ಖಾಸಗಿ ಆಸ್ಪತ್ರೆ-ಔಷಧ ಅಂಗಡಿ ಬಂದ್
Team Udayavani, Jul 29, 2018, 12:22 PM IST
ಬೀದರ: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಖಾಸಗಿ ಆಸ್ಪತ್ರೆಗಳು ಹಾಗೂ ಔಷಧ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ ಸಂಪೂರ್ಣ ಬಂದ್ ಆಗಿತ್ತು. ರೋಗಿಗಳು ವೈದ್ಯರ ಸೇವೆ ಇಲ್ಲ ಎಂದು ತಿಳಿದು ಪರದಾಡುವಂತಾಗಿತ್ತು. ಆಸ್ಪತ್ರೆಗಳಲ್ಲಿ ಈ ಮೊದಲೆ ದಾಖಲಾದ ರೋಗಿಗಳು, ತುರ್ತು ಚಿಕಿತ್ಸಾ ಘಟಕಗಳು ಹಾಗೂ ಒಳರೋಗಿ ಚಿಕಿತ್ಸಾ ಘಟಕಗಳ ಸೇವೆ ಎಂದಿನಂತೆ ಇತ್ತು. ಖಾಸಗಿ ಆಸ್ಪತ್ರೆಗಳ ಬಾಗಿಲು ಮುಚ್ಚಿದ ಹಿನ್ನೆಲೆಯಲ್ಲಿ ರೋಗಿಗಳು ಸರ್ಕಾರಿ ಆಸ್ಪತ್ರೆಗಳ ಕಡೆ ಮುಖ ಮಾಡಿದರು.
ಖಾಸಗಿ ಆಸ್ಪತ್ರೆಗಳೊಂದಿಗೆ ಔಷಧ ಅಂಗಡಿಗಳು ಕೂಡ ಬಂದ್ ಆಗಿರುವುದರಿಂದ ಜನರು ಸಮಸ್ಯೆ ಎದುರಿಸುವಂತಾಯಿತು. ಪ್ರತಿದಿನಕ್ಕಿಂತ ಶನಿವಾರ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚು ಕಂಡುಬಂದಿತು. ಸಣ್ಣಪುಟ್ಟ ಸಮಸ್ಯೆಗಳನ್ನು ಬಿಟ್ಟರೆ ರೋಗಿಗಳ ಚಿಕಿತ್ಸೆಯಲ್ಲಿ ಸಮಸ್ಯೆಗಳು ಕಂಡುಬಂದಿಲ್ಲ. ಸರದಿಯಲ್ಲಿ ನಿಂತು ರೋಗಿಗಳು ಚಿಕಿತ್ಸೆ ಪಡೆದರು.
ಮುಷ್ಕರ ಹಿನ್ನಲೆಯಲ್ಲಿ ಐಎಂಎ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವಿಧೇಯಕ ವಿರೋಸಿಧಿ ವೈದ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ