ಶಿಕ್ಷಣ ಕ್ಷೇತ್ರ ಬದಲಾವಣೆಗೆ ಆದ್ಯತೆ: ಖಾಶೆಂಪೂರ


Team Udayavani, Sep 30, 2018, 12:18 PM IST

gul-6.jpg

ಬೀದರ: ದೆಹಲಿಯಲ್ಲಿನ ಸರಕಾರಿ ಶಾಲೆಯೊಂದಕ್ಕೆ ಹೋಗಿದ್ದೆ. ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ಅಲ್ಲಿ
ಚಟುವಟಿಕೆಗಳು ನಡೆಯುತ್ತಿವೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ಸರಕಾರಿ ಶಾಲೆಗಳನ್ನು ರೂಪಿಸುವ ಆಲೋಚನೆ ಇದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.

ಬಗದಲ್‌ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ
ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಬಲಗೊಳಿಸಲು ಸರಕಾರ ಸಂಕಲ್ಪ ತೊಟ್ಟಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ಪ್ರಗತಿಯು ಖಾಸಗಿ ಶಾಲೆಗಳನ್ನು ಮೀರಿಸುವಂತಿರಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲಿ ಶಾಲಾ ಚಟುವಟಿಕೆ, ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಲ್ಲಿ ಪಾಲಕರ ಪಾಲ್ಗೊಳ್ಳುವಿಕೆ ಹೆಚ್ಚಬೇಕು ಎಂದು ಸಲಹೆ ನೀಡಿದರು. ದೆಹಲಿಯಲ್ಲಿನ ಸರ್ಕಾರಿ ಶಾಲೆಗಳಂತೆ ಇಲ್ಲಿನ ಶಿಕ್ಷಕರು ಕೂಡ ಪಾಠಮಾಡಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸಬೇಕು ಎಂದರು.

ಚಿಗುರು ಕಾರ್ಯಕ್ರಮದಲ್ಲಿ ಪಾಲಕರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಚಿವರು ಬೇಸರ ವ್ಯಕ್ತಪಡಿಸಿದರು.
ಮಕ್ಕಳಲ್ಲಿರುವ ಕಲಾ ಪ್ರತಿಭೆ ಪ್ರದರ್ಶನ ಪಾಲಕರ ಸಮ್ಮುಖದಲ್ಲಿ ನಡೆಯುವಂತೆ ನೋಡಿಕೊಳ್ಳಿ. ಅದರಿಂದ ಶಾಲೆಯ ಬಗ್ಗೆಯೂ ಪಾಲಕರಲ್ಲಿ ಸದಭಿಪ್ರಾಯ ಮೂಡುತ್ತದೆ. ಶಿಕ್ಷಕರು ಮಕ್ಕಳ ಏಳ್ಗೆಗಾಗಿ ಶ್ರಮಿಸುತ್ತಿರುವುದು ಮನವರಿಕೆಯಾಗುತ್ತದೆ ಎಂದು ಸಲಹೆ ನೀಡಿದರು.

ಶಿಕ್ಷಣದಿಂದಲೇ ಸರ್ವಾಂಗೀಣ ವಿಕಾಸ. ಈ ಹಿನ್ನೆಲೆಯಲ್ಲಿಯೇ ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿನ ಕುಂದುಕೊರತೆ ನಿವಾರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು. ನಾನು 2004ರಲ್ಲಿ ಶಾಸಕನಾಗಿ ಆಯ್ಕೆಯಾದಾಗಲೂ ಶೈಕ್ಷಣಿಕ ಬೆಳವಣಿಗೆಗೆ ಆಸಕ್ತಿ ವಹಿಸಿದ್ದೆ. 2008ರಲ್ಲಿ ಮರು ಆಯ್ಕೆಯಾದಾಗಲೂ ಶಾಲೆಗಳಿಗೆ ಭೇಟಿ ಮಾಡಿದ್ದೆ. ದೇಶದ ಭವಿಷ್ಯ ರೂಪುಗೊಳ್ಳುವುದೇ ಶಾಲಾ ತರಗತಿ ಕೋಣೆಗಳಲ್ಲಿ ಎನ್ನುವುದು ತಮ್ಮ ಖಚಿತ ಅಭಿಪ್ರಾಯವಾಗಿದೆ ಎಂದರು.
 
ನಮ್ಮ ಮಕ್ಕಳು ಜನ್ಮತಃ ಜಾಣರು. ಆದರೆ, ನಂತರದ ಅವಧಿಯಲ್ಲಿ ಸ್ವಲ್ಪ ಹಿಂದೆ ಬೀಳುತ್ತಿದ್ದಾರೆ. ಮನೆಯಲ್ಲಿನ ವಾತಾವರಣ, ಶಾಲಾ ವಾತಾವರಣ, ಶಾಲೆಯಲ್ಲಿನ ಕಲಿಕೆ ಮತ್ತಿತರ ಕಾರಣಗಳಿಂದಾಗಿ ಮಕ್ಕಳು ಹಿಂದೆ ಬೀಳುವಂತಾಗಿದೆ. ಮಕ್ಕಳಲ್ಲಿನ ಜಾಣ್ಮೆಯನ್ನು, ಪ್ರತಿಭೆಯನ್ನು ಗುರುತಿಸುವ ಕೆಲಸ ಮನೆಯಲ್ಲಿ, ಶಾಲೆಯಲ್ಲಿ ಪರಿಣಾಮಕಾರಿಯಾಗಿ ನಡೆಯಬೇಕು. ಪ್ರೋತ್ಸಾಹ ಹಾಗೂ ಮಾರ್ಗದರ್ಶನವೂ ಸಿಗಬೇಕು. ಅಂದಾಗಲೇ ಮಕ್ಕಳು ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಬಲ್ಲರು ಎಂದು ಹೇಳಿದರು

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸದಸ್ಯ ಅಫೂಜಖಾನ್‌, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು, ಸದಸ್ಯೆ ಲಲಿತಾಬಾಯಿ ರಾಮಚಂದ್ರ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಧೇನುಸಿಂಗ್‌ ಚವ್ಹಾಣ, ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ್‌, ಮೊರಾರ್ಜಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡೆ, ದೇವಿದಾಸ
ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.