ಗಡಿ ಭಾಗದಲ್ಲಿ ಪ್ರಾಥಮಿಕ ಶಾಲೆ ಆರಂಭ-ಆಕ್ರೋಶ

ಪ್ರೌಢಶಾಲೆಗಳನ್ನು ಆರಂಭಿಸಲು ಸರ್ಕಾರ ಆದೇಶ ಮಾಡಿದೆ.

Team Udayavani, Sep 25, 2021, 11:40 AM IST

ಗಡಿ ಭಾಗದಲ್ಲಿ ಪ್ರಾಥಮಿಕ ಶಾಲೆ ಆರಂಭ-ಆಕ್ರೋಶ

ಔರಾದ: ಸರ್ಕಾರ ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‌ಗೆ ತಂದು ನಾಡಿನ ಜನರು ಶಾಂತಿ, ನೆಮ್ಮದಿಯ ಜೀವನ ಸಾಗಿಸಲು ಶ್ರಮಿಸುತ್ತಿದ್ದರೆ ಔರಾದ ಹಾಗೂ ಕಮಲನಗರ ತಾಲೂಕು ವ್ಯಾಪ್ತಿಯ ತಾಲೂಕಿನ ಕೆಲ ಶಿಕ್ಷಣ ಸಂಸ್ಥೆಗಳು ಸರಕಾರದ ನಿಯಮ ಗಾಳಿಗೆ ತೂರಿ 1ರಿಂದ 5ನೇ ತರಗತಿ ಆರಂಭಿಸಿ ಮಕ್ಕಳ ಜೀವನದೊಂದಿಗೆ ಚೆಲ್ಲಾಟ ಆಡುತ್ತಿವೆ. ನಿತ್ಯ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಶಾಲಾ ವಾಹನ ಮೂಲಕ ತಂದು ಭೋಧನೆ ಮಾಡುವಂತಹ ಕೆಲಸ ಮಾಡುತ್ತಿವೆ.

ಮಕ್ಕಳಿಗೆ ನಿಗೂಢ ಜ್ವರ ಉಲ್ಬಣವಾಗಿ ಪಾಲಕರು ಔರಾದ ಪಟ್ಟಣದ ಆಸ್ಪತ್ರೆಯಲ್ಲಿ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ತೆಲಂಗಾಣದ ಹೈದರಾಬಾದನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಕ್ಕಳ ಜೀವನ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಖಾಸಗಿ ಶಾಲೆ ಆಡಳಿತ ಮಂಡಳಿ ಸದಸ್ಯರು ಶಾಲೆ ಆರಂಭಿಸಿದ್ದಾರೆ.ಈ ಕುರಿತು ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಮಾಳೆಗಾಂವ, ಬೆಳಕೂಣಿ ಮಮದಾಪೂರ ಗ್ರಾಮಸ್ಥರು ಆರೋಪಿಸಿದ್ದಾರೆ.ಸರ್ಕಾರ ಹಾಗೂ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

ಪ್ರೌಢಶಾಲೆಗಳನ್ನು ಆರಂಭಿಸಲು ಸರ್ಕಾರ ಆದೇಶ ಮಾಡಿದೆ. ಆದರೆ ಕಮಲನಗರ ಹಾಗೂ ಔರಾದ ತಾಲೂಕಿನಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳು ನಡೆಯುತ್ತಿರುವ ಬಗ್ಗೆ ನಮ್ಮ ಗಮನಕ್ಕೂ ಬಂದಿದೆ. ನಮ್ಮ ಇಲಾಖೆ ಸಿಬ್ಬಂದಿ ಕಳುಹಿಸಿ ಶಾಲೆ ಮುಚ್ಚಿಸುವಂತೆ ತಿಳಿ ಹೇಳುತ್ತೇನೆ.
ಎಸ್‌.ಎಚ್‌.ನಗನೂರ,
ಬಿಇಒ, ಔರಾದ್

ಜಿಲ್ಲಾ ಧಿಕಾರಿಗಳು ಹಾಗೂ ನಾವು ಹಗಲಿರುಳು ಶ್ರಮಿಸಿ ಕೋವಿಡ್‌ ಕಂಟ್ರೋಲ್‌ಗೆ ತಂದಿದ್ದೇವೆ. ಹಣ ಸಂಪಾದನೆ ಮಾಡುವ ವ್ಯಾಮೋಹದಿಂದ ಇಂಥ ಸಂಸ್ಥೆಗಳು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿವೆ. ಇಲಾಖೆಯ ನಿಯಮ ಮೀರುತ್ತಿರುವ ಹಾಗೂ ಮಕ್ಕಳ ಜೀವನದೊಂದಿಗೆ ಆಟವಾಡುತ್ತಿರುವ ಶಾಲೆಯ ಪರವಾನಗಿ ರದ್ದುಪಡಿಸಿ ಮಕ್ಕಳ ಆರೋಗ್ಯ ಕಡೆ ಹೆಚ್ಚು ಒತ್ತು ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಕ್ಷಣವೇ ಆದೇಶ ಮಾಡುತ್ತೇನೆ.
ಪ್ರಭು ಚವ್ಹಾಣ, ಜಿಲ್ಲಾ ಉಸ್ತುವಾರಿ ಸಚಿವ

ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಜೀವ ಸಂರಕ್ಷಣೆ ಮಾಡಲು ಮುಂದಾಗಬೇಕು. ಶಾಲೆಗೆ ಬಂದ ಒಂದು ವಿದ್ಯಾರ್ಥಿಗೂ ಸಮಸ್ಯೆ ಆಗಿದ್ದರೆ ಅಂಥ ಶಾಲೆಯ ಹಾಗೂ ಶಿಕ್ಷಣಾಧಿ ಕಾರಿಗಳ ವಿರುದ್ಧ ಹೋರಾಟ ಮಾಡಲಾಗುತ್ತದೆ.
ಅಶೋಕ ಶೆಂಬೆಳ್ಳಿ, ಎಬಿವಿಪಿ ಜಿಲ್ಲಾ ಸಂಚಾಲಕ

ಪಟ್ಟಣದಲ್ಲಿ ಬಸವಗುರುಕುಲ ಶಾಲೆ ಆರಂಭಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಪ್ಪಾಜಿಗೆ ಪರವಾನಗಿ ನೀಡಿದ್ದಾರಂತೆ. ಹೀಗಾಗಿ ನಾವು ಶಾಲೆ ಆರಂಭಿಸಿದ್ದೇವೆ.
ಇಂದುಮತಿ, ಬಸವ ಗುರುಕುಲ
ಶಾಲೆ, ಮುಖ್ಯ ಶಿಕ್ಷಕಿ.

*ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.