ಶ್ವಾನಗಳಿಗೆ ರೇಬಿಸ್‌ ಲಸಿಕೆ ಹಾಕಿಸಿ: ಚವ್ಹಾಣ

ಹುಚ್ಚು ನಾಯಿ ಕಚ್ಚಿದರೆ ಕಚ್ಚಿದ ಗಾಯವನ್ನು ಸಾಬೂನು ಹಾಗೂ ನೀರಿನಿಂದ ಚೆನ್ನಾಗಿ ತೊಳೆಯಬೇಕು,

Team Udayavani, Sep 29, 2021, 5:46 PM IST

ಶ್ವಾನಗಳಿಗೆ ರೇಬಿಸ್‌ ಲಸಿಕೆ ಹಾಕಿಸಿ: ಚವ್ಹಾಣ

ಬೀದರ: ವಿಶ್ವ ರೇಬಿಸ್‌ ದಿನಾಚರಣೆ ಅಂಗವಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿರುವ ರೇಬಿಸ್‌ ಲಸಿಕಾ ಅಭಿಯಾನಕ್ಕೆ ಮಂಗಳವಾರ ನಗರದ ಪಾಲಿ ಕ್ಲಿನಿಕ್‌ನಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು, ಜಾಗತಿಕವಾಗಿ ರೇಬಿಸ್‌ ರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆ.28ರಂದು ವಿಶ್ವ ರೇಬಿಸ್‌ ದಿನ ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬಿಸ್‌ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ ಸೆ.30ರವರೆಗೆ 3 ದಿನಗಳ ಕಾಲ ಜರುಗಲಿದ್ದು, ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.

ಮಾರಣಾಂತಿಕವಾಗಿರುವ ರೇಬಿಸ್‌ ರೋಗ ಬಾರದಂತೆ ನೋಡಿಕೊಳ್ಳಬೇಕು. ಮನೆಯಲ್ಲಿ ಮುದ್ದು ಪ್ರಾಣಿಗಳೆಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ಪಶು ಚಿಕಿತ್ಸಾ ಕೇಂದ್ರದಲ್ಲಿ ಲಸಿಕೆ ಹಾಕಿಸಬೇಕು. ಪಶು ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ರೇಬಿಸ್‌ ರೋಗ ಮತ್ತು ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಜೊಲ್ಲು ಸುರಿಸುವಿಕೆ, ಎಲ್ಲರ ಮೇಲೆ ಏರಿಹೋಗಿ ಕಚ್ಚಲು ಪ್ರಯತ್ನಿಸುವುದು, ಕರೆಗೆ ಪ್ರತಿಕ್ರಿಯೆ ನೀಡದಿರುವುದು, ಕ್ರಮೇಣ ಧ್ವನಿಯಲ್ಲಿ ವ್ಯತ್ಯಾಸ, ಗೊಂದಲ ಪಡುವುದು, ಪಾರ್ಶ್ವವಾಯು ಕಾಣಿಸಿ 8-10 ದಿನಗಳಲ್ಲಿ ಸಾವು ಸಂಭವಿಸುವುದು ಉಗ್ರ ಹುಚ್ಚಿನ ಲಕ್ಷಣಗಳು ಮತ್ತು ಮೂಲೆಯಲ್ಲಿ ಮುದುಡಿ ಕೂತಿರುವುದು, ಊಟ ಮಾಡದಿರುವುದು, ಗಂಟಲು ಊದುವಿಕೆ, ತೆರೆದ ಬಾಯಿ ಮುಚ್ಚಲಾಗದೇ ಸಾವನ್ನಪ್ಪುವುದು ಮಂದ ಹುಚ್ಚಿನ ಲಕ್ಷಣಗಳಾಗಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿ ಹೇಳಿದರು.

ಹುಚ್ಚು ನಾಯಿ ಕಚ್ಚಿದರೆ ಕಚ್ಚಿದ ಗಾಯವನ್ನು ಸಾಬೂನು ಹಾಗೂ ನೀರಿನಿಂದ ಚೆನ್ನಾಗಿ ತೊಳೆಯಬೇಕು, ಕಚ್ಚಿದ ಗಾಯಕ್ಕೆ ಡೆಟಾಲ್‌/ ಸಾವಲಾನ್‌/ ಪೊವೀಡೀನ್‌ ಅಯೋಡಿನ್‌ನಂತಹ ರೋಗ ನಿರೋಧಕ ಔಷಧಿ ಹಚ್ಚಬೇಕು. ಯಾವುದೇ ಕಾರಣಕ್ಕೂ ಗಾಯದ ಭಾಗ ಬ್ಯಾಂಡೇಜ್‌/ಬಟ್ಟೆಯಿಂದ ಕಟ್ಟಬಾರದು. ರಕ್ತ ಬಂದಂತಹ ಗಾಯವಾದರೆ ಕೂಡಲೇ ರೇಬಿಸ್‌ ಇಮ್ಯೂನೋಗ್ಲೋಬುಲಿನ್‌ ಚುಚ್ಚುಮದ್ದು ಗಾಯಕ್ಕೆ ಕೊಡಿಸಬೇಕು ಎಂದು ತಿಳಿಸಿದರು.

ಹುಚ್ಚು ನಾಯಿ ಕಡಿತಕ್ಕೊಳಗಾದ ವ್ಯಕ್ತಿ ಅಥವಾ ಜಾನುವಾರುಗಳಿಗೆ 0, 3, 7, 14, 28ನೇ ದಿನಗಳಂದು ತಪ್ಪದೇ ಲಸಿಕೆ ಕೊಡಬೇಕು. ರೋಗದ ಬಗ್ಗೆ ನಿಷ್ಕಾಳಜಿ ವಹಿಸಬಾರದು. ರೋಗ ಬಾರದಂತೆ ತಡೆಯಲು ಲಸಿಕೆಯೇ ಪ್ರಮುಖ ಅಸ್ತ್ರವಾಗಿದೆ ಎಂದರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಲಹಾ ಸಮಿತಿ ಸದಸ್ಯ ಶಿವರಾಜ ಗಂದಗೆ, ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಭೂರೆ, ವೈದ್ಯಾಧಿ ಕಾರಿ ಡಾ| ಬಸವರಾಜ ನಿಟ್ಟೂರೆ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ರೇಬಿಸ್‌ನಿಂದ ನರಳುತ್ತಿರುವ ಪ್ರಾಣಿ ಕಚ್ಚಿದಾಗ/ ನೆಕ್ಕಿದಾಗ ಶರೀರದೊಳಗೆ ರೇಬಿಸ್‌ ವೈರಾಣು ಪ್ರವೇಶಿಸಿ, ರೋಗ ಉಂಟು ಮಾಡುತ್ತದೆ. ರೇಬಿಸ್‌ನಿಂದ ನರಳುತ್ತಿರುವ ಪ್ರಾಣಿಯ ಜೊಲ್ಲಿನಿಂದ ರೇಬಿಸ್‌ ವೈರಾಣು ಇತರೆ ಪ್ರಾಣಿಗಳಿಗೆ ಹರಡುತ್ತದೆ. ನಾಯಿ, ಬೆಕ್ಕು, ಕುರಿ, ಮೇಕೆ, ಹಸು, ಎಮ್ಮೆ, ಕೋತಿ, ತೋಳ, ನರಿ, ಕರಡಿ, ಮುಂಗುಸಿ, ಹಂದಿ, ಕತ್ತೆ, ಕುದುರೆ ಮತ್ತು ಒಂಟೆಗಳಿಂದ ರೇಬಿಸ್‌ ಹರಡುತ್ತದೆ. ಆದರೆ ಭಾರತದಲ್ಲಿ ಬಹುತೇಕ ಜನರಿಗೆ ಹುಚ್ಚುನಾಯಿ ಕಡಿತದಿಂದ ರೇಬಿಸ್‌ ಹರಡುತ್ತದೆ.
ಪ್ರಭು ಚವ್ಹಾಣ, ಉಸ್ತುವಾರಿ ಸಚಿವ

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.