ಖೇಣಿ ಕಾಂಗ್ರೆಸ್ ಸೇರ್ಪಡೆ ವಿರೋಧಿಸಿ ಪ್ರತಿಭಟನೆ
Team Udayavani, Mar 8, 2018, 2:33 PM IST
ಹುಮನಾಬಾದ: ಶಾಸಕ ಅಶೋಕ ಖೇಣಿ ಕಾಂಗ್ರೆಸ್ ಸೇರ್ಪಡೆ ವಿರೋಧಿಸಿ ಮಾಜಿ ಮುಖ್ಯಮಂತ್ರಿ ದಿ| ಧರಂಸಿಂಗ್ ಅವರ ಅಳಿಯ ಚಂದ್ರಸಿಂಗ್ ಅವರಿಗೆ ಪಕ್ಷದ ಟಿಕೆಟ್ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬೀದರ ದಕ್ಷಿಣ ಕ್ಷೇತ್ರದ ಮನ್ನಾಎಖೇಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ನಾಲ್ಕು ವರ್ಷಗಳಿಂದ ಚಂದ್ರಸಿಂಗ್ ಅವರು ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸುತ್ತಿದ್ದಾರೆ. ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಕ್ಷೇತ್ರದ ಜನತೆಯ ಸಮಸ್ಯೆಗೆ ಸ್ಪಂದಿಸಿದ್ದಾರೆ. ಆದರೆ, ಹಾಲಿ ಶಾಸಕ ಖೇಣಿ ಸ್ಥಳೀಯ ಸಮಸ್ಯೆಗಳನ್ನು ಈಡೇರಿಸಲಾಗದೆ ಇದೀಗ ಕಾಂಗ್ರೆಸ್ ಪಕ್ಷ
ಸೇರ್ಪಡೆಗೊಂಡಿರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರಲ್ಲಿ ಒಬ್ಬರಾಗಿರುವ ಕಾಂಗ್ರೆಸ್ ಮುಖಂಡರಾದ ಚಂದ್ರಸಿಂಗ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು
ಆಗ್ರಹಿಸಿ ಘೋಷಣೆ ಕೂಗುತ್ತಿದ್ದರು. ಇದೇ ವೇಳೆ ಬೆಂಬಲಿಗನೊಬ್ಬ ಚಂದ್ರಸಿಂಗ್ ಅವರಿಗೆ ಟಿಕೆಟ್ ನೀಡಬೇಕು ಇಲ್ಲದಿದ್ದರೆ ಮೈಮೇಲೆ ಎಣ್ಣೆ ಸುರಿದುಕೊಂಡು ಆತ್ಯಹತ್ಯೆಗೆ ಯತ್ನಿಸಿದನು. ಸ್ಥಳದಲ್ಲಿದ್ದ ಪ್ರತಿಭಟನಾಕಾರರು ಅವರನ್ನು ಸಮಾಧಾನ ಪಡಿಸಿ ಕರೆ ತಂದರು. ಮತ್ತೂಬ್ಬ ಬೆಂಬಲಿಗ ಏಕಾಏಕಿ ರಸ್ತೆ ಮಧ್ಯಕ್ಕೆ ವಾಹನ ಎದುರಿಗೆ ಮಲಗಿ ಸಂಚಾರಕ್ಕೆ ತೊಡಕು ಉಂಟು ಮಾಡಿದ ಘಟನೆಯೂ ನಡೆಯಿತು.
ಇದೇ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಅಶೋಕ ಖೇಣಿ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ