ಜೀವನದ ಕೊನೆ ಉಸಿರಿರುವರೆಗೂ ಜನಸೇವೆ

ಸಹಕಾರ ಕ್ಷೇತ್ರದಿಂದ ಮಾತ್ರ ಸರ್ವಜನರ ಅಭಿವೃದ್ಧಿ ಸಾಧ್ಯವೆಂದು ತೋರಿಸಿಕೊಟ್ಟಿದ್ದಾರೆ

Team Udayavani, Sep 19, 2022, 6:12 PM IST

ಜೀವನದ ಕೊನೆ ಉಸಿರಿರುವರೆಗೂ ಜನಸೇವೆ

ಔರಾದ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ ಆಗಿರುವ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರೂ ಆಗಿರುವ ಉಮಾಕಾಂತ ನಾಗಮಾರಪಳ್ಳಿ ಅವರಿಗೆ ಪಟ್ಟಣದ ಡಾ| ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಆಡಳಿತ ಮಂಡಳಿ, ಕಮಲನಗರ, ಔರಾದ್‌ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಹಾಗೂ ನಾಗಮಾರಪಳ್ಳಿ ಅಭಿಮಾನಿ ಬಳಗದಿಂದ ಅದ್ಧೂರಿ ಸನ್ಮಾನ ನಡೆಯಿತು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಸಹಕಾರ ಮತ್ತು ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರು ಮಾಡಿರುವ ಸೇವೆ ಮತ್ತು ಅವರು ಆಯೋಜಿಸಿರುವ ಸಮಾಜಮುಖೀ ಅಭಿವೃದ್ಧಿ ಕಾರ್ಯಕ್ರಮಗಳು ಸೂರ್ಯಚಂದ್ರರಿಬ್ಬರು ಇರುವ ತನಕವು ಇರುತ್ತವೆ. ಔರಾದ್‌ ಹಾಗೂ ಕಮಲನಗರ ತಾಲೂಕಿನ ಜನತೆ ನಮ್ಮ ಕುಟುಂಬದ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸ ಸ್ಮರಿಸಿ, ತಂದೆಯವರು ಹಾಕಿಕೊಟ್ಟ ದಾರಿ ಮತ್ತು ನೀಡಿರುವ ಮಾರ್ಗದರ್ಶನದಂತೆ ನಾವಿಬ್ಬರು ಸಹೋದರರು ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

ಜಿಲ್ಲಾ ಸಹಕಾರ ಬ್ಯಾಂಕ್‌ ರೈತರ ಕೃಷಿ ಕ್ಷೇತ್ರಕ್ಕೆ ಉತ್ತೇಜನೆ ನೀಡುವುದರ ಜೊತೆಗೆ ಮಹಿಳೆಯರಿಗೆ ಸ್ವಸಹಾಯ ಗುಂಪುಗಳು ಮಾಡಿ ಸಂಘದ ಹೆಣ್ಣು ಮಕ್ಕಳಿಗೆ ಸಾಲ ನೀಡು ಹಣಕಾಸಿನ ವ್ಯವಹಾರ ಕಲಿಸಿಕೊಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡದೇ ಇದ್ದರೂ ಕೂಡಾ ಸರಿಯಾಗಿ ವ್ಯವಹಾರ ಜ್ಞಾನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಸಹಕಾರ ಬ್ಯಾಂಕಿನ ನೇತೃತ್ವವನ್ನು ವಹಿಸಿಕೊಂಡು ಸಮಯಕ್ಕೆ ಸರಿಯಾಗಿ ರೈತರಿಗೆ ಬೇಕಾದ ಕೃಷಿ ಸಾಲಗಳನ್ನು ಮತ್ತು ರಸಗೊಬ್ಬರ ಪೂರೈಸಲಾಗಿದೆ. ಬ್ಯಾಂಕ್‌ ಕೃಷಿ ಕ್ಷೇತ್ರಕ್ಕೆ ನೀಡಿರುವ ಸುಮಾರು 954 ಕೋಟಿ ರೂ. ಸಾಲವನ್ನು ರೈತರು ಸದುಪಯೋಗ ಪಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಬ್ಯಾಂಕ್‌ ಆರ್ಥಿಕವಾಗಿ ಸದೃಢ ಹೊಂದಿದ್ದು, ರೈತರಿಗೆ ಸಮರ್ಪಕವಾಗಿ ಸಾಲದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರಿಂದಾಗಿಯೇ ಸರ್ಕಾರದ
ಎರಡು ಬಾರಿಯ ಸಾಲಮನ್ನಾ ಯೋಜನೆಯಡಿ ಬೀದರ್‌ ಜಿಲ್ಲೆಯ ರೈತರಿಗೆ ಸುಮಾರು 946 ಕೋಟಿಗಳಷ್ಟು ಸಾಲಮನ್ನಾದ ಲಾಭ ದೊರಕಿದೆ ಎಂದರು.

ಕಳೆದ 13 ವರ್ಷಗಳಿಂದ ಕಮಲನಗರ ಹಾಗೂ ಔರಾದ ತಾಲೂಕಿನ ಜನತೆ ನಮ್ಮ ಹಾಗೂ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿಯನ್ನು ಇಂದು ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇವೆ. 30 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿರುವುದು ನಮ್ಮ ಪುಣ್ಯವಾಗಿದೆ. ಜೀವನದ ಕೊನೆಯ ಉಸಿರು ಇರುವ ತನಕ ಕಾರ್ಯಕರ್ತರ ಕಷ್ಟಸುಖದಲ್ಲಿ ಭಾಗಿಯಾಗಿ ಇರುತ್ತೇವೆ. ಕಾರ್ಯಕತರು ನಮ್ಮ ಪಾಲಿನ ದೇವರು ಇದ್ದಂತೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ತಂದೆಯವರು ಸ್ವಂತಕ್ಕಾಗಿ ಯಾವುದೇ ಸಂಸ್ಥೆಗಳು, ಶಾಲಾ ಕಾಲೇಜುಗಳು ಮಾಡದೇ ಸಹಕಾರ ಕ್ಷೇತ್ರದಿಂದ ಮಾತ್ರ ಸರ್ವಜನರ ಅಭಿವೃದ್ಧಿ ಸಾಧ್ಯವೆಂದು ತೋರಿಸಿಕೊಟ್ಟಿದ್ದಾರೆ. ತಂದೆಯವರು ಇಡೀ ರಾಜ್ಯದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಕಾರದ ತತ್ವದ ಅಡಿಯಲ್ಲೆಯೇ ಡಾ| ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಿಸಿ ಜಿಲ್ಲೆ ಮತ್ತು ಅಕ್ಕಪಕ್ಕದ ಗಡಿರಾಜ್ಯಗಳ ಕುಟುಂಬಗಳಿಗೆ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ನೀಡುತ್ತಿರುವುದು ಸಹಕಾರಿ ಕ್ಷೇತ್ರದಲ್ಲಿ ಏಕೈಕ ಆಸ್ಪತ್ರೆಯಾಗಿದೆ ಎಂದರು.

ಡಾ| ಬಸವಲಿಂಗ ಪಟ್ಟದೇವರು ಮಾತನಾಡಿದರು. ಬಸವರಾಜ ಹೆಬ್ಟಾಳೆ,ಗುಂಡಯ್ಯ ಸ್ವಾಮಿ, ಪ್ರಭುರಾವ ಕಸ್ತೂರೆ, ರಘುನಾಥರಾವ ಕುಲಕರ್ಣಿ, ಅಮೃತಪ್ಪ ಪಾರಾ, ರಮೇಶ ದೇವಕತ್ತೆ, ಭೀಮರಾವ್‌ ಪಾಟೀಲ ಡಿಗ್ಗಿ, ಸುರೇಶ ಪಾಟೀಲ ದಾಬಕಾ, ವಿಠಲರೆಡ್ಡಿ ಬುರಡೆ ಸಾವರಗಾಂವ, 12 ರಾಮದಾಸ್‌ ಚೋಂಡಿಮುಖೇಡ, ಅಶೋಕರಾವ ಮುಳೆ, ಮಾಧವರಾವ್‌ ಪಾಟೀಲ, ಪ್ರಕಾಶ ಘೂಳೆ, ಬಂಡೆಪ್ಪ ಕಂಟೆ, ರವಿ ಮೀಸೆ, ಅಶೋಕ ಶೆಟಕಾರ ಯನಗುಂದಾ, ಶರಣಪ್ಪ ಪಂಚಾಕ್ಷರಿ, ವಿಠಲರೆಡ್ಡಿ ಬುರಡೆ, ಕಾಂಗ್ರೆಸ್‌ ಮುಖಂಡ ಭೀಮಸೇನರಾವ್‌ ಶಿಂಧೆ, ಏಕತಾ ಫೌಂಡೇಶನ್‌ ರವಿ ಸ್ವಾಮಿ, ಲಕ್ಷ ¾ಣರಾವ್‌ ಬುಳ್ಳಾ, ಅರುಣ ಹೋತಪೇಟ, ಅಮಿತ ಕೋಟೆ, ಸಂಗಮೇಶ ಪಾಟೀಲ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.