ಕೃಷಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
Team Udayavani, Jun 16, 2020, 7:49 AM IST
ಬೀದರ: ಜಿಲ್ಲೆಯಲ್ಲಿ ಕಳಪೆ ಬೀಜ ಸರಬರಾಜು ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತರ ಸಂಘದ ಸದಸ್ಯರು ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸೋಮವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಸಂಘದ ಸಿದ್ರಾಮಪ್ಪ ಆಣದೂರೆ, ಶ್ರೀಮಂತ ಬಿರಾದಾರ ಮತ್ತು ದಯಾನಂದ ಸ್ವಾಮಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿ ಕಾರಿಗೆ ಬರೆದ ಮನವಿಯನ್ನು ಕೃಷಿ ಅಧಿಕಾರಿಗೆ ಸಲ್ಲಿಸಿದರು. ಜಿಲ್ಲೆಯಲ್ಲಿ ಕೆಲವು ರೈತ ಸಂರ್ಪಕ ಕೇಂದ್ರಗಳಿಂದ ರೈತರು ಸೋಯಾಬಿನ್ ಬೀಜ ಪಡೆದು ಬಿತ್ತನೆ ಮಾಡಿದ್ದಾರೆ. ಆದರೆ, ಮೊಳಕೆಯೇ ಬಂದಿಲ್ಲ. ಇವು ಕಳಪೆ ಬೀಜ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ. ಕಳಪೆ ಬೀಜ ಸರಬರಾಜು ಮಾಡಿದವರ ವಿರುದ್ದ ಕ್ರಿಮಿನಲ್ ದಾವೆ ದಾಖಲಿಸಬೇಕು. ರೈತರಿಂದ ಬೀಜ ಮರಳಿ ಪಡೆದು ಉತ್ತಮ ಬೀಜ ಪೂರೈಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರಿಗೆ ಆರು ತಿಂಗಳಿಂದ ಹಣ ಪಾವತಿಸಿಲ್ಲ. ತಮಗೆ ಬೇಕಾದವರಿಗೆ ಮುಂಗಡ ಹಣ ಪಾವತಿಸಿ ಅನ್ಯಾಯ ಮಾಡಲಾಗುತ್ತಿದೆ. ನಿಯಮದಂತೆ ಬಡ್ಡಿ ಸಮೇತ ಹಣ ಪಾವತಿಸುವ ವವ್ಯಸ್ಥೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ