ರಾಹುಲ್‌ ಗಾಂಧಿಗಿಲ್ಲ ರಾಜ್ಯದ ಕಾಳಜಿ: ಬಂಡೆಪ್ಪ


Team Udayavani, Apr 6, 2018, 4:24 PM IST

bid-2.jpg

ಹುಮನಾಬಾದ: ರಾಜ್ಯದ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬರುವ ರಾಹುಲ್‌ ಗಾಂಧಿ ಯಾವತ್ತಾದರು ಕರ್ನಾಟಕದ ಬಗ್ಗೆ ಮಾತಾಡಿದ್ದಾರೆಯೇ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಪ್ರಶ್ನಿಸಿದರು. ಪಟ್ಟಣದ ಸ್ಟಾರ್‌ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್‌ ಹಾಗೂ ಬಿಎಸ್‌ಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ರಾಜ್ಯಕ್ಕೆ ಬರುವ ರಾಹುಲ್‌ ಗಾಂಧಿ ಯಾವತ್ತು ರಾಜ್ಯದಲ್ಲಿನ ಸಮಸ್ಯೆಗಳ ಕುರಿತು ಮಾತನಾಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡದೇ ಕೇವಲ ಕೇಂದ್ರ ಸರಕಾರದ ವಿರುದ್ಧ ಟೀಕಿಸುವುದನ್ನೇ ರೂಢಿಸಿಕೊಂಡಿದ್ದಾರೆ. ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳುವ ರಾಹುಲ್‌ ಗಾಂಧಿ  ಕರ್ನಾಟಕದಲ್ಲಿ ಅವರದೇ ಸರ್ಕಾರ ಇದ್ದರೂ ರೈತರ ಬಗ್ಗೆ ಕಾಳಜಿ ತೋರಿಲ್ಲ.

ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ. ವಿವಿಧ ಷರತ್ತು ಹಾಕಿ 50 ಸಾವಿರ ರೂ. ಸಾಲ ಮನ್ನಾ ಮಾಡಿದ ಕಾಂಗ್ರೆಸ್‌ ಸರ್ಕಾರದ ಯೋಜನೆ ಬಹುತೇಕ ರೈತರಿಗೆ ಲಾಭ ನೀಡಿಲ್ಲ. ಕೇವಲ ಚುನಾವಣೆಗಾಗಿ ಯೋಜನೆ ಪ್ರಕಟಸಿ ಜನರನ್ನು ಮರಳು ಮಾಡಲಾಗಿದೆ ಎಂದು ಆರೋಪಿಸಿದರು.

ಜೆಡಿಎಸ್‌ಗೆ ಅಧಿಕಾರ ನೀಡಿದ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಅಲ್ಲದೇ ಸರ್ಕಾರ ಬಂದ ಆರು ತಿಂಗಳಲ್ಲಿ ಗ್ರಾಮೀಣ ಭಾಗದಲ್ಲಿ 24 ಗಂಟೆ ವಿದ್ಯುತ್‌ ಪೂರೈಸುವ ಕೆಲಸ ಮಾಡುವುದಾಗಿ ಹೇಳಿದ್ದಾರೆ. 

ಜೆಡಿಎಸ್‌ ಕನ್ನಡ ಹಿತಕ್ಕಾಗಿ, ಕನ್ನಡಿಗರ ಧ್ವನಿಯಾಗಿ, ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುವ ಏಕೈಕ ಪಕ್ಷವಾಗಿದೆ. ದೇಶದಲ್ಲಿ ಈಗ ರಾಷ್ಟ್ರೀಯ ಪಕ್ಷಗಳನ್ನು ಜನರು ನಂಬುತ್ತಿಲ್ಲ. ಬದಲಾಗಿ ಪ್ರಾದೇಶಿಕ ಪಕ್ಷಗಳ ಕಡೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಹಾಗೂ ಬಿಎಸ್‌ಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಜನರು ಮುಂದಾಗಬೇಕು ಎಂದು ಮನವಿ ಮಾಡಿದರು.
 
ಜೆಡಿಎಸ್‌ ಅಭ್ಯರ್ಥಿ ನಸಿಮೊದ್ದೀನ್‌ ಪಟೇಲ್‌ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು ಅರ್ಹ ಬಡ ಫಲಾನುಭವಿಗಳಿಗೆ ತಲುಪಿಲ್ಲ. ಕ್ಷೇತ್ರದಲ್ಲಿ ಯುವಕರಿಗೆ ಉದ್ಯೋಗ ಕೂಡ ಇಲ್ಲ. ತೆಲಂಗಾಣ ರಾಜ್ಯದ ಜಹಿರಾಬಾದ್‌ ಒಂದು ತಾಲೂಕು ಕೇಂದ್ರವಾಗಿದೆ. ಅದು ಕೂಡ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಅದೇ ಹೆದ್ದಾರಿಗೆ ಅಂಟಿಕೊಂಡಿರುವ ಹುಮನಾಬಾದ ಕೂಡ ಒಂದು ತಾಲೂಕು ಕೇಂದ್ರವಾಗಿದ್ದು, ಇಲ್ಲಿ ಯಾವುದೇ ದೊಡ್ಡ ಕೈಗಾರಿಕೆಗಳು ಇಲ್ಲ. ಜಹಿರಾಬಾದ್‌ನಲ್ಲಿ ವಿವಿಧ ಕೈಗಾರಿಕಾ ಕಂಪನಿಗಳು ಸಾವಿರಾರೂ ಜನರಿಗೆ ಉದ್ಯೋಗ ನೀಡುತ್ತಿದೆ. ಈ ಬಾರಿ ಜೆಡಿಎಸ್‌ಗೆ ಬೆಂಬಲ ನೀಡಿದರೆ ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಬಿಎಸ್‌ಪಿ ಮುಖಂಡ ಎಂ. ಮುನಿಯಪ್ಪ, ಪಿ.ಐ. ಜೋಸೆಫ್‌, ಮಹೇಶ ಅಗಡಿ, ವಿಠ್ಠಲರಾವ ಸೂರ್ಯವಂಶಿ, ವಿಠ್ಠಲನಾಯಕ ಡಾಕುಳಗಿ, ಶಿವರಾಜ ಹುಲಿ, ರೀಯಾಜೋದ್ದಿನ್‌, ದತ್ತು ಸೂರ್ಯವಂಶಿ, ದೇವೇಂದ್ರ ಗದರ್‌, ಬಬನ್‌ ಬಿರಾದಾರ, ಶಂಕರ ಪ್ರಿಯಾ, ಅಬ್ದುಲ್‌ ರೇಹಮಾನ್‌ ಗೋರೆಮಿಯ್ನಾ, ಗೌತಮ ಸೇಡೋಳ, ರವಿ ಘವಾಳಕರ್‌, ಲಕ್ಷ್ಮೀಪುತ್ರ ಮಾಳಗೆ, ಶಿವಪುತ್ರ ಮಾಳಗೆ, ಮುಜೀಬೋದ್ದಿನ್‌ ಪಟೇಲ್‌, ವೀರೇಶ ಸೀಗಿ ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.