ಜಲಪಾತದ ಅಭಿವೃದ್ಧಿಗೆ ಆದ್ಯತೆ
Team Udayavani, Nov 14, 2021, 2:43 PM IST
ಗುರುಮಠಕಲ್: ಬೇರೆ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಹೇಗೆ ಅಭಿವೃದ್ಧಿಗೊಳಿಸಿದ್ದಾರೆಯೋ ಹಾಗೆಯೇ ಗುರುಮಠಕಲ್ ತಾಲೂಕಿನ ನೈಸರ್ಗಿಕ ದಬ್ದಭೆ ಜಲಪಾತವನ್ನೂ ಪ್ರವಾಸಿ ತಾಣವಾಗಿಸಲು ಆದ್ಯತೆ ನೀಡುವುದಾಗಿ ಜೆಡಿಎಸ್ ಮುಖಂಡ ಶರಣಗೌಡ ಕಂದಕೂರ ಭರವಸೆ ನೀಡಿದರು.
ದಬ್ದಭೆ ಜಲಪಾತಕ್ಕೆ ಭೇಟಿ ನೀಡಿ ನಜರಾಪುರ ಗ್ರಾಮಸ್ಥರೊಡನೆ ಚರ್ಚಿಸಿದರು. ಇಲ್ಲಿಗೆ ಬಂದ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವುದು ನೋವಿನ ವಿಷಯ. ಕೂಡಲೆ ಜಲಪಾತದಲ್ಲಿ ಮತ್ತೆ ಅಂಥ ಅನಾಹುತಗಳು ಜರುಗದಂಗತೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
ಜಲಪಾತದ ಅಭಿವೃದ್ಧಿಗಾಗಿ ಶಾಸಕರು ಪ್ರಯತ್ನಿಸಿದ್ದರಿಂದ 1.5 ಕೋಟಿ ರೂ. ಅನುದಾನವನ್ನು ಪ್ರವಾಸೋದ್ಯಮ ಇಲಾಖೆ ನೀಡಿದೆ ಎಂದು ಶರಣಗೌಡ ತಿಳಿಸಿದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಅವುಂಟಿ, ಜೆಡಿಎಸ್ ಮತಕ್ಷೇತ್ರದ ಯುವ ಘಟಕ ಅಧ್ಯಕ್ಷ ಜ್ಞಾನೇಶ್ವರಡ್ಡಿ, ಹಿರಿಯ ಮುಖಂಡ ಬಾಲಪ್ಪ ನೀರೆಟ್ಟಿ, ಬಸಣ್ಣ ದೇವರಹಳ್ಳಿ, ಪುರಸಭೆ ಸದಸ್ಯ ಬಾಲಪ್ಪ ದಾಸರಿ, ಸಿರಾಜ್ ಚಿಂತಕುಂಟಿ, ರಘನಾಥರೆಡ್ಡಿ ಗವಿನೋಳ್, ಶಿವರೆಡ್ಡಿ ಪಾಟೀಲ್ ನಜರಾಪುರ, ಭೀಮರೆಡ್ಡಿ ಪಾಟೀಲ್, ಮಲ್ಲಿಕಾರ್ಜುನ ಅಡಿಕಿ, ಮಹೇಶ ಗೌಡ, ನರಸಪ್ಪ ಧನವಾಢ, ನಜರಾಪುರ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ