![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮಳೆ ಹಾನಿ ಜಂಟಿ ಸಮೀಕ್ಷೆ
Team Udayavani, Sep 18, 2020, 7:09 PM IST
![ಮಳೆ ಹಾನಿ ಜಂಟಿ ಸಮೀಕ್ಷೆ](https://www.udayavani.com/wp-content/uploads/2020/09/bidara-tdy-1-2-620x372.jpg)
ಬೀದರ: ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಹಿನ್ನೆಲೆ ಜಿಲ್ಲೆಯ 5 ತಾಲೂಕುಗಳನ್ನು ಅತಿವೃಷ್ಟಿ/ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಎನ್ ಡಿಆರ್ಎಫ್/ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತ ಆದೇಶಿಸಿದೆ ಎಂದು ಡಿಸಿ ಆರ್. ರಾಮಚಂದ್ರನ್ ತಿಳಿಸಿದರು.
ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌವರ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಬೆಳೆ, ಜಾನುವಾರುಗಳು, ಮನೆ, ರಸ್ತೆ-ಸೇತುವೆಗಳು ಹಾನಿಯಾಗಿವೆ. ಆದ್ದರಿಂದ ಮತ್ತೂಮ್ಮೆ ಜಂಟಿ ಸಮೀಕ್ಷೆ ನಡೆಸಲಾಗುವುದು ಎಂದರು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2,12,530 ರೈತರು ನೋಂದಣಿ ಮಾಡಿಸಿದ್ದು, ಜಿಲ್ಲೆಯು ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ಆಗಸ್ಟ್ ವರೆಗೆ ನರೇಗಾ ಯೋಜನೆಯಡಿ 25,276 ವಲಸೆಕುಟುಂಬಗಳಿಗೆ ಜಾಬ್ ಕಾರ್ಡ್ ವಿತರಿಸಲಾಗಿದೆ. ವಲಸೆ ಕೂಲಿಕಾರ್ಮಿಕರಲ್ಲಿ 15,548 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ. ಲಾಕ್ಡೌನ್ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೀಡಾದ ರೈತರಿಗೆ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ 5000 ರೂ.ನಂತೆ ಸುಮಾರು 1095 ಫಲಾನುಭವಿ ರೈತರಿಗೆ 54.75 ಲಕ್ಷ ರೂ. ನೇರ ವರ್ಗಾವಣೆ ಮೂಲಕ ಜಮೆ ಮಾಡಲಾಗಿದೆ ಎಂದರು.
ಜಿಲ್ಲೆಯ ಪ್ರತಿಭಾವಂತ ಬಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀದರ ಜಿಲ್ಲೆಯ ಅನುದಾನಿತ ಹಾಗೂ ಅನುದಾನರಹಿತ ಪಿಯುಸಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಎರಡೂ ವರ್ಷಗಳಿಗೂ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ
63 ಕಾಲೇಜಿನವರು 803 ಉಚಿತ ಪಿಯುಸಿ ಸೀಟು ನೀಡಿದ್ದು, ಈ ಪೈಕಿ 665 ಸೀಟುಗಳನ್ನು ವಿದ್ಯಾರ್ಥಿಗಳು ಉಚಿತವಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಕಲ್ಯಾಣ ಎನ್ನುವ ಪದವೇ ಅಭಿವೃದ್ಧಿ ಮತ್ತು ಪ್ರಗತಿ ಸೂಚಕ. ಹೀಗಾಗಿ, ಈ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡ ನಾವುಗಳು ನಮ್ಮ ಚಿಂತನೆ ಸದಾಕಾಲ ಅಭಿವೃದ್ಧಿ ಮತ್ತು ಪ್ರಗತಿ ಪಥದತ್ತ ಹರಿಬಿಡೋಣ. ಈ ಕಲ್ಯಾಣ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಬೀದರ್ ಜಿಲ್ಲೆಯ ಪಾತ್ರ ಹಿರಿದಾಗಿದೆ. ಅನೇಕ ಹಿರಿಯರು ವಿಮೋಚನೆಗಾಗಿ ಹೋರಾಡಿದ್ದಾರೆ. ಅವರ ತ್ಯಾಗ-ಬಲಿದಾನ ಎಲ್ಲರೂ ಸ್ಮರಿಸಲೇಬೇಕು. ಜಿಲ್ಲೆಯ ಹೋರಾಟಗಾರರ ಸ್ಫೂರ್ತಿ ಇಂದಿನ ಪೀಳಿಗೆಗೆ ಪ್ರೇರಣಾದಾಯಕ ಎಂದರು.
ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೋವಿಡ್ ಹೋಂ ಕ್ವಾರಂಟೈನ್ನಲ್ಲಿ ಇರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಡಿಸಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಗಳನ್ನು ಗೌರವಿಸಲಾಯಿತು.
ಈ ವೇಳೆ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ,
ಶಾಸಕರಾದ ಬಂಡೆಪ್ಪ ಖಾಶಂಪುರ್, ರಹೀಮ್ ಖಾನ್, ಎಂಎಲ್ಸಿ ವಿಜಯಸಿಂಗ್, ಜಿಪಂ ಉಪಾಧ್ಯಕ್ಷ ಲಕ್ಷ್ಮಣ ಬುಳ್ಳಾ, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ, ಜಿಪಂ ಸಿಇಒಗ್ಯಾನೇಂದ್ರಕುಮಾರ ಗಂಗ್ವಾರ್, ಎಸ್ಪಿ ನಾಗೇಶ್ ಡಿ.ಎಲ್., ಎಡಿಸಿ ರುದ್ರೇಶ್ ಗಾಳಿ, ಸಹಾಯಕ ಆಯುಕ್ತೆ ಗರೀಮಾ ಪನ್ವಾರ್, ಎಎಸ್ಪಿ ಡಾ. ಗೋಪಾಲ್ ಬ್ಯಾಕೋಡ್ ಇದ್ದರು.
ದ್ವಿತೀಯ ಪಿಯುಸಿ-ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೀದರ ಜಿಲ್ಲ ಅತ್ಯುತ್ತಮ ಸಾಧನೆ ಮಾಡಿದೆ. ಪಿಯುಸಿಯಲ್ಲಿ ಶೇ. 64.61 ಫಲಿತಾಂಶದೊಂದಿಗೆ 18ನೇ ಸ್ಥಾನಕ್ಕೆ, ಎಸ್ಸೆಸ್ಸೆಲ್ಸಿಯಲ್ಲಿನಲ್ಲಿ 24ನೇ ಸ್ಥಾನ ಪಡೆದಿದೆ. ಮುಂದೆಯೂ ಉತ್ತಮ ಫಲಿತಾಂಶ ದಾಖಲಿಸಲು ಪ್ರಯತ್ನಿಸಲಾಗುವುದು. ಜಿಲ್ಲೆಯ ವಿದ್ಯಾರ್ಥಿಗಳು ಯುಪಿಎಸ್ಸಿ ಪರೀಕ್ಷೆ ಕೂಡ ಪಾಸು ಮಾಡಲಿ ಎಂಬ ಸದುದ್ದೇಶದಿಂದ ಸೆ.26ಕ್ಕೆ ನಾಗರಿಕ ಸೇವಾ ಪರೀಕ್ಷೆ ಅರಿವು ಕಾರ್ಯಕ್ರಮ ರೂಪಿಸಲಾಗಿದೆ. ಆರ್. ರಾಮಚಂದ್ರನ್, ಜಿಲ್ಲಾಧಿಕಾರಿ, ಬೀದರ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.