ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ವ್ಯವಸ್ಥೆ

ಬೆಮಳಖೇಡಾದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಉದ್ಘಾಟನೆ

Team Udayavani, Jul 2, 2019, 10:59 AM IST

bidar-02..

ಹುಮನಾಬಾದ: ಬೆಮಳಖೇಡಾ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಸಚಿವ ಬಂಡೆಪ್ಪ ಖಾಶೆಂಪೂರ ಉದ್ಘಾಟಿಸಿದರು.

ಹುಮನಾಬಾದ: ಸರ್ಕಾರಿ ಶಾಲೆಗಳಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಈ ಶಾಲೆ ಆರಂಭಿಸಲಾಗಿದೆ ಎಂದು ಸಚಿವ ಬಂಡೆಪ್ಪ ಖಾಶೆಂಪೂರ ಹೆಳಿದರು.

ಚಿಟಗುಪ್ಪ ತಾಲೂಕು ಬೆಮಳಖೇಡಾ ಗ್ರಾಮದಲ್ಲಿ ಸೋಮವಾರ ಕರ್ನಾಟಕ ಪಬ್ಲಿಕ್‌ ಶಾಲೆ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಮತ್ತು ಎಸ್‌ಎಸ್‌ಎಲಸಿ, ಪಿಯುಸಿ ಫಲಿತಾಂಶ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ಆಯೋಗ ವರದಿ ಆಧರಿಸಿ, 1ರಿಂದ 12ನೇ ತರಗತಿ ವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮುಂದಾಗಿದೆ. ಪ್ರತೀ ತಾಲೂಕಿಗೆ ಒಂದರಂತೆ ರಾಜ್ಯದ ಒಟ್ಟು 176 ತಾಲೂಕುಗಳಲ್ಲಿ ಈ ಶಾಲೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಈ ಶಾಲೆ ಉದ್ಘಾಟಿಸಲಾಗಿದೆ ಎಂದು ಹೇಳಿದರು.

ಈ ಶಾಲೆಗಳ ಯಶಸ್ಸು ಆಧರಿಸಿ, ಮುಂದಿನ ದಿನಗಳಲ್ಲಿ ಹೋಬಳಿ ವ್ಯಾಪ್ತಿಯಲ್ಲೂ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ವರ್ಗ ಆಧರಿಸಿ, ಗುಣಮಟ್ಟದ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್‌ ಲ್ಯಾಬ್‌, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯ ಸೇರಿದಂತೆ ಮಹತ್ವದ ಸೌಲಭ್ಯವನ್ನು ಈ ಶಾಲೆಗಳು ಹೊಂದಿರುತ್ತವೆ ಎಂದು ಹೇಳಿದರು.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನಿಯೋಜನೆ, ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಾಲಾ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿಧಾನ ಕುರಿತು ಮಾರ್ಗದರ್ಶನ ನೀಡಲಾಗುವುದು. ಒಟ್ಟಾರೆ ಪ್ರೌಢ ಹಾಗೂ ಪದವಿಪೂರ್ವ ಹಂತದಿಂದಲೇ ತಂತ್ರಜ್ಞಾನ ಆಧಾರಿತ ನೆರವಿನ ಕಲಿಕೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಈ ಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ರೂ.10ಲಕ್ಷ ಮತ್ತು ಮೂಲಸೌಲಭ್ಯಕ್ಕಾಗಿ ರೂ.5ಲಕ್ಷ ಸೇರಿ ಒಟ್ಟು ರೂ.15 ಲಕ್ಷ ಅನುದಾನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿಬಾಯಿ ಭೂರೆ, ಉಪಾಧ್ಯಕ್ಷೆ ಮಾಣಿಕಬಾಯಿ, ಪಬ್ಲಿಕ್‌ ಶಾಲೆಯ ಪ್ರಾಚಾರ್ಯ ವಿಜಯಲಕ್ಷ್ಮೀ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಓಂಕಾರ ರೂಗನ್‌, ಪಿಆರ್‌ಇ ಎಇಇ ವಾಮನರಾವ್‌ ಇನ್ನಿತರರು ವೇದಿಕೆಯಲ್ಲಿದ್ದರು. ಗ್ರಾಮದ ಗಣ್ಯರು, ಶಿಕ್ಷಣ ಹಾಗೂ ವಿವಿಧ‌ ಇಲಾಖೆಗಳ ಅಧಿಕಾರಿಗಳು ಇದ್ದರು.

ಬಿಇಒ ಶಿವರಾಚಪ್ಪ ವಾಲಿ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು. ಸದಾಶಿವಯ್ಯ ಹಿರೇಮಠ‌ ನಿರೂಪಿಸಿದರು. ಶಾಂತಕುಮಾರ ಭಾಲ್ಕೆ ವಂದಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.