ಪ್ರತಿಭಟನೆಗೆ ಸೀಮಿತವಾದ ಬಂದ್‌


Team Udayavani, Sep 29, 2020, 3:49 PM IST

ಪ್ರತಿಭಟನೆಗೆ ಸೀಮಿತವಾದ ಬಂದ್‌

ಸಾಂದರ್ಭಿಕ ಚಿತ್ರ

ಬೀದರ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆ ಜಾರಿ ವಿರೋಧಿ ಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ “ಕರ್ನಾಟಕ ಬಂದ್‌’ಗೆ ಗಡಿ ಜಿಲ್ಲೆ ಬೀದರನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.

ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬಂದ್‌ ಗೆ ಯಾವುದೇ ಸ್ಪಂದನೆ ಸಿಗಲಿಲ್ಲ. ನಗರದ ಗಾಂಧಿ  ಗಂಜ್‌ನ ಅಡತ್‌, ಕೃಷಿ ಯಂತ್ರೋಪಕರಣ ಮತ್ತು ಔಷಧ ಅಂಗಡಿಗಳ ಮಾರುಕಟ್ಟೆ ಮಾತ್ರ ಬಂದ್‌ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು. ಇವನ್ನು ಹೊರತುಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದ್ದವು. ಆಟೋ, ಬಸ್‌ ಸಂಚಾರ ಸಾಮಾನ್ಯವಾಗಿತ್ತು.

ನಗರದಲ್ಲಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಎಐಕೆಎಸ್‌, ಕೆಆರ್‌ಆರ್‌ಎಸ್‌, ಡಿಎಸ್‌ಎಸ್‌, ಕಲ್ಯಾಣ

ಕನಾಟಕ ರೈತ ಸಂಘದ, ಎಐಟಿಯುಸಿ, ಬಿಕೆಎಂಯು, ಎಐಟಿಐ ಹಾಗೂ ದಲಿತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ನಗರದ ಅಂಬೇಡ್ಕರ್‌ ವೃತ್ತದಿಂದ ಭಗತಸಿಂಗ್‌ ವೃತ್ತ, ತಹಶೀಲ್ದಾರ್‌ ಕಚೇರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಬಳಿಕ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಮೂಲಕ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಪ್ರತಿಭಟನಾಕಾರರು ಮಾತನಾಡಿ, ಭೂ ಸುಧಾರಣೆಗೆ ಕಾಯ್ದೆ ಜಾರಿ ಮೂಲಕ

ಸರ್ಕಾರ ರೈತ-ಕೃಷಿ ಕಾರ್ಮಿಕರ ಮತ್ತು ಭೂ ರಹಿತ ಬಡಜನರ ಪರವಾದ ಆಶಯಗಳನ್ನೇ ನಾಶ ಮಾಡಿ ಬಂಡವಾಳಶಾಹಿ ಮತ್ತು ಕಾರ್ಪೋರೇಟ್‌ ವಲಯಕ್ಕೆ ಅನುಕೂಲ ಮಾಡಿಕೊಡಲು ಹೊರಟಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸದಿದ್ದರೆ ಬಂಡವಾಳಶಾಹಿಗಳ ಕಪ್ಪು ಹಣದ ಆಮಿಷಕ್ಕೆ ಸಿಲುಕಿ ತಮ್ಮ ನೆಲದಲ್ಲಿ ತಾವೇ ತಬ್ಬಲಿಗಳಾಗಬೇಕಾದ ದುಸ್ಥಿತಿ ಭೂಮಿ ನಂಬಿದವರಿಗೆ ಬರುವುದು ನಿಶ್ಚಿತ ಎಂದು ಎಚ್ಚರಿಸಿದರು.

ಖಾಸಗಿ ಸಂಘ-ಸಂಸ್ಥೆಗಳಿಗೆ ದೀರ್ಘ‌ ಕಾಲದವರೆಗೆ ಗುತ್ತಿಗೆಗೆ ನೀಡಲಾಗಿದ್ದ ಜಮೀನನ್ನು ಸಹ ಗುತ್ತಿಗೆದಾರರಿಗೆ ಪರಭಾರೆ ಮಾಡಲು ಸರ್ಕಾರನಿರ್ಧರಿಸಿದೆ. ಈ ರೀತಿ ಪ್ರಜಾಸತ್ತಾತ್ಮಕವಲ್ಲದ ವಿಧಾನಗಳಲ್ಲಿ ನೈಸರ್ಗಿಕ ಸಂಪನ್ಮೂಲವನ್ನು ಕೆಲವು ಶ್ರೀಮಂತರು, ಬಂಡವಾಳಶಾಹಿಗಳ ಒಡೆತನಕ್ಕೆಒಪ್ಪಿಸುವುದು ಸಮಾನತೆ ತತ್ವಕ್ಕೆ ವಿರುದ್ಧವಾದುದು. ಆದ್ದರಿಂದ ಇಂತಹ ಅಮಾನುಷ ಆದೇಶಗಳಿಂದ ಜನರಿಗೆ ಉಳಿಗಾಲವಿಲ್ಲ ಎಂದರು.

ಬಿಜೆಪಿ ಸರ್ಕಾರದ ಈ ಅನೈತಿಕ ನಿರ್ಧಾರದಿಂದ ಭೂ-ಒಡೆತನದ ಕನಸು ಕಂಡ ಲಕ್ಷಾಂತರ ಭೂ ರಹಿತರ ಕೃಷಿ ಕಾರ್ಮಿಕರ ಆಸೆಗೆ ಬಿಜೆಪಿ ಸರ್ಕಾರ ಕೊಳ್ಳಿ ಇಟ್ಟುಶಾಶ್ವತವಾಗಿ ಅವರನ್ನು ಭೂಹೀನರನ್ನಾಗಿಸುತ್ತಿದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ, ಎಐಕೆಎಸ್‌ ಉಪಾಧ್ಯಕ್ಷ ಬಾಬುರಾವ್‌ ಹೊನ್ನಾ, ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಮುಖರಾದ ನಜೀರ್‌ ಅಹ್ಮದ್‌, ಖಾಸೀಮ್‌ ಅಲಿ, ಅರ್‌.ಪಿ. ರಾಜಾ, ರವಿರಾಜ್‌, ದಯಾನಂದ ಸ್ವಾಮಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.