ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 3, 2022, 2:46 PM IST
ಹುಮನಾಬಾದ: ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮಿತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿ 65 ತಡೆದು ಪ್ರತಿಭಟನೆ ನಡೆಸಲು ಮುಂದಾದ ಸಂದರ್ಭದಲ್ಲಿ 30ಕ್ಕೂ ಅಧಿಕ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನೂರಾರು ವರ್ಷಗಳಿಂದ ಶೋಷಣೆಗೆ ಒಳಪಟ್ಟ ಸಮುದಾಯ ಹಕ್ಕಿಗಾಗಿ ಬೀದಿಗಿಳಿದಿದೆ. ಸರ್ಕಾರ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯ. ಸರ್ಕಾರ ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿ ಸರಿಪಡಿಸಿ ಜನಸಂಖ್ಯೆಗೆ ಅನುಗುಣವಾಗಿ ವರ್ಗೀಕರಣ ಮಾಡಲು ಸದಾಶಿವ ಆಯೋಗ ರಚಿಸಿತ್ತು. ಆಯೋಗವು ಗಣತಿ ನಡೆಸಿ ಮಾದಿಗ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿದೆ. ವಿಧಾನಸಭೆಗಳಿಗೆ ಪರಿಶಿಷ್ಟ ಜಾತಿ-ಪಂಗಡಗಳಿಗೆ ಒಳ ಮೀಸಲಾತಿ ವರ್ಗೀಕರಣ ಮಾಡಲು ಅಧಿಕಾರವಿದೆ ಸುಪ್ರೀಂಕೋರ್ಟ್ ತೀರ್ಪು ಕೂಡ ನೀಡಿದೆ. ಕೂಡಲೇ ರಾಜ್ಯ ಸರ್ಕಾರ ಮಾದಿಗರ ಬೇಡಿಕೆ ಈಡೇರಿಸುವ ಜೊತೆಗೆ ರಾಜ್ಯದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರ ಪ್ರಾಂಗಣದಲ್ಲಿ ಜಮಾಗೊಂಡಿದ್ದ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಮಾದಿಗ ಸಮುದಾಯದ ಪ್ರತಿಭಟನಾಕಾರರು ಕೆಲಹೊತ್ತು ಪ್ರವಾಸಿ ಮಂದಿರ ಪ್ರಾಂಗಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಪ್ರವಾಸಿ ಮಂದಿರ ಹೊರಗಡೆ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ನಂತರ ಪ್ರತಿಭಟನಾಕಾರರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೀದರ ಹೆಚ್ಚುವರಿ ಪೊಲೀಸ್ ಅಧಿಕಾರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಒದಗಿಸಿದ್ದರು. ಈ ವೇಳೆ ಜಿಲ್ಲಾಧ್ಯಕ್ಷ ಪ್ರದೀಪ ಹೆಗಡೆ, ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ, ಉಪಾಧ್ಯಕ್ಷ ರಾಜಕುಮಾರ ಹಳ್ಳಿಖೇಡಕರ್, ಬಂಟಿ ದರಬಾರೆ, ಶಿವರಾಜ ದೋಡ್ಡಿ, ವಿಜಯಕುಮಾರ ಹಿಪ್ಪಳಗಾಂವ, ಹರೀಶ ಗಾಯಕವಾಡ, ನೀಲಕಂಠ ಭೇಂಡೆ, ಅಶೋಖ ಸಂಗನೋರೆ, ಶೀರೋಮಣಿ ನೀಲನೋರ, ಮನೋಜ ತುಂಬರ್ಚಿ, ತುಕಾರಾಂ ಲಾಡೆ, ಶಾದ್ರಕ್, ಸಂಪತ ದರ್ಗೆ, ಸಂಜು ಮಾಳಗೆ, ಸಚೀನ ಅಂಬೆಸಂಗಿ, ಲಕ್ಷ್ಮಣ ಮುದಾಳೆ, ಸತೀಶ ನಿಟ್ಟೂರೆ, ಸ್ವಾಮಿದಾಸ ಮೇಘಾ, ಶಾಲಿವಾನ ಸೂರ್ಯವಂಶಿ, ಸಿದ್ದು ಟೇಲರ್, ವೀರಶೆಟ್ಟಿ ಬಂಬೂಳಗಿ, ಮನೋಹರ ಉಡಬಾಳ, ವಡುರಾಜ ರೇಕುಳಗಿ, ಲಾಲಪ್ಪ ನಿರ್ಣಾ, ವಿಜಯಕುಮಾರ ಸೂರ್ಯವಂಶಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ