ಭಾಲ್ಕಿ ಕ್ಷೇತ್ರದ 70 ಸಾವಿರ ಎಕರೆಗೆ ತಿಂಗಳೊಳಗೆ ನೀರು: ಖಂಡ್ರೆ
Team Udayavani, Dec 1, 2020, 2:56 PM IST
ಭಾಲ್ಕಿ: 1969ರಲ್ಲಿ ಆರಂಭವಾಗಿದ್ದ ಜಿಲ್ಲೆಯ ರೈತರ ಜೀವನಾಡಿ ಕಾರಂಜಾ ಯೋಜನೆ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು, ತಾಲೂಕಿನ ಸುಮಾರು 70 ಸಾವಿರ ಎಕರೆ ಜಮೀನಿಗೆ ತಿಂಗಳೊಳಗೆ ನೀರು ಹರಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಕಾರಂಜಾ ಯೋಜನೆಯ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಕಾರಂಜಾ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. 1969ರಲ್ಲಿ ನಮ್ಮ ತಂದೆ ಭೀಮಣ್ಣ ಖಂಡ್ರೆ ಶಾಸಕರಿದ್ದಾಗ ಕಾರಂಜಾ ಯೋಜನೆ ಆರಂಭಗೊಂಡಿತು. ನಂತರದ ವರ್ಷಗಳಲ್ಲಿ ಈ ಯೋಜನೆ ಆಮೆವೇಗ ಪಡೆಯಿತು. ಆಗಾಗ್ಗ ಬರುವ 5ರಿಂದ 10 ಕೋಟಿ ರೂ. ಅನುದಾನ ನಿರ್ವಹಣೆಗೆ ಖರ್ಚಾಗುತ್ತಿತ್ತು. ಮುಖ್ಯ ಕಾಲುವೆ ಸಂಪೂರ್ಣ ಹಾಳಾಗಿದ್ದವು. ಇನ್ನೇನು ಕಾರಂಜಾ ಯೋಜನೆ ಮುಳಗಡೆ ಆಗಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೇ ನಾನು ಶಾಸಕನಾಗಿ ಆಯ್ಕೆ ಆಗುತ್ತಲೇ ಕಾರಂಜಾ ಯೋಜನೆ ಕೈಗತ್ತಿಕೊಳ್ಳಲಾಯಿತು. ಕಾರಂಜಾ ಯಶಸ್ವಿಗೆ ವಿಸ್ತೃತ ಯೋಜನೆ ರೂಪಿಸಿ 2016ರಲ್ಲಿ ಸಚಿವನಾಗುತ್ತಲೇ ಅಂದಿನ ಸಿಎಂ ಸಿದ್ದರಾಮಯ್ಯನವರ ಮೇಲೆ ನಿರಂತರ ಒತ್ತಡ ತಂದು ಕಾಲುವೆ ಆಧುನೀಕರಣಕ್ಕಾಗಿ 500 ಕೋಟಿ ರೂ. ಅನುದಾನ ಮಂಜೂರಾತಿ ಮಾಡಿಸಿದರ ಪರಿಣಾಮ ಇದೀಗ 131 ಕಿ.ಮೀ. ಬಲದಂಡೆ ಮತ್ತು 31 ಕಿ.ಮೀ. ಎಡದಂಡೆಕಾಲುವೆ ಆಧುನೀಕರಣ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಈ ಬಾರಿ ಉತ್ತಮ ಮಳೆ ಆಗಿದ್ದು ಕಾರಂಜಾ ಜಲಾಶಯ ಸಂಪೂರ್ಣ ಭರ್ತಿ ಆಗಿದ್ದು, 7.69 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಾಲುವೆ ಕೊನೆಯ ಅಂಚಿನ ವರೆಗೂ ನೀರು ಹರಿಸಲು ಸಿದ್ಧಗೊಂಡಿದ್ದು, ತಿಂಗಳೊಳಗೆ ಕಾಲುವೆಗೆ ನೀರು ಹರಿದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೀರು ರೈತರಿಗೆ ಬಂಗಾರ ಇದ್ದಂತೆ. ರೈತರು ನೀರಿನ ಸದ್ಬಳಕೆ ಮಾಡಿಕೊಂಡು ವರ್ಷದಲ್ಲಿ 3 ಬೆಳೆ ಬೆಳೆದು ಆರ್ಥಿಕ ಸದೃಢರಾಗಬೇಕು ಎಂದು ತಿಳಿಸಿದರು. ಕಾರಂಜಾ ಯೋಜನೆ ಕಾರ್ಯಪಾಲಕ ಅಭಿಯಂತರ ವಿಲಾಸ ಮಾಶೆಟ್ಟೆ ಮಾತನಾಡಿದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಶಿವಕುಮಾರ ದೇಶಮುಖ, ನೀರು ಬಳಕೆದಾರರ ಮಹಾಮಂಡಳಅಧ್ಯಕ್ಷರಾದ ಹಣಮಂತ ಪಾಟೀಲ್,ಕಾರಂಜಾ ಯೋಜನೆ ಅಧಿಕಾರಿಗಳಾದ ಚಂದ್ರಶೇಖರ ರತ್ನಾಪೂರ್, ಧನರಾಜ ಲದ್ದೆ, ವಿಜಯಕುಮಾರ, ಅಬ್ದುಲ ಖುದ್ದುಸ್, ಮಚೇಂದ್ರ, ಲಕ್ಷ್ಮಣ, ಲೋಕೋಪಯೋಗಿ ಎಇಇ ಶಿವಶಂಕರ ಕಾಮಶೆಟ್ಟಿ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ