ಪ್ರತಿಭಟನೆಗೆ ಸೀಮಿತವಾದ ಬಂದ್‌


Team Udayavani, Sep 29, 2020, 3:49 PM IST

ಪ್ರತಿಭಟನೆಗೆ ಸೀಮಿತವಾದ ಬಂದ್‌

ಸಾಂದರ್ಭಿಕ ಚಿತ್ರ

ಬೀದರ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆ ಜಾರಿ ವಿರೋಧಿ ಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ “ಕರ್ನಾಟಕ ಬಂದ್‌’ಗೆ ಗಡಿ ಜಿಲ್ಲೆ ಬೀದರನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.

ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬಂದ್‌ ಗೆ ಯಾವುದೇ ಸ್ಪಂದನೆ ಸಿಗಲಿಲ್ಲ. ನಗರದ ಗಾಂಧಿ  ಗಂಜ್‌ನ ಅಡತ್‌, ಕೃಷಿ ಯಂತ್ರೋಪಕರಣ ಮತ್ತು ಔಷಧ ಅಂಗಡಿಗಳ ಮಾರುಕಟ್ಟೆ ಮಾತ್ರ ಬಂದ್‌ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು. ಇವನ್ನು ಹೊರತುಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದ್ದವು. ಆಟೋ, ಬಸ್‌ ಸಂಚಾರ ಸಾಮಾನ್ಯವಾಗಿತ್ತು.

ನಗರದಲ್ಲಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಎಐಕೆಎಸ್‌, ಕೆಆರ್‌ಆರ್‌ಎಸ್‌, ಡಿಎಸ್‌ಎಸ್‌, ಕಲ್ಯಾಣ

ಕನಾಟಕ ರೈತ ಸಂಘದ, ಎಐಟಿಯುಸಿ, ಬಿಕೆಎಂಯು, ಎಐಟಿಐ ಹಾಗೂ ದಲಿತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ನಗರದ ಅಂಬೇಡ್ಕರ್‌ ವೃತ್ತದಿಂದ ಭಗತಸಿಂಗ್‌ ವೃತ್ತ, ತಹಶೀಲ್ದಾರ್‌ ಕಚೇರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಬಳಿಕ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಪ್ರತಿಭಟನಾಕಾರರು ಮಾತನಾಡಿ, ಭೂ ಸುಧಾರಣೆಗೆ ಕಾಯ್ದೆ ಜಾರಿ ಮೂಲಕ

ಸರ್ಕಾರ ರೈತ-ಕೃಷಿ ಕಾರ್ಮಿಕರ ಮತ್ತು ಭೂ ರಹಿತ ಬಡಜನರ ಪರವಾದ ಆಶಯಗಳನ್ನೇ ನಾಶ ಮಾಡಿ ಬಂಡವಾಳಶಾಹಿ ಮತ್ತು ಕಾರ್ಪೋರೇಟ್‌ ವಲಯಕ್ಕೆ ಅನುಕೂಲ ಮಾಡಿಕೊಡಲು ಹೊರಟಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸದಿದ್ದರೆ ಬಂಡವಾಳಶಾಹಿಗಳ ಕಪ್ಪು ಹಣದ ಆಮಿಷಕ್ಕೆ ಸಿಲುಕಿ ತಮ್ಮ ನೆಲದಲ್ಲಿ ತಾವೇ ತಬ್ಬಲಿಗಳಾಗಬೇಕಾದ ದುಸ್ಥಿತಿ ಭೂಮಿ ನಂಬಿದವರಿಗೆ ಬರುವುದು ನಿಶ್ಚಿತ ಎಂದು ಎಚ್ಚರಿಸಿದರು.

ಖಾಸಗಿ ಸಂಘ-ಸಂಸ್ಥೆಗಳಿಗೆ ದೀರ್ಘ‌ ಕಾಲದವರೆಗೆ ಗುತ್ತಿಗೆಗೆ ನೀಡಲಾಗಿದ್ದ ಜಮೀನನ್ನು ಸಹ ಗುತ್ತಿಗೆದಾರರಿಗೆ ಪರಭಾರೆ ಮಾಡಲು ಸರ್ಕಾರನಿರ್ಧರಿಸಿದೆ. ಈ ರೀತಿ ಪ್ರಜಾಸತ್ತಾತ್ಮಕವಲ್ಲದ ವಿಧಾನಗಳಲ್ಲಿ ನೈಸರ್ಗಿಕ ಸಂಪನ್ಮೂಲವನ್ನು ಕೆಲವು ಶ್ರೀಮಂತರು, ಬಂಡವಾಳಶಾಹಿಗಳ ಒಡೆತನಕ್ಕೆಒಪ್ಪಿಸುವುದು ಸಮಾನತೆ ತತ್ವಕ್ಕೆ ವಿರುದ್ಧವಾದುದು. ಆದ್ದರಿಂದ ಇಂತಹ ಅಮಾನುಷ ಆದೇಶಗಳಿಂದ ಜನರಿಗೆ ಉಳಿಗಾಲವಿಲ್ಲ ಎಂದರು.

ಬಿಜೆಪಿ ಸರ್ಕಾರದ ಈ ಅನೈತಿಕ ನಿರ್ಧಾರದಿಂದ ಭೂ-ಒಡೆತನದ ಕನಸು ಕಂಡ ಲಕ್ಷಾಂತರ ಭೂ ರಹಿತರ ಕೃಷಿ ಕಾರ್ಮಿಕರ ಆಸೆಗೆ ಬಿಜೆಪಿ ಸರ್ಕಾರ ಕೊಳ್ಳಿ ಇಟ್ಟುಶಾಶ್ವತವಾಗಿ ಅವರನ್ನು ಭೂಹೀನರನ್ನಾಗಿಸುತ್ತಿದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ, ಎಐಕೆಎಸ್‌ ಉಪಾಧ್ಯಕ್ಷ ಬಾಬುರಾವ್‌ ಹೊನ್ನಾ, ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಮುಖರಾದ ನಜೀರ್‌ ಅಹ್ಮದ್‌, ಖಾಸೀಮ್‌ ಅಲಿ, ಅರ್‌.ಪಿ. ರಾಜಾ, ರವಿರಾಜ್‌, ದಯಾನಂದ ಸ್ವಾಮಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.