ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಸ್ತಬ್ಧ ಚಿತ್ರ


Team Udayavani, Sep 24, 2019, 3:00 PM IST

bidar-tdy-1

ಬೀದರ: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಮೆರವಣಿಗೆಯಲ್ಲಿ ಬೀದರ ಜಿಲ್ಲೆಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಪರಿಕಲ್ಪನೆ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

2016-17ನೇ ಸಾಲಿನಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳಿಂದ ರೈತರು ನಷ್ಟ ಅನುಭವಿಸಿದ್ದರು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಿಂದ ಅನೇಕ ರೈತರಿಗೆ ನೆರವು ದೊರೆತಿದೆ. ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರ ಪಡೆಯುವ ಮೂಲಕ ದೇಶದಲ್ಲಿ ಬೀದರ ಜಿಲ್ಲೆ ಪ್ರಥಮ ಎಂಬ ಹೆಗ್ಗಳಿಕ್ಕೆಗೆ ಪಾತ್ರವಾಗಿತ್ತು. ಈ ಕಾರಣಕ್ಕೆ ಪ್ರಸಕ್ತ ವರ್ಷ ನಡೆಯುವ ಮೈಸೂರು ದಸರಾ ಉತ್ಸವದಲ್ಲಿ ಬೀದರ ಜಿಲ್ಲೆಯಿಂದ ಫಸಲ್‌ ಬಿಮಾ ಯೋಜನೆ ಕುರಿತಾದ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಅಲ್ಲದೆ, ಬೆಳೆ ವಿಮೆ ಕುರಿತು ಉತ್ಸವದಲ್ಲಿ ಜನರ ಗಮನ ಸೆಳೆಯುವ ಮೂಲಕ ಹೆಚ್ಚಿನ ರೈತರು ಬೆಳೆ ವಿಮೆ ಯೋಜನೆಯೊಂದಿಗೆ ಸಂಪರ್ಕ ಸಾಧಿ ಸುವ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಕಾರ್ಯ ಕೂಡ ನಡೆಯಲಿದೆ. 2016-17ನೇ ಸಾಲಿನಲ್ಲಿ ಜಿಲ್ಲೆಯ 171 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಗೆ ಮಹತ್ವ ನೀಡಿ ರೈತರ ಬೆಳೆಗೆಳಿಗೆ ವಿಮೆ ಮಾಡಿಸುವ ಕಾರ್ಯ ಭರದಿಂದ ನಡೆದಿತ್ತು. ಅಲ್ಲದೆ, ಜಿಲ್ಲೆಯ ಡಿಸಿಸಿ ಬ್ಯಾಂಕ್‌ ಕೂಡ ಫಸಲ್‌ ಬಿಮಾ ಯೋಜನೆಗೆ ಶ್ರಮಿಸಿದೆ. ಸಂಸದ ಭಗವಂತ ಖೂಬಾ ಕೂಡ ಯೋಜನೆ ಲಾಭ ರೈತರಿಗೆ ಮುಟ್ಟಿಸಬೇಕು ಎಂಬ ನಿಟ್ಟಿನಲ್ಲಿ ಪದೇ ಪದೇ ಅ ಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕಾರ್ಯ ಕೂಡ ನಡೆಸಿದ್ದರುಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

2016-17ನೇ ಸಾಲಿನಲ್ಲಿ 151 ಕೋಟಿ ರೂ. ಮೊತ್ತದ ಬೆಳೆ ವಿಮೆ ಪಡೆಯುವ ಮೂಲಕ ಅತಿ ಹೆಚ್ಚು ಪರಿಹಾರ ಪಡೆದ ದೇಶದ ಮೊದಲ ಜಿಲ್ಲೆ ಎಂದು ಬೀದರ ಜಿಲ್ಲೆ ಗುರುತಿಸಿಕೊಂಡಿತ್ತು. 2017-18ನೇ ಸಾಲಿನಲ್ಲಿ 64 ಕೋಟಿ, 2018ರಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಂಭವಿಸಿದ ವಿಮೆ ಮಾಡಿಸಿದ ರೈತರಿಗೆ 125 ಕೋಟಿ ರೂ. ವಿಮಾ ಪರಿಹಾರ ಜಿಲ್ಲೆಗೆ ಬಿಡುಗಡೆಯಾಗಿದ್ದು, ಜಿಲ್ಲೆಯ ರೈತರು ಫಸಲ್‌ ಬಿಮಾ ಯೋಜನೆಗೆ ಹೆಚ್ಚಿನ ಮಹತ್ವ ನೀಡುತ್ತಿರುವ ಹಿನ್ನೆಲೆಯಲ್ಲಿ ದಸರಾ ಉತ್ಸವದಲ್ಲಿ ಬೆಳೆ ವಿಮೆ ಕುರಿತು ಸ್ತಬ್ಧಚಿತ್ರ ನಿರ್ಮಾಣಕ್ಕೆ ಅನುಮೋದನೆ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಸವಕಲ್ಯಾಣದ ಅಂಜಲಿ ಆರ್ಟ್ಸ್ ಸ್ತಬ್ಧಚಿತ್ರ ನಿರ್ಮಾಣದ ಗುತ್ತಿಗೆ ಪಡೆದುಕೊಂಡಿದೆ. ಟೆಂಡರ್‌ನಲ್ಲಿ ಮೂವರು ಕಲಾವಿದರು ಭಾಗವಹಿಸಿದರು. ಕಡಿಮೆ ದರಪಟ್ಟಿ ನೀಡಿದ ಕಲಾವಿದರಿಗೆ ಗುತ್ತಿಗೆ ನೀಡಲಾಗಿದೆ. ಈ ವರ್ಷ ನಿರ್ಮಾಣಗೊಳ್ಳುತ್ತಿರುವ ಸ್ತಬ್ಧಚಿತ್ರಕ್ಕೆ 6.48 ಲಕ್ಷ ರೂ. ಮೊತ್ತದ ಟೆಂಡರ್‌ ನೀಡಲಾಗಿದೆ. ಅಲ್ಲದೆ ಈಗಾಗಲೇ ಸ್ತಬ್ಧಚಿತ್ರ ತಯಾರಿಸುವ ಕಾರ್ಯ ಕೂಡ ನಡೆದಿದೆ ಎಂದು ಡಿಐಡಿಸಿ ರಮೇಶ ಮಠಪತಿ ಮಾಹಿತಿ ನೀಡಿದ್ದಾರೆ.

 

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.