ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ
Team Udayavani, Feb 3, 2019, 8:51 AM IST
ಹುಮನಾಬಾದ: 2019ನೇ ಸಾಲಿನ ಬಜೆಟ್ನಲ್ಲಿ ಅಕ್ಷರ ದಾಸೋಹ ನೌಕರರನ್ನು ಸಂಪೂರ್ಣ ನಿರ್ಲಕ್ಷಿಸಿದ ಕೇಂದ್ರ ಸರ್ಕಾರ ಧೋರಣೆ ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಅಕ್ಷದ ದಾಸೋಹ ನೌಕರರು ಶನಿವಾರ ಪಟ್ಟಣದ ಡಾ| ಅಂಬೇಡ್ಕರ್ ವೃತ್ತದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಹಮೀಲಪೂರಕರ್ ಮಾತನಾಡಿ, ಅಕ್ಷರ ದಾಸೋಹ ನೌಕರರು ದೇಶದಲ್ಲಿ 25 ಲಕ್ಷ ಮಹಿಳೆಯರು, 12 ಕೋಟಿ ಮಕ್ಕಳಿಗೆ ಆಹಾರ ಬೇಯಿಸಿ ಉಣಬಡಿಸುತ್ತಿದ್ದಾರೆ. ಆದರೆ ಮಗುವು ಶಿಕ್ಷಣ ಪಡೆಯಬೇಕೆಂದು ಬಯಸುವಾಗಲೇ ಇದರ ಪೂರಕವಾಗಿ ಕೆಲಸ ಮಾಡುತ್ತಿರುವ ಬಡ ಮಹಿಳೆಯರನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತ ಬಂದಿದೆ. ಈ ಬಾರಿ ಬಜೆಟ್ನಲ್ಲಾದರೂ ಗಮನಹರಿಸಬಹುದೆಂದು ನಿರೀಕ್ಷಿಸಿದ್ದ ಕಾರ್ಮಿಕರಿಗೆ ಮತ್ತೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ತಾಲೂಕು ಅಧ್ಯಕ್ಷೆ ಪಂಚಶೀಲಾ, ಉಪಾಧ್ಯಕ್ಷೆ ಕವಿತಾ ತಾಂಡಗಿ, ಕಾರ್ಯದರ್ಶಿ ಜನಾಬಾಯಿ ಖಂಡಗೊಂಡ, ಕೋಶಾಧ್ಯಕ್ಷೆ ಶಾರದಾ ಡಾಕುಳಗಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪ್ರಭು ಸಂತೋಷಕರ್, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಹಂಸರಾಜ, ಕಟ್ಟಡ ಮತ್ತು ಇತರೆ ನಿರ್ಮಾಣ ವಿಭಾಗ ಕಾರ್ಮಿಕ ಸಂಘಟನೆ ಜಿಲ್ಲಾ ಅಧ್ಯಕ್ಷ ಬಸವರಾಜ ಮಾಳಗೆ ಮಾತನಾಡಿದರು. ಪ್ರಭಾವತಿ ಹಳ್ಳಿಖೇಡ(ಕೆ), ಶ್ರೀದೇವಿ ಚಿತ್ತಕೋಟಾ, ವಿಜಯಲಕ್ಷ್ಮೀ ಹುಮನಾಬಾದ, ಜಯಶ್ರೀ ಹುಮನಾಬಾದ, ಚುಕ್ಕೆಮ್ಮ ಚೀನಕೇರಾ, ಜುಲೇಖಾ ಬೇಗಂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?