ಹೆದ್ದಾರಿ ತಡೆದು ಪ್ರತಿಭಟನೆ


Team Udayavani, Nov 27, 2021, 3:46 PM IST

21protest

ಸುರಪುರ: ದೇವಪುರ ಕ್ರಾಸ್‌ನ ಬೀದರ- ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದವರು (ಹಸಿರು ಸೇನೆ) ಶುಕ್ರವಾರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಕರಾರೈ ಸಂಘದ (ಹಸಿರು ಸೇನೆ) ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ಮಾತನಾಡಿ, ಮೂರು ಕೃಷಿ ಕಾಯ್ದೆ ರದ್ದು ಮಾಡುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ರೈತರ ಹೋರಾಟದಿಂದ ಕೇಂದ್ರ ಸರ್ಕಾರ ಕಾಯ್ದೆ ವಾಪಸ್ಸಾತಿಗೆ ಸಮ್ಮತಿ ಸೂಚಿಸಿದೆ. ಆದರೆ, ಕಾಯ್ದೆಗಳಲ್ಲಿರುವ ಪ್ರಮುಖ ಅಂಶಗಳ ಕುರಿತು ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ. ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಬದ್ಧಗೊಳಿಸುವಂತೆ ಆಗ್ರಹಿಸಿದರು.

ಲಖೀಂಪೂರ ಖೇರ್‌ನಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಕಾರಣರಾದ ಕೇಂದ್ರ ಸಹಾಯಕ ಗೃಹ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಆಶೀಸ್‌ ಮಿಶ್ರಾಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆನ್ನುವ ಪ್ರಮುಖ ಬೇಡಿಕೆ ಮತ್ತು ಪರಿಹಾರಕ್ಕಾಗಿ ಸಂಯುಕ್ತ ಕಿಸಾನ್‌ ಮೋರ್ಚಾ ರೈತರು ದೆಹಲಿ ಗಡಿಗಳಲ್ಲಿ ಹೋರಾಟ ಮುಂದುವರಿಸಿದ್ದಾರೆ. ಸಂಸತ್‌ನಲ್ಲಿ ಈ ಮೂರು ಕಾಯ್ದೆಗಳು ಅಧಿಕೃತವಾಗಿ ರದ್ದಾಗುವವರೆಗೂ ಹೋರಾಟ ಹಿಂಪಡೆಯಲು ಸಾಧ್ಯವಿಲ್ಲವೆಂದು ಪಟ್ಟು ಹಿಡಿದಿದ್ದಾರೆ. ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ಉದ್ಯೋಗ ಒದಗಿಸಿ ಪರಿಹಾರ ನೀಡಬೇಕು ಎಂದರು.

ಅಕಾಲಿಕ ಮಳೆಯಿಂದ ಕಟಾವಿಗೆ ಬಂದ ಬೆಳೆಗಳು ಹಾಳಾಗಿವೆ. ರಾಜ್ಯ ಸರ್ಕಾರ ಅತಿವೃಷ್ಟಿಯಿಂದ ಹಾಳಾದ ಬೆಳೆ ನಷ್ಟದ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ರೈತರು ಹಾಗೂ ಸಲಹಾ ಸಮಿತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕ ಪಕ್ಷೀಯವಾಗಿ ಮಾ.17ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಅವೈಜ್ಞಾನಿಕ. ಇದರಿಂದ ದ್ವಿದಳ ಧಾನ್ಯಗಳು, ಬೇಸಿಗೆ ಶೇಂಗಾ, ಭತ್ತ, ಸಜ್ಜಿ ಇತರೆ ಬೆಳೆಗಳು ಕಟಾವಿಗೆ ಬರುವುದಕ್ಕಿಂತ ಮುಂಚೆಯೇ ನೀರಿಲ್ಲದೇ ಒಣಗುವ ಸಾಧ್ಯತೆಗಳಿವೆ. ಕಾರಣ ವಾರಾಬಂದಿ ರದ್ದುಪಡಿಸಿ ಏ.15ರವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು. ರಾಜ್ಯ ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರ ತೆರೆದು ಗರಿಷ್ಠ ಪ್ರಮಾಣದಲ್ಲಿ ಬೆಂಬಲಿತ ಬೆಲೆಗೆ ಭತ್ತ ಖರೀದಿಸಬೇಕು ಎಂದರು.

ನಂತರ ಗ್ರೇಡ್‌-2 ತಹಶೀಲ್ದಾರ್‌ ಸುಫೀಯಾ ಸುಲ್ತಾನ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷೆ ಮಹಾದೇವಮ್ಮ ಬೇವಿನಾಳಮಠ, ಸುರಪುರ-ಹುಣಸಗಿ ತಾಲೂಕು ಅಧ್ಯಕ್ಷರಾದ ಹಣಮಂತ ಚಂದಲಾಪುರ, ಎಚ್‌.ಆರ್‌. ಬಡಿಗೇರ, ಹನುಮಗೌಡ ನಾರಾಯಣಪುರ, ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ, ಮಲ್ಲಯ್ಯ ಕಮತಗಿ, ಮಲ್ಲಣ್ಣ ಹಾಲಭಾವಿ, ಗದ್ದೆಪ್ಪ ಜಂಗಿನಗಡ್ಡಿ, ತಿಪ್ಪಣ್ಣ ಜಂಪಾ, ವೆಂಕಟೇಶ ಕುಪಗಲ್‌, ರಾಘವೇಂದ್ರ ಕುಪಗಲ್‌, ಪ್ರಭು ದೊರೆ, ಮೌನೇಶ ಅರಳಹಳ್ಳಿ, ರುದ್ರಪ್ಪಗೌಡ ಮೇಟಿ, ಧರ್ಮಣ್ಣ ಮಳಕೇರಿ, ಹಣಮಂತ್ರಾಯ ನಾರಾಯಣಪುರ ಇತರರಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.