂದರು.

ಐಎಎಸ್‌ ಅಧಿಕಾರಿ ಅಮರೇಶ್ವರ ಪಾಟೀಲ, ಬಿಕೆಡಿಬಿ ಮಾಜಿ ಸದಸ್ಯ ಶಿವರಾಜ ನರಶಟ್ಟಿ ಮಾತನಾಡಿದರು. ಬಸವರಾಜ ಬೇಲೂರೆ ಷಟ್‌ ಸ್ಥಲ ಧ್ವಜಾರೋಹಣ ನೆರವೇರಿಸಿದರು. ಬಿಡಿಪಿಸಿ ಉಪಾಧ್ಯಕ್ಷ ಜಗನ್ನಾಥ ಖೂಬಾ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಭೀಮಾಶಂಕರ ಕುರಕೋಟೆ, ಬಿಕೆಡಿಬಿ ಕಿರಿಯ ಅಭಿಯಂತರ ಶರಣಬಸಪ್ಪ ವನರೋಟ್ಟಿ, ಚಂದ್ರಕಲಾ ಚಂದನಕೇರೆ ಉಪಸ್ಥಿತರಿದ್ದರು. ನಗರ ಸಭೆ ಸದಸ್ಯ ರವಿ ಕೋಳಕೂರ ಸ್ವಾಗತಿಸಿದರು.ಸುನಿತಾ ಮಹಾಲಿಂಗ ನಿರೂಪಿಸಿದರು.

ಸಮಾವೇಶದ ನಂತರ ಸಾಲಪುರದ ನಾಟ್ಯಯೋಗ ಕಲಾ ತಂಡದವರಿಂದ “ಮೃತ್ಯುವರ್ಮ’ ನಾಟಕ ಪ್ರದರ್ಶನ ಜರುಗಿತು. ಔರಾದನ ವಚನ ಕೀರ್ತನಕಾರ ರಾಮದಾಸ ಬಿರಾದಾರ ತಂಡದಿಂದ ವಚನ ಗಾಯನ ಜರುಗಿತು.

ನಾನು ಶರಣ ತತ್ವ ಪ್ರತಿಪಾದಕ. ನಲವತ್ತು ವರ್ಷಗಳಿಂದ ಅನೇಕ ಏಳು ಬಿಳುಗಳನ್ನು ಕಂಡಿದ್ದೇನೆ. ಶರಣರ ಕಾಯಕ ಭೂಮಿಯ ಪ್ರತಿನಿಧಿಯಾಗಿ ವಿಧಾನ ಸಭೆಗೆ ತೆರಳಬೇಕು ಎನ್ನುವುದು ನನ್ನ ಜೀವನದ ಗುರಿಯಾಗಿತ್ತು. ಶರಣರ ನಾಡಿನ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಸಿಕ್ಕಿರುವ ಅವಕಾಶವನ್ನು ಉಪಯೋಗಿಸಿಕೊಂಡು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
ಬಿ.ನಾರಾಯಣರಾವ್‌ ಶಾಸಕ ಬಸವಕಲ್ಯಾಣ

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.